ಭಾರತದ 16 ಚಿನ್ಹೆಗಳು


1} # ರಾಷ್ಟ್ರಧ್ವಜ
=> ಭಾರತದ ರಾಷ್ಟ್ರ ಧ್ವಜದ ಉದ್ದ & ಅಗಲದ
ಅನುಪಾತ 3:2
=> ಭಾರತದ ರಾಷ್ಟ್ರಧ್ವಜದ ಬಣ್ಣ
ಕೆಸರಿ,ಬಿಳಿ,ಹಸಿರು ಹೊಂದಿದೆ
=> ಭಾರತದ ರಾಷ್ಟ್ರಧ್ವಜದ ಮಧ್ಯಭಾಗದಲ್ಲಿ
24 ಕಡ್ಡಿಗಳನ್ನು ಹೊಂದಿರುವ
ಅಶೋಕನು ಹೊರಡಿಸಿದ ಸಾರನಾಥ
ಸೂಪ್ತದಿಂದ ಪಡೆದಿರುವ ಧರ್ಮ ಚಕ್ರವಿದೆ.ಇದು
ನಿಲಿ ಬಣ್ಣದಿಂದ ಕೂಡಿದೆ.
=> ಭಾರತದ ಸಂವಿಧಾನ ರಚನಾ ಸಭೆಯು 22 ಜುಲೈ
1947 ರಲ್ಲಿ ರಾಷ್ಟ್ರಧ್ವಜವನ್ನು
ಅಳವಡಿಸಿಕೊಂಡಿತು.
=> ಭಾರತದ ಧ್ವಜಸಂಹಿತೆ(flag code) 26
ಜನೆವರಿ 2002 ರಂದು ಜಾರಿಗೆ ಬಂದಿತು.
=> ಭಾರತದ ಪ್ರತಿಯೊಬ್ಬ
ರಾಷ್ಟ್ರಧ್ವಜ ಹಾರಿಸುವುದು ಮೂಲಭೂತ ಹಕ್ಕು
ಎಂದು ಕಲಂ 19(i) ವಿವರಿಸುವುದು.
=> ಭಾರತದ ತ್ರಿವರ್ಣ ಧ್ವಜವನ್ನು
ಮೊಟ್ಟಮೊದಲಿಗೆ
ತಯಾರಿಸಿದವರು ಮೇಡಂ ಭೀಕಾಜಿ
ಕಾಮಾ.
=> ಭಾರತದ ಧ್ವಜವನ್ನು ಮೊದಲಿಗೆ
ಲಾಹೋರದ ರಾವಿ ನದಿಯ ದಂಡೆ ಮೇಲೆ 1928 ರ
ಕಾಂಗ್ರೆಸ್ಸ ಅಧಿವೇಶನದಲ್ಲಿ ಜವಾಹರಲಾಲ
ನೆಹರೂ ಹಾರಿಸಿದರು.
=> ಕೆಂಪು ಕೋಟೆಯ ಮೇಲೆ ಪ್ರತಿ ವರ್ಷ
ರಾಷ್ಟ್ರೀಯ ಧ್ವಜ ಹಾರಿಸುವವರು
ಪ್ರಧಾನಮಂತ್ರಿಗಳು
=> ತ್ರಿವರ್ಣ ಧ್ವಜದ
ವಿನ್ಯಾಸಗೊಳಿಸಿದವರು ಪಿಂಗಳಿ
ವೆಂಕಯ್ಯ.
=> ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ
ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.
2} # ರಾಷ್ಟ್ರೀಯ_ಚಿನ್ಹೆ
=> ಭಾರತದ ರಾಷ್ಟ್ರೀಯ ಚಿನ್ಹೆಯನ್ನು
ಉತ್ತರ ಪ್ರದೇಶದಲ್ಲಿ ಅಶೋಕನು
ಹೊರಡಿಸಿರುವ ಸಾರನಾಥ
ಸೂಪ್ತದಿಂದ ಪಡೆಯಲಾಗಿದೆ.
=> ಇದರಲ್ಲಿ ನಾಲ್ಕು ಸಿಂಹಗಳು,
ನೆಗೆಯುತ್ತಿರುವ ಕುದುರೆ, ಗೂಳಿ & ಆನೆಗಳಿವೆ.
ಮಧ್ಯದಲ್ಲಿ ಧರ್ಮಚಕ್ರವಿದೆ.
=> ಭಾರತ ಸರ್ಕಾರವು ಇದನ್ನು 26 ಜನೆವರಿ 1950
ರಂದು ಅಳವಡಿಸಿಕೊಂಡಿತು.
=> ಇದರ ಕೆಳಗೆ
ಮಂಡಕೊಪನಿಷತ್ತಿನಿಂದ
ಪಡೆದಿರುವ ಸತ್ಯಮೇವ ಜಯತೇ ಯನ್ನು ದೇವನಾಗರಿ
ಲಿಪಿಯಲ್ಲಿ ಬರೆಯಲಾಗಿದೆ.
=> ರಾಷ್ಟ್ರೀಯ ಚಿನ್ಹೆಯು ಭಾರತದ
ಸರ್ಕಾರದ ಹಕ್ಕನ್ನು ಸೂಚಿಸುವುದು.
3} # ರಾಷ್ಟ್ರೀಯ_ಹೂವು
=> ಭಾರತದ ಪುಷ್ಪ - ಕಮಲದ ಹೂವು
=> ಪುರಾಣಗಳಲ್ಲಿ ಕಮಲದ ಹೂ ತ್ಯಾಗದ
ಸಂಕೇತವಾಗಿದೆ.
=> ಕಮಲದ ವೈಜ್ಞಾನಿಕ ಹೆಸರು -
ನೀಲುಂಬಾ ನುಸಿಫೇರಾ(Nelumbo
nucifera)
=> ಸಸ್ಯ ಸಂಪತ್ತಿನಲ್ಲಿ ಭಾರತ
ಜಗತ್ತಿನಲ್ಲಿ 10 ನೇ ಸ್ಥಾನದಲ್ಲಿದೆ.
4} # ರಾಷ್ಟ್ರಗೀತೆ
=> ಭಾರತದ ರಾಷ್ಟ್ರಗೀತೆ 'ಜನಗಣಮನ"
=> ಮೂಲತ ಇದು ಬಂಗಾಳಿ ಭಾಷೆಯಲ್ಲಿದ್ದು
ಇದನ್ನು ರಚಿಸಿದವರು ರವೀಂದ್ರನಾಥ
ಟ್ಯಾಗೋರ್
=> ಸಂವಿಧಾನ ರಚನಾ ಸಭೆಯು ಹಿಂದಿ
ಭಾಷಾಂತರದ ರಾಷ್ಟ್ರಗೀತೆಯನ್ನು
24 ಜನೆವರಿ 1950 ರಂದು
ರಾಷ್ಟ್ರಗೀತೆಯಾಗಿ
ಅಳವಡಿಸಿಕೊಂಡಿತು.
=> ಈ ಗೀತೆಯನ್ನು
ಮೊದಲಿಗೆ 1911 ರ ಕಲ್ಕತ್ತಾ
ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಲಾಯಿತು.
=> ಜನಮಣ ಗೀತೆಯು ಮೂಲತಃ ಐದು
ಪಂಕ್ತಿಗಳಿಂದ ಕೂಡಿದೆ ಅದರ
ಮೊದಲನೇ ಪಂಕ್ತಿಯನ್ನು
ಮಾತ್ರ ರಾಷ್ಟ್ರಗೀತೆಯಾಗಿ
ಅಳವಡಿಸಕ್ಕೊಳ್ಳಲಾಗಿದೆ.
=> ಭಾರತದ ರಾಷ್ಟ್ರಗೀತೆಯಲ್ಲಿ ಒಟ್ಟು
13 ಸಾಲುಗಳಿವೆ.
=> ರಾಷ್ಟ್ರಗೀತೆಯನ್ನು 48
ಸೆಕೆಂಡುಗಳಿಗೆ ಕಡಿಮೆ ಇಲ್ಲದಂತೆ ಹಾಗೂ
52 ಸೆಕೆಂಡುಗಳು ಮೀರದಂತೆ
ಹಾಡುವ ನಿಯಮವಿದೆ.
=> ರವೀಂದ್ರನಾಥ ಟ್ಯಾಗೋರ್ ರವರ
'ಅಮರ್ ಸೋನಾರ್ ಬಾಂಗ್ಲಾ' ಗೀತೆಯನ್ನು
ಬಾಂಗ್ಲಾದೇಶ ತನ್ನ
ರಾಷ್ಟ್ರಗೀತೆಯಾಗಿ
ಅಳವಡಿಸಿಕೊಂಡಿದೆ( ಈ
ಗೀತೆಯನ್ನು 1905 ರಲ್ಲಿ ಬಂಗಾಳ
ವಿಭಜನೆ ವಿರೋಧಿಸಿ ರಚಿಸಿದ್ದರು)
=> 1905 ರ ಬಂಗಾಳ ವಿಭಜನೆ ವಿರೋಧಿಸಿ ಇವರು
ಹಿಂದೂ ಮುಸ್ಲಿಂರಿಗೆ "ರಕ್ಷಾಬಂಧನ"
ಆಚರಿಸುವಂತೆ ಕರೆ ನೀಡಿದ್ದರು.
5} # ರಾಷ್ಟ್ರೀಯ_ಹಾಡು
=> ಸಂಸ್ಕ್ರತದಲ್ಲಿರುವ ವಂದೇ
ಮಾತರಂ ಈ ಗೀತೆಯನ್ನು ಭಾರತದ
ಸಂವಿಧಾನ ರಚನಾ ಸಭೇಯನ್ನು ಜನೆವರಿ 24
1950 ರಂದು
ಅಳವಡಿಸಿಕೊಂಡಿತು.
=> ಈ ಗೀತೆಯನ್ನು
ಬಂಕೀಮಚಂದ್ರ ಚಟರ್ಜಿ
ಚಟ್ಟೋಪಧ್ಯಾಯರು 1882 ರಲ್ಲಿ ರಚಿಸಿದ
'ಆನಂದಮಠ' ಕಾದಂಬರಿಯಿಂದ
ಆಯ್ದುಕ್ಕೊಳ್ಳಲಾಗಿದೆ.
=> ಈ ಗೀತೆಯನ್ನು
ಮೊಟ್ಟಮೊದಲಿಗೆ
1896 ರ ಕಲ್ಕತ್ತಾ ಕಾಂಗ್ರೆಸ್ಸ ಅಧಿವೇಶನದಲ್ಲಿ
ಹಾಡಲಾಯಿತು.
=> ಭಾರತಕ್ಕೆ ಸ್ವಾತಂತ್ರ
ದೊರೆಯವರೆಗೂ ಈ
ಗೀತೆಯನ್ನು ರಾಷ್ಟ್ರಗೀತೆಯಾಗಿ
ಹಾಡಲಾಗುತ್ತಿತ್ತು.
=> ಈ ಗೀತೆಯನ್ನು 1920 ರಲ್ಲಿ
ಇಂಗ್ಲೀಷ ಭಾಷೆಗೆ
ಭಾಷಾಂತರಿಸಿದವರು
ಶ್ರೀಅರವಿಂದೋ ಘೋಷ್.
6} # ರಾಷ್ಟ್ರೀಯ_ಪಂಚಾಂಗ
=> ರಾಷ್ಟ್ರೀಯ ಪಂಚಾಂಗವು
ಶಕ ವರ್ಷವನ್ನು ಆಧರಿಸಿದ ಗ್ರೇಗೋರಿಯನ್ನ
ಪಂಚಾಂಗವನ್ನು ಹೋಲುತ್ತದೆ.
=> ಇದನ್ನು ಮಾರ್ಚ 22, 1957 ರಂದು
ಅವಡಿಸಿಕ್ಕೊಳಲಾಗಿದೆ.
=> ಸಾಮಾನ್ಯ ವರ್ಷದ ಮೊದಲ
ದಿನಾಂಕ - ಮಾರ್ಚ 21
=> ಅಧಿಕ ವರ್ಷದ ಮೊದಲ
ದಿನಾಂಕ - ಮಾರ್ಚ 22
=> ಕ್ರಿ.ಶ 78 ಶಾಲಿವಾನ ಶಕೆ ವರ್ಷವನ್ನು ಕುಶಾನರ
ಅರಸ ಕನಿಷ್ಕನು ಅಧಿಕಾರಕ್ಕೆ ಬಂದಿರುವದರ
ನೆನಪಿಗಾಗಿ ಜಾರಿಗೆ ತಂದನು.
=> 2015 ರ ವರ್ಷವನ್ನು ಭಾರತೀಯ
ಕ್ಯಾಲೆಂಡರನಂತೆ 1937 ನೇ ವರ್ಷ
ಎನ್ನಲಾಗುವುದು.
=> ಭಾರತದ ರಾಷ್ಟ್ರೀಯ
ಪಂಚಾಂಗದ ಪ್ರಕಾರ
ಮೊದಲನೇ ತಿಂಗಳು - ಚೈತ್ರ
=> ಕೊನೆಯ ತಿಂಗಳು -
ಫಾಲ್ಗುಣ
=> ರಾಷ್ಟ್ರೀಯ ಪಂಚಾಂಗದ
ತಿಂಗಳುಗಳು : ಚೈತ್ರ ವೈಶಾಖ ಜೇಷ್ಟ ಆಶಾಢ
ಶ್ರಾವಣ ಭಾದ್ರಪದ ಅಶ್ವಿನ್ ಕಾರ್ತಿಕ ಮೃಗಶಿರ
ಪುಷ್ಯ ಮಾಘ ಫಾಲ್ಗುಣ
7} # ರಾಷ್ಟ್ರೀಯ_ಕ್ರೀಡೆ
=> ಭಾರತದ ರಾಷ್ಟ್ರೀಯ
ಕ್ರೀಡೆ - ಹಾಕಿ
=> ಹಾಕಿ ಕ್ರೀಡೆಯಲ್ಲಿ ಒಂದು
ತಂಡದಲ್ಲಿ ಒಟ್ಟು 11 ಆಟಗಾರರಿರುತ್ತಾರೆ.
=> ಭಾರತ ಹಾಕಿ ತಂಡ ಒಟ್ಟು 08 ಸಲ
ಓಲಂಪಿಕ್ಸನಲ್ಲಿ ಚಿನ್ನದ ಪದಕ ಗೆದ್ದಿದೆ.
=> ಕರ್ನಾಟಕದ ಕೊಡಗು ಜಿಲ್ಲೆಗೆ
ಹಾಕಿಯ ತವರೂರು ಎನ್ನುತ್ತಾರೆ.
=> ಭಾರತದ ಹಾಕಿಯ ಮಾಂತ್ರಿಕ -
ಧ್ಯಾನಚಂದ್
=> ಧ್ಯಾನಚಂದರವರ ಹುಟ್ಟು ಹಬ್ಬದ
ದಿನವಾದ ಅಗಷ್ಟ್ -29 ನ್ನು ಪ್ರತಿವರ್ಷ
ಭಾರತದಲ್ಲಿ ರಾಷ್ಟ್ರೀಯ
ಕ್ರೀಡಾ ದಿನವಾಗಿ ಆಚರಿಸುವರು.
=> ಕರ್ನಾಟಕದ ರಾಷ್ಟ್ರೀಯ
ಕ್ರೀಡೆ ಸಹ ಹಾಕಿ ಆಗಿದೆ.
=> ಇಂದಿರಾಗಾಂಧಿ ಗೋಲ್ಡ್ ಕಪ್ ಭಾರತದ
ಪ್ರಮುಖ ಹಾಕಿ ಕ್ರೀಡೆಯ ಟ್ರೋಫಿಯಾಗಿದೆ.
=> ಅಂತರರಾಷ್ಟ್ರೀಯ ಹಾಕಿ
ಪಂದ್ಯವೊಂದರ
ಅವಧಿ - 70 ನಿಮಿಷಗಳು.
8} # ರಾಷ್ಟ್ರೀಯ_ನದಿ
=> ಭಾರತದ ರಾಷ್ಟ್ರೀಯ ನದಿ -
ಗಂಗಾನದಿ
=> ನವೆಂಬರ್ 04, 2008 ರಂದು
ಗಂಗಾನದಿಯನ್ನು ಭಾರತದ
ರಾಷ್ಟ್ರೀಯ ನದಿಯನ್ನು
ಪ್ರಧಾನಮಂತ್ರಿಗಳು ಘೋಷಿಸಿದರು.
=> ಭಾರತದಲ್ಲಿ ಹರಿಯುವ ನದಿಗಳಲ್ಲಿ ಗಂಗಾ
ನದಿ ಅತಿ ಉದ್ದವಾಗಿದೆ(2510 km)
=> ಗಂಗಾ ನದಿ ಪ್ರಾಧಿಕಾರ ಸಂಸ್ಥೆ ಇರುವುದು
ಬಿಹಾರದ ಪಾಟ್ನಾದಲ್ಲಿ.
9} # ರಾಷ್ಟ್ರೀಯ_ಜಲಪ್ರಾಣಿ
=> ಭಾರತ ಸರ್ಕಾರವು ಅಕ್ಟೋಬರ್ 05,2009
ರಂದು ಗಂಗಾ ನದಿಯ ಡಾಲ್ಫಿನ್ ಭಾರತದ
ರಾಷ್ಟ್ರೀಯ ಜಲಪ್ರಾಣಿ ಎಂದು
ಘೋಷಿಸಿದೆ.
=> ಡಾಲ್ಫಿನದ ವೈಜ್ಞಾನಿಕ ಹೆಸರು -
ಪ್ಲಾಂಟಾನಿಷ್ಟಾ ಗ್ಯಾಂಗ್ಯಾಟಿಕಾ.
((Platanista gangetica)
10} #ರಾಷ್ಟ್ರೀಯ_ಪಕ್ಷಿ
=> ಭಾರತದ ರಾಷ್ಟ್ರೀಯ ಪಕ್ಷಿ - ನವಿಲು
=> ಭಾರತದ ವನ್ಯಜೀವಿ ರಕ್ಷಣಾ
ಕಾಯ್ದೆ - 1972 ರ ಅಡಿಯಲ್ಲಿ ನವಿಲು
ಸಂರಕ್ಷಿಸಲಾಗುವುದು.
=> ನವಿಲಿನ ವೈಜ್ಞಾನಿಕ ಹೆಸರು - ಪಾವೋ ಕ್ರಿಸ್ಟಾಟಸ್
(pavo cristatus)
=> ಮಂಡ್ಯ ಜಿಲ್ಲೆ ಆದಿಚುಂಚನಗಿರಿ
ಹಾಗೂ ಹಾವೇರಿ ಜಿಲ್ಲೆಯ ಬಂಕಾಪೂರದಲ್ಲಿ ನವಿಲು
ವನ್ಯಧಾಮಗಳಿವೆ.
11} #ರಾಷ್ಟ್ರೀಯ_ಮರ
=> ಭಾರತದ ರಾಷ್ಟ್ರೀಯ ಮರ -
ಬನಯಾನ್ ಅಥವಾ ಅರಳಿ ಮರ.
=> ಅರಳಿ ಮರದ ವೈಜ್ಞಾನಿಕ ಹೆಸರು - ಫೈಕಾಸ್
ಬೆಂಗಾಲೆನಿಸ್ (ficus benghalensis)
=> ಅರಳಿ ಮರದ ಬೇರುಗಳು ತಂತುರೂಪಗಳಾಗಿವೆ.
=> ಗೌತನ ಬುದ್ದನಿಗೆ ಜ್ಞಾನೋದಯವಾದದ್ದು ಬಿಹಾರದ
ಗಯಾದ ನಿರಂಜನ ನದಿಯ ದಡದಲ್ಲಿರುವ
ಅರಳಿ ಮರದ ಕೆಳಗೆ.
=> ಗೌತಮ ಬುದ್ದನ ಆಧ್ಯಾತ್ಮಿಕ ಗುರು - ಅಲಾರ
ಕಮಾ
=> ಭಾರತದ ಅತ್ಯಂತ
ದೊಡ್ಡ ಅರಳಿ ಇರುವುದು -
ಕಲ್ಕತ್ತದಲ್ಲಿ.
=> ಪ್ರಪಂಚದ ಅತಿ ದೊಡ್ಡ
ವೃಕ್ಷ - ದೈತ್ಯ ಸಿಕೋಯ್ ಮರ.
=> ಮರಗಳ ಆಯುಷ್ಯವನ್ನು ನಿರ್ಧರಿಸುವುದು
ಅವುಗಳು ಕಾಂಡದಲ್ಲಿರುವ
ಸೆಲ್ಯುಲಸನಿಂದ ಮಾಡಲ್ಪಟ್ಟಿರುವ ವೃತ್ತಗಳ
ಸಂಖ್ಯೆಯ ಆಧಾರದ ಮೇಲೆ.
12} #ರಾಷ್ಟ್ರೀಯ_ಹಣ್ಣು
=> ಭಾರತದ ರಾಷ್ಟ್ರೀಯ ಹಣ್ಣು -
ಮಾವಿನ ಹಣ್ಣು
=> ಮಾವಿನ ವೈಜ್ಞಾನಿಕ ಹೆಸರು - ಮ್ಯಾಂಜಿಫೇರಾ
ಇಂಡಿಕಾ (mangifera indica)
=> ಮಾವಿ ಹಣ್ಣಿನಲ್ಲಿರುವ ಜೀವಸತ್ವಗಳು
- A,C,D
=> ಭಾರತವು ಮಾವಿನ ಉತ್ಪಾದನೆಯಲ್ಲಿ
ಜಗತ್ತಿನಲ್ಲಿ ಪ್ರಥಮ ಸ್ಥಾನದಲ್ಲಿದೆ.
13} #ರಾಷ್ಟ್ರೀಯ_
ವಂಶಪಾರಂಪರ್ಯ_ಪ್ರಾಣಿ
=> ಭಾರತ ಸರ್ಕಾರವು ಅಕ್ಟೋಬರ್ 23, 2010
ರಂದು ಆನೆಯನ್ನು ಭಾರತದ
ವಂಶಪಾರಂಪರ್ಯ ಪ್ರಾಣಿ ಎಂದು
ಘೋಷಿಸಿದೆ.
=> ಆನೆಯ ವೈಜ್ಞಾನಿಕ ಹೆಸರು - ಎಲಿಫಾಸ್
ಮ್ಯಾಕ್ಷಿಮಸ್ (elephas maximus)
=> ಭೂವಾಸಿಗಳಲ್ಲಿ ದೊಡ್ಡದಾದ ಪ್ರಾಣಿ
- ಆಪ್ರಿಕಾದ ಆನೆ.
=> ಭಾರತದ ಆನೆಗಳ ಯೋಜನೆ ಜಾರಿಗೆ ತಂದ
ವರ್ಷ - 1992.
=> ಭಾರತದಲ್ಲಿ ಅತಿ ಹೆಚ್ಚು ಆನೆಗಳನ್ನು
ಹೊಂದಿರುವ ರಾಜ್ಯ -
ಕರ್ನಾಟಕ.
=> ಕರ್ನಾಟಕದ ರಾಜ್ಯ ಪ್ರಾಣಿ - ಆನೆ.
14} #ರಾಷ್ಟ್ರೀಯ_ಪ್ರಾಣಿ
=> 1972 ರಿಂದ ಭಾರತದ
ರಾಷ್ಟ್ರೀಯ ಪ್ರಾಣಿ ಹುಲಿ ಎಂದು
ಘೋಷಿಸಲಾಯಿತು.
=> ಭಾರತದ ಮೊದಲ
ರಾಷ್ಟ್ರೀಯ ಪ್ರಾಣಿ ಸಿಂಹವಾಗಿತ್ತು.
=> ಹುಲಿಯ ವೈಜ್ಞಾನಿಕ ಹೆಸರು - ಪ್ಯಾಂಥೇರಾ
ಟ್ರೈಗಿಸ್. (Panthera tigris)
=> ಭಾರತದ ಮೊದಲ ಹುಲಿ
ಅಭಯಾರಣ್ಯ - ಉತ್ತರಖಂಡದ ಕಾರ್ಬೆಟ್
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು
ಹೊಂದಿರುವ ರಾಜ್ಯ -
ಕರ್ನಾಟಕ.
=> ವಿಸ್ತೀರ್ಣದಲ್ಲಿ ಭಾರತದ
ದೊಡ್ಡದಾದ ಹುಲಿ ಅಭಯರಾಣ್ಯ -
ಆಂದ್ರಪ್ರದೇಶದ ನಾಗಾರ್ಜುನ ಸಾಗರ
=> ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು
ಹೊಂದಿರುವ ಅಭಯಾರಣ್ಯ -
ಪಶ್ಚಿಮ ಬಂಗಾಳದ ಸುಂದರಬನ್ಸ್
=> ಭಾರತದಲ್ಲಿ ಹುಲಿ ಯೋಜನೆ ಜಾರಿಗೆ ಬಂದ
ವರ್ಷ - 1972
15} #ರಾಷ್ಟ್ರೀಯ_ಕಟ್ಟಡ
=> ದೆಹಲಿಯಲ್ಲಿರುವ ಇಂಡಿಯಾ ಗೇಟ್
ಇದನ್ನು ಎರಡನೇ ಮಹಾಯುದ್ದದಲ್ಲಿ ಮರಣ
ಹೊಂದಿರುವ
ಭಾರತೀಯ ಸೈನಿಕರ ನೆನಪಿಗಾಗಿ
ಕಟ್ಟಿಸಲಾಗಿದೆ.
16} #ರಾಷ್ಟ್ರೀಯ_
ದೊರೆ
=> ಮೌರ್ಯ ವಂಶದ ಚಂದ್ರಗುಪ್ತ
ಮೌರ್ಯ.

---ತೀರ್ಥಪ್ಪ ಶ್ರೀಚಂದ

Comments

Popular posts from this blog

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*

SSLC RESULT 2023