ಸರ್ವಪಲ್ಲಿ ರಾಧಾಕೃಷ್ಣನ್

ಭಾರತ ದೇಶದ ಬಡ ಕುಟುಂಬದಲ್ಲಿ ಜನಿಸಿ ಇಚ್ಚಾಶಕ್ತಿ,
ಕ್ರಿಯಾಶಕ್ತಿ ಮತ್ತು ಜ್ಞಾನ ಶಕ್ತಿ ಇದ್ದರೆ
ಏನು ಬೇಕಾದರು ಸಾಧಿಸಬಹುದು ಎನ್ನುವುದಕ್ಕೆ ಬಹುದೊಡ್ಡ
ಉದಾಹರಣೆಯಾಗಿ ನಿಲ್ಲುತ್ತಾರೆ ನಮ್ಮ ಶಿಕ್ಷಕ, ಶಿಕ್ಷಣ ತಜ್ಞ,
ತತ್ವಜ್ಞಾನಿ ಮತ್ತು ಭಾರತ ಕಂಡ ಮೊದಲ
ಉಪರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್.
ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ. ನಿಷ್ಠೆ
ಹೊಂದಿದ್ದ, ಸ್ವತಃ ಶಿಕ್ಷಕರಾಗಿ
ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ
ಕಂಡ ಅಗ್ರಗಣ್ಯ ಶಿಕ್ಷಕರು. ಅಂತಲೇ, ಅವರ
ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಾ ಅವರು ಗೈದಿರುವ
ಶಿಕ್ಷಣ ಕ್ಷೇತ್ರಕ್ಕೆ ಮತ್ತು ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಈ
ಹಿನ್ನೆಲೆಯಲ್ಲಿ ಅವರ ಜೀವನ ಕುರಿತಾದ
ಒಂದು ಇಣುಕುನೋಟ.
ಸರ್ವಪಲ್ಲಿ ರಾಧಾಕೃಷ್ಣನ್ ಜನಿಸಿದ್ದು ದಕ್ಷಿಣ ಭಾರತದ ತಮಿಳುನಾಡಿನ
ತಿರುತ್ತಣಿ ಎಂಬಲ್ಲಿ ಸೆಪ್ಟೆಂಬರ್ 5, 1888ರಲ್ಲಿ.
ಸರ್ವಪಲ್ಲಿ ಎನ್ನುವುದು ಮನೆತನದ ಹೆಸರಾದರೆ, ರಾಧಾಕೃಷ್ಣನ್
ಎನ್ನುವುದು ಅವರ ತಂದೆ-ತಾಯಿ ಇಟ್ಟ ಮುದ್ದಿನ ಹೆಸರು.
ತಂದೆ ಸರ್ವಪಲ್ಲಿ ವೀರಸ್ವಾಮಿ
ಅವರು ಜಮೀನ್ದಾರರ ಬಳಿ ದಿನಗೂಲಿ ನೌಕರರಾಗಿ
ಸೇವೆಗೈಯುತ್ತಾ ಮಗನ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು. ಬರುವ
ದಿನಗೂಲಿಯಲ್ಲಿ ತುಂಬು ಕುಟುಂಬವನ್ನು ಸಾಗಿಸಲು ಕಷ್ಟವಾದ
ಸಂದರ್ಭದಲ್ಲಿ ರಾಧಾಕೃಷ್ಣನ್ಗೆ ಓದಬೇಕೆನ್ನುವ ಅಪಾರ
ಹಂಬಲ, ಸ್ಕಾಲರ್ಶಿಪ್ ಹಣದಲ್ಲಿಯೇ ಎಲ್ಲ ಪ್ರಾಥಮಿಕ
ಶಿಕ್ಷಣ ಮತ್ತು ಪ್ರೌಢಶಾಲೆಯ ಶಿಕ್ಷಣವನ್ನು ಮುಗಿಸಿದ ರಾಧಾಕೃಷ್ಣನ್,
ಮದ್ರಾಸ್ (ಈಗಿನ ಚೆನ್ನೈ) ಕ್ರಿಶ್ಚಿಯನ್ ಕಾಲೇಜ್ನಲ್ಲಿ 'ತತ್ವಜ್ಞಾನ'
ವಿಷಯದ ಮೇಲೆ ಬಿ.ಎ ಮತ್ತು ಎಂ.ಎ.
ಪದವಿಯನ್ನು ಸಂಪಾದಿಸಿಕೊಂಡರು.
ಸ್ನಾತಕೋತ್ತರ ಪದವಿಯಲ್ಲಿ ರಾಧಾಕೃಷ್ಣನ್ ಮಂಡಿಸಿದ
ಪ್ರಬಂಧ 'ದಿ ಎಥಿಕ್ಸ್ ಆಫ್ ವೇದಾಂತ್' ಅವರ ಬದುಕಿನ
ದಿಕ್ಕನ್ನೇ ಬದಲಾಯಿಸಿತು. ಕೇವಲ 20 ವರ್ಷದ ಬಾಲಕನ
ತಲೆಯಲ್ಲಿದ್ದ ಸಿದ್ಧಾಂತ, ವೇದಾಂತ
ವಿಚಾರಗಳು ಮುಂದೊಂದು ದಿನ
ಅವರನ್ನು ದೊಡ್ಡ ಮಟ್ಟಕ್ಕೆ
ಕೊಂಡೊಯ್ಯುತ್ತವೆ
ಎಂದು ಅವರ ಕಾಲೇಜು ಶಿಕ್ಷಕರು ಆಗಲೇ ಗುರುತಿಸಿದ್ದರು.
ವೆಲ್ಲೂರಿನಲ್ಲಿರುವಾಗಲೇ ಕೇವಲ 16ನೇ ವಯಸ್ಸಿನಲ್ಲಿ ಶಿವಕಾಮುಮ್ಮ
ಎಂಬುವವರನ್ನು ಬಾಳಸಂಗಾತಿಯನ್ನಾಗಿಸಿಕೊಂಡ
ರಾಧಾಕೃಷ್ಣನ್, 1909ರಲ್ಲಿ ಮದ್ರಾಸ್ ಪ್ರೆಸಿಡೆನ್ಸಿ ಕಾಲೇಜಿನಲ್ಲಿ
ಸಹಾಯಕ ಉಪನ್ಯಾಸಕರಾಗಿ ಅಚ್ಚುಮೆಚ್ಚಿನ ಶಿಕ್ಷಕ
ಸೇವೆಯನ್ನಾರಂಭಿಸಿದರು.
ಭಾರತದ ಸನಾತನ ಧರ್ಮವಾದ ಹಿಂದೂ ಧರ್ಮದ ಸಾರ, ವೇದ,
ಉಪನಿಷತ್, ಜೈನ ತತ್ವಜ್ಞಾನ, ಶಂಕರ ರಾಮಾನುಜ, ಮಧ್ವ,
ಪ್ಲೂಟೋ, ಪ್ಲಾಟಿನಸ್, ಕಾಂತ್, ಬ್ರ್ಯಾಡ್ಲೆ ಮುಂತಾದ
ಮಹನೀಯರ ತತ್ವಜ್ಞಾನವನ್ನು ಆಳವಾಗಿ ಅಧ್ಯಯನ
ಕೈಗೊಂಡರು. ಸತತ ಅಧ್ಯಯನ ಮತ್ತು ಕಠಿಣ
ಪರಿಶ್ರಮದಿಂದ ಹಂತ ಹಂತವಾಗಿ
ಮೇಲೇರುತ್ತಾ ಮುನ್ನಡೆದ ರಾಧಾಕೃಷ್ಣನ್, 1918ರಲ್ಲಿ
ಮೈಸೂರು ವಿಶ್ವವಿದ್ಯಾಲಯದ ತತ್ವಜ್ಞಾನ ವಿಭಾಗದ
ಉಪನ್ಯಾಸಕರಾಗಿ ಆಯ್ಕೆಯಾದರು. ದೇಶ ವಿದೇಶಗಳ ವಿವಿಧ
ತತ್ವಜ್ಞಾನ ಪತ್ರಿಕೆಗಳಲ್ಲಿ ತಮ್ಮ ಆಳ ಮತ್ತು ಹರಿತವಾದ
ವಿಚಾರಗಳನ್ನು ಹೊಂದಿದ್ದ
ಲೇಖನಗಳನ್ನು ಬರೆಯುತ್ತಾ ಸಾಗಿದ ರಾಧಾಕೃಷ್ಣನ್, 'ದಿ ಫಿಲಾಸಫಿ ಆಫ್
ರವೀಂದ್ರನಾಥ್ ಠ್ಯಾಗೋರ್' ಎಂಬ
ಮೊದಲ ಪುಸ್ತಕ ಬರೆದರು.
ಭಾರತೀಯ ಪುಸ್ತಕೋದ್ಯಮದಲ್ಲಿ ಮಿಂಚುತ್ತಾ ಸಾಗಿದ
ಇವರು, ಮುಂದೆ 'ಜಿನೀನ್ ಮೆನಿಫೆಸ್ಟೇಷನ್ ಆಫ್
ಇಂಡಿಯನ್ ಸ್ಪಿರಿಟ್' ಮತ್ತು 'ದಿ ರೀಜನ್ ಆಫ್
ರಿಲಿಜಿಯನ್ ಇನ್ ಕಾಂಟೆಂಪರರಿ ಫಿಲಾಸಫಿ' ಎನ್ನುವ
ಪುಸ್ತಕಗಳನ್ನು ಸಹ ಬರೆದಿದ್ದಾರೆ.
' Do not sit like a Rock,
Do work as a Clock'
ಎನ್ನುವ ಮಾತಿಗೆ ಉತ್ತಮ ನಿದರ್ಶನವಾದ ರಾಧಾಕೃಷ್ಣನ್, ತಮ್ಮ
ಅಪಾರವಾದ ಪಾಂಡಿತ್ಯದಿಂದಾಗಿ ದೇಶವಿದೇಶಗಳಲ್ಲಿ
ಮನೆಮಾತಾಗಿದ್ದರು. ಇವರ ತತ್ವಜ್ಞಾನಕ್ಕೆ ಶರಣಾದ ಆಕ್ಸ್ಫರ್ಡ್
ವಿಶ್ವವಿದ್ಯಾಲಯ 'ಧರ್ಮ ಮತ್ತು ನೀತಿಶಾಸ್ತ್ರ'
ಎನ್ನುವ ವಿಷಯದ ಮೇಲೆ ಉಪನ್ಯಾಸ ನೀಡುವಂತೆ
ಆಹ್ವಾನಿಸಿತು. ಸಪ್ತಸಾಗರಗಳಾಚೆ ಭಾರತದ ಕೀರ್ತಿ
ಪತಾಕೆಯನ್ನು ಎತ್ತಿ ಹಿಡಿದು, ಭಾರತೀಯ
ಸ್ವಾತಂತ್ರ್ಯಕ್ಕಾಗಿಯೂ ಹೋರಾಡಿದ ರಾಧಾಕೃಷ್ಣನ್,
ಭಾರತೀಯ ಸನಾತನ ಧರ್ಮ, ತತ್ವಜ್ಞಾನ
ಕುರಿತು ವಿದೇಶಿಯರಿಗೆ ಮನಮುಟ್ಟುವಂತೆ ಮನವರಿಕೆ
ಮಾಡಿಕೊಟ್ಟು ಬಂದರು.
1931 ರಲ್ಲಿ ಆಂಧ್ರ ವಿಶ್ವವಿದ್ಯಾಲಯದ
ಉಪಕುಲಪತಿಗಳಾಗಿ ಆಯ್ಕೆಯಾದ ರಾಧಾಕೃಷ್ಣನ್, ಐದು ವರ್ಷಗಳ ಕಾಲ
ತಾವೊಬ್ಬ ಉತ್ತಮ ಶಿಕ್ಷಣ
ಸುಧಾರಕರೂ ಹೌದು ಎಂಬುದನ್ನು ತಮ್ಮ ಸೇವಾವಧಿಯಲ್ಲಿ
ತೋರಿಸಿಕೊಟ್ಟರು. ಇವರ ಅವಧಿಯಲ್ಲಿ
ವಿಶ್ವವಿದ್ಯಾಲಯ ಅನೇಕ ಶಿಕ್ಷಣ ಮತ್ತು ಶಿಕ್ಷಣೇತರ
ಸುಧಾರಣೆಗಳನ್ನು ಕಂಡಿತು.
1939 ರಲ್ಲಿ ಬನಾರಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ
ಆಯ್ಕೆಯಾದರು. ಅಲ್ಲಿಯೂ ತಮ್ಮ ಅನುಭವವನ್ನು ಧಾರೆ
ಎರೆಯುವ ಮೂಲಕ ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗೆ
ಶ್ರಮಿಸಿದ ರಾಧಾಕೃಷ್ಣನ್ ಅವರನ್ನು, 1948ರಲ್ಲಿ
ವಿಶ್ವವಿದ್ಯಾಲಯ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ
ಸರಕಾರ ನೇಮಿಸಿತು. 1949ರಲ್ಲಿ ಸೋವಿಯತ್ ರಷ್ಯಾಕ್ಕೆ ಭಾರತದ
ರಾಯಭಾರಿಯಾಗಿ ನೇಮಕಗೊಂಡ ರಾಧಾಕೃಷ್ಣನ್,
ಸ್ಟಾಲಿನ್ನಂತಹ ಮೇಧಾವಿಗಳ ಸರಿಸಮನಾಗಿ ನಿಲ್ಲುವ
ವ್ಯಕ್ತಿತ್ವವನ್ನು ಬೆಳೆಸಿಕೊಂಡರು.

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023