APJ Abdul Kalam Life History

●ಎ.ಪಿ.ಜೆ. ಅಬ್ದುಲ್ ಕಲಾಮ್ ೧೧ನೇ ಭಾರತದ ರಾಷ್ಟ್ರಪತಿ
ವೈಯುಕ್ತಿಕ ಮಾಹಿತಿ
(PSGadyal Teacher Vijayapur).

●ಜನನ ಅವುಲ್ ಫಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಮ್
೧೫ -೧೦ -೧೯೩೧

●ಮರಣ ೨೭ ಜುಲೈ ೨೦೧೫
ಶಿಲ್ಲಾಂಗ್

●ಅಭ್ಯಸಿಸಿದ ವಿದ್ಯಾಪೀಠ ಸೇಂಟ್ ಜೋಸೆಫ್ಸ್ ಕಾಲೇಜ್, ತಿರುಚಿರಾಪಳ್ಳಿ

●ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಉದ್ಯೋಗ ಉಪನ್ಯಾಸಕ, ಲೇಖಕ, ವಿಜ್ಞಾನಿ, ರಾಷ್ಟ್ರಪತಿ

●ಅವುಲ್ ಫಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ ಓರ್ವ ವೈಮಾನೀಕ ಇಂಜಿನೀಯರ್ , ಪ್ರಾಧ್ಯಾಪಕ ಹಾಗೂ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಅಂಡ್ ಟೆಕ್ನಾಲಜಿ, ತಿರುವನಂತಪುರಂ (ಐ.ಐ.ಎಸ್.ಟಿ) ವೊದಲ ಛಾನ್ಸ್ಲರ್(ಮೂಖ್ಯೊಪಾಧ್ಯಯ), ಜುಲೈ ೨೫, ೨೦೦೨ ರಿಂದ ಜುಲೈ ೨೫ ೨೦೦೭ ರ ತನಕ ಭಾರತದ ರಾಷ್ಟ್ರಪತಿಗಳಾಗಿದ್ದರು. ಇವರು ಭಾರತದ ಹನ್ನೊಂದನೇ ರಾಷ್ಟ್ರಪತಿಗಳಾಗಿ ಜುಲೈ ೨೫, ೨೦೦೨ರಂದು ಅಧಿಕಾರ ಸ್ವೀಕರಿಸಿದರು. ಭಾರತ ಸರ್ಕಾರವು ೧೯೯೭ ರಲ್ಲಿ ಭಾರತರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

●ಪರಿಚಯ

ರಾಷ್ತ್ರಪತಿ ಆಗುವುದಕ್ಕೂ ಮುನ್ನ ಇವರು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಆರ್ಗನೈಜೇಷನ್ : ಡಿ.ಆರ್.ಡಿ.ಓ.) ಮತ್ತು ಇಸ್ರೊದಲ್ಲಿ ವೈಮಾನೀಕ ಇಂಜಿನೀಯರ್ ಆಗಿ ಸೇವೆ ಸಲ್ಲಿಸೀದರು. ಇವರು ಭಾರತಕ್ಕೆ ಕ್ಷಿಪಣಿ ಹಾಗೂ ರಾಕೆಟ್ ತಾಂತ್ರಜ್ಞಾನವನ್ನು ತಯಾರಿಸಿರುವ ಕಾರಣ ,ಕ್ಷಿಪಣಿಗಳ ಜನಕ (ಮಿಸೈಲ್ ಮ್ಯಾನ್ ಆಫ್ ಇಂಡಿಯ)ಎ೦ದು ಕರೆಯುತ್ತಾರೆ.
ಸನ್ ೧೯೯೮ರಲ್ಲಿ ಪೋಖ್ರನ್-೨ ನ್ಯುಕ್ಲಿಯರ್ ಪರೀಕ್ಷೆಯಲ್ಲಿ, ತಾಂತ್ರಿಕವಾಗಿ ,ರಾಜಕೀಯವಾಗಿ ಪ್ರಧಾನ ಪಾತ್ರವನ್ನು ವಹಿಸಿದರು. ಆದರೂ ಇವರು ಅಪವಾದಗಳಿಂದ ದೂರವಿರಲ್ಲಿಲ್ಲ, ಕೇವಲ ಹೋಮಿ ಜಹಂಗೀರ್ ಭಾಬ ಮತ್ತು ವಿಕ್ರಮ್ ಸಾರಭಾಯಿರವರ ಕೆಲಸವನ್ನು ಮುಂದುವರಿಸಿದರೆಂದು ಹಾಗು ನೂಕ್ಲಿಯರ್ ವಿಜ್ಞಾನದಲ್ಲಿ ಪ್ರಾವಿಣ್ಯವಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟರು.

ಪ್ರಸ್ತುತ ಈ ಮಹಾನ್ ಚೇತನವು ಸಂದರ್ಶಕ ಪ್ರಾಧ್ಯಾಪಕರಾಗಿ ಐ.ಐ.ಎಮ್, ಅಹೆಮ್ದಾಬಾದ್ ಮತ್ತು ಐ.ಐ.ಎಮ್, ಇಂದೋರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ [೧].
ಅಣ್ಣಾ ವಿಶ್ವವಿದ್ಯಾಯಲಯ(ಚೆನ್ನೈ), ಜೆ.ಎಸ್.ಎಸ್ ವಿಶ್ವವಿದ್ಯಾಲಯ (ಮೈಸೂರು) ಮತ್ತು ಅನೇಕ ಸಂಶೋಧನಾಲಯದಲ್ಲಿ ವೈಮಾನಿಕ ಪ್ರಾದ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಭ್ರಷ್ಟಾಚಾರದ ಮೇಲೆ ೨೦೧೧ರ ಮೇ ನಲ್ಲಿ ತಮ್ಮ ಧ್ವನಿಯೆತ್ತಿದ್ದರು. ಕಲಾಮ್ ಓರ್ವ ವಿಜ್ಞಾನಿಯು, ತಮಿಳು ಕವಿಯು ಹಾಗೂ ವೀಣಾ ವಾದ್ಯಗಾರರು ಆಗಿದ್ದಾರೆ.

●ಬಾಲ್ಯ ಮತ್ತು ವಿದ್ಯಾಭ್ಯಾಸ

ಇವರ ಜನನ ಅಕ್ಟೋಬರ್ ೧೫, ೧೯೩೧ ರಂದು ತಮಿಳುನಾಡಿನ ರಾಮೇಶ್ವರಂನ ಧನುಷ್ಕೋಟಿಯಲ್ಲಿ ಆಯಿತು[೨]. ಇವರ ಬಾಲ್ಯವು ಬಹಳ ಆರ್ಥಿಕ ಬಡತನದಿಂದ ಸಾಗಿತ್ತು. ಮುಂಜಾನೆ ೪:೦೦ ಘಂಟೆಗೆ ಎದ್ದು ದಿನದ ಪಾಠಗಳನ್ನು ಓದಿ ಶಾಲೆಗೆ ಹೋಗುತ್ತಿದ್ದರು. ಶಾಲೆಯಲ್ಲಿ ಗಣಿತವು ಮೊದಲ ಪಾಠವಾಗಿತ್ತು. ಶಾಲೆ ಮುಗಿದ ನಂತರ ತಮ್ಮ ಸಂಸೂದ್ದಿನ ಕಲಾಂ ಜೊತೆಗೆ ದಿನಪತ್ರಿಕೆ ಮಾರಲು ಹೋಗುತ್ತಿದ್ದರು.

ಇದರಿಂದ ಬಂದ ಹಣದಿಂದ ತಂದೆಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದ್ದರು. ಕಲಾಂ ಓದಿನಲ್ಲಿ ಸಾಧಾರಣ ವಿದ್ಯಾರ್ಥಿಯಾಗಿದ್ದರೂ, ತನ್ನ ಬುದ್ದಿವಂತಿಕೆ ಹಾಗೂ ಕಠಿಣ ಪರಿಶ್ರಮದಿ೦ದ ವಿದ್ಯಾಭ್ಯಾಸವನ್ನು ಮುಂದುವರಿಸಿದರು. ಗಣಿತಶಾಸ್ತ್ರವನ್ನು ತುಂಬಾ ಆಸಕ್ತಿಯಿಂದ ಕಲಿಯು ತ್ತಿದ್ದರು.[೩]ತಮ್ಮ ಪ್ರಾಥಮಿಕ ಶಿಕ್ಷಣದ ನಂತರ, ಕಲಾಂ ಸಂತ ಜೋಸೆಫ್ ಕಾಲೇಜಿನಲ್ಲಿ ಭೌತಶಾಸ್ತ್ರದಲ್ಲಿ ವಿದ್ಯಾಭ್ಯಾಸ ಮುಂದುವರೆಸಿದರು. ಆದರೆ ಭೌತಶಾಸ್ತ್ರದ ಬಗ್ಗೆ ಆಸಕ್ತಿ ಮೂಡದ ಕಾರಣ, ವೈಮಾನಿಕ ಇಂಜಿನೀಯರ್ ಪದವಿಯಲ್ಲಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಿದರು.he is a great scientist in india

●ವಿಜ್ಞಾನಿಯಿಂದ ರಾಷ್ಟ್ರಪತಿಯವರೆಗೆ

೧೯೫೮ರಲ್ಲಿ ಮದ್ರಾಸ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನೋಲಜಿ ಯಿಂದ ವೈಮಾನೀಕ ಇಂಜಿನೀಯರ್‍ನಲ್ಲಿ ಪದವಿಯನ್ನು ಪಡೆದರು. ಹಾಗೆಯೇ ಪಿ.ಎಚ್.ಡಿ., ಎಮ್ ಟೆಕ್ ಪದವಿಯನ್ನು ಪಡೆದಿದ್ದಾರೆ. ಡಿ.ಆರ್.ಡಿ.ಓ ಹಾಗೂ ಇಸ್ರೋಗಳಲ್ಲಿ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿರುವ ಇವರು ಭಾರತದ ಅಣುಬಾಂಬು ಹಾಗೂ ಕ್ಷಿಪಣಿಗಳ ಜನಕ ಎಂದೇ ಪ್ರಸಿದ್ಧರು. ಇವರು ಬ್ರಹ್ಮಚಾರಿಗಳು.

ಕಲಾಂರವರು ಭಾರತದ ೧೧ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ೨೦೦೨ರ ರಾಷ್ತ್ರಪತಿ ಚುನಾವಣೆಯಲ್ಲಿ ಲಕ್ಷ್ಮೀ ಸೆಹೆಗಲ್ ವಿರುದ್ಧ ೧೦೭,೩೬೬ ಓಟುಗಳ ಮುನ್ನಡೆಯಲ್ಲಿ ಗೆದ್ದರು. ೨೫ ಜುಲೈ ೨೦೦೨ರಿಂದ ೨೫ ಜುಲೈ ೨೦೦೭ರ ವರೆಗೆ ರಾಷ್ಟಪತಿಯಾಗಿ ಸೇವೆ ಸಲ್ಲಿಸಿದರು.[೪]

●ಇವರ ಪುಸ್ತಕಗಳು

ಡೆವೆಲಪ್ಮೆಂಟ್ಸ್ ಇನ್ ಫ್ಲುಯಿಡ್ ಮೆಖಾನಿಕ್ಸ್ ಅಂಡ್ ಸ್ಪೇಸ್ ಟೆಕ್ನಾಲಜಿ-ರೊಡ್ಡಂ ನರಸಿಂಹರವರ ಜತೆ ಬರೆದಿರುವ ವೈಜ್ಞಾನಿಕ ಪುಸ್ತಕ.[೫]

●ವಿಂಗ್ಸ್ ಆಫ್ ಫೈಯರ್
(ಕನ್ನಡ ಅನುವಾದ - ಅಗ್ನಿಯ ರೆಕ್ಕೆಗಳು)-ಅರುಣ್ ತಿವಾರಿಯವರ ಜತೆ ಬರೆದ ಈ ಪುಸ್ತಕವು ಇವರ ಆತ್ಮಕಥೆಯಾಗಿದ್ದು, ಇವರ ಸರಳ ಹಾಗೂ ಮಾದರಿ ಜೀವನದ ಅನೇಕ ಘಟನೆಗಳನ್ನು ಓದುಗರಿಗೆ ತೆರೆದಿಡುತ್ತದೆ. ಇಂದಿನ ಯುವ ಪೀಳಿಗೆಗೆ ಇದೊಂದು ಅನುರೂಪವಾದ ಮಾರ್ಗದರ್ಶಿ.[೬]

●ಇಂಡಿಯಾ ೨೦೨೦-
ಈ ಪುಸ್ತಕದಲ್ಲಿ ಕಲಾಮ್ ರವರು ೨೦೨೦ನೇ ಇಸವಿಯಲ್ಲಿ ಭಾವಿ ಭಾರತವು ಹೇಗಿರಬೇಕೆಂದು ತಮ್ಮ ಕನಸನ್ನು ಬಿಚ್ಚಿಡುತ್ತಾರೆ. ಯುವ ಜನಾಂಗಕ್ಕೆ ಸ್ಪೂರ್ತಿಯಾಗಬಲ್ಲಂತಹ ಕೃತಿ.[೭]

●ಇಗ್ನೈಟೆಡ್ ಮೈಂಡ್ಸ್-
ಮಕ್ಕಳಿಗಾಗಿ ಬರೆದಿರುವ ಈ ಪುಸ್ತಕವು ಅವರು ಮುಂದಿನ ನಾಗರೀಕರಾಗಿದ್ದು ದೇಶವನ್ನು ಹೇಗೆ ಬೆಳಸಬಹುದು ಎಂದು ಹೇಳುತ್ತದೆ.[೮]

●ಎನ್ವಿಶನಿಂಗ್ ಅನ್ ಎಂಪವರ್ಡ್ ನೇಷನ್-ಸಾಮಾಜಿಕ
ಬದಲಾವಣೆಗಾಗಿ ತಂತ್ರಜ್ಞಾನದ ಬಗ್ಗೆ ಎ.ಶಿವತನು ಪಿಳ್ಳೈರವರ ಜತೆ ಬರೆದಿರುವ ಪುಸ್ತಕ.[೯]

●ಮೈ ಜರ್ನೀ-
ಇದು ಅವರ ಎರಡನೇ ಆತ್ಮಕಥೆ. ಇಲ್ಲಿ ಅವರ ಜೀವನದ ಇಷ್ಟ-ಕಷ್ಟಗಳ ಬಗ್ಗೆ ಹೇಳಿದ್ದಾರೆ. ಇದನ್ನು ವಿ.ಸತ್ಯನಾರಾಯಣ ಮೂರ್ತಿ ಪ್ರಕಟಿಸಿದ್ದಾರೆ.[೧೦]

●ದಿ ಲೈಫ್ ಟ್ರೀ -
ಕಲಾಂ ಅವರು ಬರೀ ವಿಜ್ಞಾನಿಯಲ್ಲದೆ ಒಳ್ಳೆಯ ಕವಿಯೂ ಆಗಿದ್ದಾರೆ. ದಿ ಲೈಫ್ ಟ್ರೀ ಅವರ ಕವನ ಸಂಕಲನವಾಗಿದ್ದು ವಿಜ್ಞಾನ ಮತ್ತು ಸಾಹಿತ್ಯವನ್ನು ಒಂದು ಮಾಡುವ ಪುಸ್ತಕ ಇದು. ಇವರ ಕವನಗಳು ಇವರ ದೇಶಭಕ್ತಿ ಹಾಗು ಮಾತೃಭಕ್ತಿಯನ್ನು ತೋರಿಸುತ್ತದೆ ಮತ್ತು ದೇವರ ಮೇಲೆ ಇವರಿಗಿರುವ ಶ್ರದ್ಧಾ ಭಕ್ತಿಯನ್ನು ತೋರಿಸುತ್ತದೆ.[೧೧]
(PSGADYAL TEACHER VIJAYAPUR).

●ಚಿಲ್ರೆನ್ ಆಸ್ಕ್ ಕಲಾಂ-
ಮಕ್ಕಳು ಕಲಾಂರವರಿಗೆ ಬರೆದ ಪತ್ರಗಳ ಪ್ರಶ್ನೆಗಳಿಗೆ ಪ್ರತ್ಯುತ್ತರ ಪತ್ರಗಳ ಸಂಕಲನ ಈ ಪುಸ್ತಕ. ಇದರಲ್ಲಿ ಮಕ್ಕಳ ವಿಷಯಗಳು, ಭಾರತೀಯತೆ, ವಿದ್ಯಾಭ್ಯಾಸ, ಸಾಮಾನ್ಯ ವಿಷಯಗಳು, ವಿಜ್ಞಾನ ಮತ್ತು ಆಧ್ಯಾತ್ಮದ ಬಗ್ಗೆ ಮಕ್ಕಳಿಗೆ ತಿಳಿಸುತ್ತದೆ.[೧೨]

●ಮರಣ

ಅವರು ಜುಲೈ ೨೭, ೨೦೧೫ರಂದು ಶಿಲ್ಲಾಂಗ್ ನಲ್ಲಿ ಉಪನ್ಯಾಸ ನೀಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದರು. ನಂತರ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.[೧೩]

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023