Posts

Showing posts from April, 2016

LIST OF CANDIDATES ELIGIBLE FOR PERSONALITY TEST FOR GAZETTED PROBATIONERS EXAMINATION 2014

http://kpsc.kar.nic.in/ELGLIST%20OF%20GP2014.HTM

ಐಎಎಸ್ ಪರೀಕ್ಷೆ ಅಧಿಸೂಚನೆ ಪ್ರಕಟ ಆಗಸ್ಟ್ 7ಕ್ಕೆ ಪೂರ್ವಭಾವಿ ಪರೀಕ್ಷೆ.!!

ನವದೆಹಲಿ (ಏ.23): ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್'ಸಿ) 2016ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಗಳಿಗೆ (ಐಎಎಸ್, ಐಪಿಎಸ್, ಐಎಫ್ಎಸ್ ಇತ್ಯಾದಿ) ಅಧಿಸೂಚನೆ ಪ್ರಕಟಿಸಿದೆ. ಅಧಿಸೂಚನೆಯು ವೆಬ್'ಸೈಟ್ http://upsconline.nic.in ನಲ್ಲಿ ಲಭ್ಯವಿದ್ದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.20 ಹಾಗೂ ಪೂರ್ವಭಾವಿ ಪರೀಕ್ಷೆ ಆಗಸ್ಟ್ 7 ರಂದು ನಡೆಯಲಿದೆ. ಪರೀಕ್ಷೆಯನ್ನು ಪೂರ್ವಭಾವಿ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದೊಂದಿಗೆ ಮೂರು ಪ್ರಕಾರಗಳಲ್ಲಿ ನಡೆಸಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 32 ವರ್ಷ ವಯೋಮಿತಿಯೊಂದಿಗೆ 6 ಬಾರಿ, ಹಿಂದುಳಿದ ವರ್ಗದವರಿಗೆ 35 ವಯೋಮಿತಿ 9 ಬಾರಿ ಹಾಗೂ ಎಸ್'ಸಿ, ಎಸ್'ಟಿ ಅಭ್ಯರ್ಥಿಗಳು 37 ವಯೋಮಿತಿಯಿದ್ದು ಎಷ್ಟು ಬಾರಿ ಬೇಕಾದರೂ ಪರೀಕ್ಷೆ ತೆಗೆದುಕೊಳ್ಳಬಹುದು. *ಶೈಕ್ಷಣಿಕ ಅರ್ಹತೆ: ಐಎಎಸ್ ಪರೀಕ್ಷೆ ತೆಗೆದುಕೊಳ್ಳಲು ಯುಜಿಸಿ'ಯಲ್ಲಿ ಅಂಗೀಕೃತಗೊಂಡ ಯಾವುದೇ ವಿಶ್ವವಿದ್ಯಾಲಯದಲ್ಲಿ ಕನಿಷ್ಠ ಪದವಿ ಪಡೆದುಕೊಂಡಿರಬೇಕು. ಪದವಿಯ ಅಂತಿಮ ವರ್ಷದ ಪರೀಕ್ಷೆ ಬರೆದವರು ಸಹ ಪರೀಕ್ಷೆ ತೆಗೆದುಕೊಳ್ಳಬಹುದು ಆದರೆ ಮುಖ್ಯ ಪರೀಕ್ಷೆ ವೇಳೆಗೆ ಫಲಿತಾಂಶ ಪ್ರಕಟಗೊಂಡಿರಬೇಕು. ಐಎಫ್ಎಸ್ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ  ಪಶುಪಾಲನಾ ಮತ್ತು ಪಶುವೈದ್ಯ ವಿಜ್ಞಾನ, ಸಸ್ಯಶಾಸ್ತ್ರ, ರಸಾಯನಶಾಸ್ತ್ರ, ಭ

ಸರ್ಕಾರಿ ಆದೇಶ ಸಂಖ್ಯೆ:ಆಇ 12 ಎಸ್ ಆರ್ ಪಿ 2016 -ದಿ:13-04-2016- ತುಟ್ಟಿಭತ್ಯೆಯ ದರಗಳ ಪರಿಷ್ಕರಣೆ - 32.5% to 36%

ಸರ್ಕಾರಿ ಆದೇಶ ಸಂಖ್ಯೆ:ಆಇ 12 ಎಸ್ ಆರ್ ಪಿ 2016 Government Order No. FD 12 SRP 2016 -dated 13-04-2016- ತುಟ್ಟಿಭತ್ಯಯ ದರಗಳ ಪರಿಷ್ಕರಣೆ  -  32.5% to 36%-Grant of Dearness Allowance 32.5% to 36%-Reg http://finance.kar.nic.in/gos/fd12srp2016.PDF

2006 ಕ್ಕಿಂತ ಮೊದಲೇ ನಿವೃತ್ತರಾದ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ಧಿ

Image
 Suvarnanews:    3 hours ago ನವದೆಹಲಿ(ಏ.13):  ಕೇಂದ್ರ ಸರಕಾರದ ಪಿಂಚಣಿದಾರರಿಗೊಂದು ಸಿಹಿ ಸುದ್ಧಿ! 2006 ಕ್ಕಿಂತ ಪೂರ್ವ ನಿವೃತ್ತಿ ವೇತನದಾರರಿಗೆ ಈಗ ಪಿಂಚಣಿ ಹೆಚ್ಚಳ ಮಾಡುವ ನಿರ್ಧಾರವನ್ನು  ಕೇಂದ್ರ ಸರಕಾರ ತೆಗೆದುಕೊಂಡಿದೆ. ಜೊತೆಗೆ  33 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿ ನಿವೃತ್ತರಾದವರು ಈ ಪ್ರಯೋಜನ ಪಡೆಯಬಹುದು ಎಂದು ಹೇಳಿದೆ.   ಪಿಂಚಣಿ ಮತ್ತು ನಿವೃತ್ತಿ ವೇತನದಾರರ ಕಲ್ಯಾಣ ಇಲಾಖೆ 33 ವರ್ಷಕ್ಕಿಂತ ಕಡಿಮೆ ವರ್ಷ ಕಾರ್ಯ ನಿರ್ವಹಿಸಿ ನಿವೃತ್ತರಾದವರಿಗೆ ಶೇ.50 ಕ್ಕಿಂತ ಕಡಿಮೆ  ವೇತನ ನೀಡಬಾರದು ಎಂದು ಪಿಂಚಣಿ ಹೆಚ್ಚಳ ಮಾಡಲು ನಿರ್ಧರಿಸಿದೆ. ನಿಯಮಗಳ  ಪ್ರಕಾರ ಕೇಂದ್ರ ಸರಕಾರಿ ನೌಕರರು ಕನಿಷ್ಠ ಹತ್ತು ವರ್ಷಗಳ ಸೇವೆ ಪೂರ್ಣಗೊಂಡ ಮೇಲೆ ನಿವೃತ್ತಿ ಪಿಂಚಣಿ ಪಡೆಯುವ ಅರ್ಹತೆ ಪಡೆಯುತ್ತಾರೆ. 2006 ಜನವರಿ 1 ರ ನಂತರ ಪಿಂಚಣಿಯನ್ನು ಕಳೆದ ಹತ್ತು ತಿಂಗಳಲ್ಲಿ ಪಡೆದ ಸರಾಸರಿ ವೇತನ ಅಥವಾ ಮೂಲ ವೇತನವನ್ನು ಆಧರಿಸಿ ಕಂಡು ಹಿಡಿಯಲಾಗುತ್ತದೆ. 2006 ಕ್ಕಿಂತ ಪೂರ್ವದಲ್ಲಿ 33 ವರ್ಷಕ್ಕಿಂತ ಪೂರ್ಣಗೊಳ್ಳುವ ಮೊದಲೇ ಸೇವೆಯಿಂದ ನಿವೃತ್ತಿಯಾದವರಿಗೆ ಒಟ್ಟು ಸೇವಾ ಅವಧಿಯಲ್ಲಿ ಅರ್ಧದಷ್ಟು ವರ್ಷವನ್ನು ಕಳೆದು ಪಿಂಚಣಿ ನೀಡಲಾಗುತ್ತಿತ್ತು. ಈ ತಾರತಮ್ಯವನ್ನು ಪ್ರಶ್ನಿಸಿ ಕೇಂದ್ರ ಆಡಳಿತ ನ್ಯಾಯಮಂಡಳಿಗೆ ಸಾಕಷ್ಟು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಬಂದಿದ್ದವು. ಸುಪ್ರೀಂ ಕೋರ್ಟ್ ಸಹ ಈ ತಾರತಮ್ಯದ ಬಗ್ಗೆ ಆಕ್ಷೇಪ ವ್ಯಕ್ಯಪಡಿಸಿತ್ತ

ದೇವರ/ಜೇಡರ ದಾಸಿಮಯ್ಯ:-

ಜನನ ೧೧೬೫ ಸುರಪುರ ತಾಲ್ಲೋಕು ಮುದನೂರು ಅಂಕಿತನಾಮ ರಾಮನಾಥ ಸಂಗಾತಿ(ಗಳು) ದುಗ್ಗಳೆ ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೇ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆ/ಸುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ. ಸುರಪುರ ತಾಲೂಕಿನ ಮುದನೂರು ಗ್ರಾಮದವನಾದ ನೇಕಾರ ದಾಸಿಮಯ್ಯ ತನ್ನ ಸತಿ ದುಗ್ಗಲೆಯೊಂದಿಗೆ ಕಾಯಕವನ್ನೇ ಕೈಲಾಸವಾಗಿಸಿಕೊಡ ಸಾಧಕ. ರಾಮನಾಥ ಎಂಬ ಅಂಕಿತದಲ್ಲಿ ಬರೆಯಲಾದ ಈತನ ಸುಮಾರು ೧೫೦ ವಚನಗಳು ದೊರೆತಿವೆಯೆನ್ನಲಾಗಿದೆ. ಮೊಲೆ ಮೂಡಿ ಬಂದರೆ ಹೆಣ್ಣೆಂಬರು, ಗಡ್ಡ ಮೀಸೆ ಬಂದರೆ ಗಂಡೆಂಬರು, ನಡುವೆ ಸುಳಿಯುವಾತ್ಮನು ಹೆಣ್ಣೂ ಅಲ್ಲ, ಗಂಡೂ ಅಲ್ಲ ರಾಮನಾಥ ಒಡಲುಗೊಂಡವ ಹಸಿವ:ಒಡಲುಗೊಂಡವ ಹುಸಿವ ಒಡಲುಗೊಂಡವನೆಂದು ನೀನೊಮ್ಮೆ ಜರಿದು ನುಡಿಯದಿರು ನೀನೆನ್ನಂತೊಮ್ಮೆ ಒಡಲುಗೊಂಡು ನೋಡಾ ರಾಮನಾಥ ಎಂದು ಸಾರುವಲ್ಲಿ ತೋರಿದ ಜನಪರ ಕಾಳಜಿ ಇಂದಿಗೂ ಆನ್ವಯಿಕ. ಶಿವ ಜಗತ್ತನ್ನೇ ವ್ಯ

"ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ (NET) ಏಪ್ರಿಲ್ 12 ರಿಂದ ಅರ್ಜಿ ಆಹ್ವಾನ"::-

ಪ್ರತಿ ವರ್ಷ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಅಖಿಲ ಭಾರತ ಮಟ್ಟದ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ನೆಟ್‌) ವರ್ಷಕ್ಕೆ ಎರಡು ಬಾರಿ ನಡೆಸಿಕೊಂಡು ಬರುತ್ತಿದೆ. ದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗಳಿಗೆ ಹಾಗೂ ಜೂನಿಯರ್‌ ರಿಸರ್ಚ್ ಫೆಲೋಶಿಪ್‌ ನೇಮಕಾತಿಗಾಗಿ ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ಮಾದರಿಯಲ್ಲಿಯೇ ಈ ಪರೀಕ್ಷೆ ನಡೆಯಲಿದ್ದು, ಯುಜಿಸಿ ಪರವಾಗಿ ಸಿಬಿಎಸ್‌ಇ ಈ ಪರೀಕ್ಷೆಯನ್ನು ನಡೆಸಲಿದೆ. 2016ರ ಜುಲೈ 10ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. * ಹುದ್ದೆಗಳ ವಿವರ: ಆಸಕ್ತ ಅಭ್ಯರ್ಥಿಗಳು ಅಸಿಸ್ಟೆಂಟ್‌ ಪ್ರೊಫೆಸರ್‌ ಮತ್ತು ಜೂನಿಯರ್‌ ರಿಸರ್ಚ್ ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಬಹುದು. ಫೆಲೋಶಿಪ್‌ಗೆ ಆಯ್ಕೆಯಾದವರು ಉನ್ನತ ವ್ಯಾಸಂಗವನ್ನು ಆಯ್ಕೆ ಮಾಡಿಕೊಳ್ಳಬಹುದು ಅಥವಾ ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಯನ್ನೂ ಆಯ್ಕೆ ಮಾಡಿಕೊಳ್ಳಬಹುದು. ಐಐಟಿಗಳು ಮತ್ತು ಇತರೆ ರಾಷ್ಟ್ರೀಯ ಸಂಸ್ಥೆಗಳು ಫೆಲೋಶಿಪ್‌ ನೀಡಲಿದ್ದು, ಇದನ್ನು ಪಡೆಯಲು ಎರಡು ವರ್ಷಗಳ ಕಾಲಾವಕಾಶವಿರುತ್ತದೆ. ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗಾಗಿ ಮಾತ್ರ ನೆಟ್‌ ಪರೀಕ್ಷೆ ಬರೆದವರಿಗೆ ಫೆಲೋಶಿಪ್‌ ನೀಡಲಾಗುವುದಿಲ್ಲ. ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಯಾವುದಕ್ಕೆ ಅರ್ಜಿ ಸಲ್ಲಿಸ

ಯುಗಾದಿ:

ಯುಗಾದಿ ಹಬ್ಬವನ್ನು ಆಚರಿಸುವುದರ ಮಹತ್ವ ಮತ್ತು ಕಾರಣಗಳು ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ 'ಚೈತ್ರ ಶುಕ್ಲ ಪ್ರತಿಪದೆ. 'ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧ ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ. ನೈಸಗಿಕ ಕಾರಣಗಳು: ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ - ಸಂಪಾತದ ಮೇಲೆ ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ) ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತ ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ 'ಕುಸುಮಾಕರಿ ವಸಂತ ಋತುವು ನನ್ನ ವಿಭೂತಿಯಾಗಿದೆ' ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (೧೦:೩೫) ಹೇಳಿದ್ದಾನೆ. ಈ ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ ವಾತಾವರಣವಿರುತ್ತದೆ. ಶಿಶಿರ ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪ್ರತಿಪದೆಯ ಸಮಯದಲ್ಲಿ ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲ

ಗೂಗಲ್ ಸರ್ಚ್ನಲ್ಲಿ ಪ್ರಾಣಿಗಳ ದನಿಯನ್ನೂ ಕೇಳಬಹುದು!:-

ನವದೆಹಲಿ: ಗೂಗಲ್ ಸರ್ಚ್ನಲ್ಲಿ ಪ್ರಾಣಿಗಳ ಚಿತ್ರಗಳನ್ನು ಹುಡುಕಿದರೆ ಕ್ಷಣ ಮಾತ್ರಕ್ಕೆ ಅದರ ಬಗ್ಗೆ ಮಾಹಿತಿ ಸಿಗುತ್ತದೆ. ಆದರೆ ಇದೀಗ ಪ್ರಾಣಿಗಳ ದನಿಯನ್ನೂ ಕೇಳುವಂಥಾ ಸೌಲಭ್ಯವನ್ನು ಗೂಗಲ್ ಒದಗಿಸಿದೆ. ಪ್ರಾಣಿಗಳ ದನಿ ಹೇಗಿರುತ್ತದೆ ಎಂಬುದನ್ನು ಮಕ್ಕಳಿಗೆ ಹೇಳಿಕೊಡುವುದಕ್ಕಾಗಿ ಗೂಗಲ್ ಈ ಸೌಲಭ್ಯವನ್ನು ಒದಗಿಸಿದೆ. ಉದಾಹರಣೆಗೆ ಬಳಕೆದಾರರು ಗೂಗಲ್ ನಲ್ಲಿ ಈ ಪ್ರಾಣಿಯ ದನಿ ಯಾವುದು ಎಂಬ ಪ್ರಶ್ನೆ ಕೇಳಿದರೆ, ಸರ್ಚ್ ಇಂಜಿನ್ ಆ ಪ್ರಾಣಿಯ ಇಲ್ಯುಸ್ಟ್ರೇಷನ್, ಪ್ರಾಣಿಯ ಹೆಸರು ಜತೆ ಆ ಪ್ರಾಣಿಯ ದನಿಯ ಸ್ಯಾಂಪಲ್ ನ್ನೂ ತೋರಿಸುತ್ತದೆ. ವರದಿಗಳ ಪ್ರಕಾರ ಈಗಾಗಲೇ ಗೂಗಲ್ ಸರ್ಚ್ ಇಂಜಿನ್ನಲ್ಲಿ ಜೀಬ್ರಾ, ಕೋತಿ, ಬೆಕ್ಕು, ಸಿಂಹ, ಹಂದಿ, ಆನೆ, ಕುದುರೆ ಮೊದಲಾದ 19 ಪ್ರಾಣಿಗಳ ದನಿ ಲಭ್ಯವಾಗುತ್ತಿದೆ.

ಕಣಿವೆ ರಾಜ್ಯದ ಮೊದಲ ಮಹಿಳಾ ಸಿ .ಎಂ . ಮುಫ್ತಿ:-

ಜಮ್ಮು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು . ರಾಜ್ಯಪಾಲ ಎನ್ . ಎನ್ . ವೋಹ್ರಾ ಅವರು ಪ್ರಮಾಣ ವಚನ ಬೋಧಿಸಿದರು. ಮುಫ್ತಿ ಅವರು ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ . ಇದೇ ವೇಳೆ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರೂ ಪ್ರಮಾಣ ವಚನ ಸ್ವೀಕರಿಸಿದರು . ಕೇಂದ್ರ ಸಚಿವ ಎಂ . ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಮುಖಂಡರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು