ಮಂಗಳೂರು-ಬೆಂಗಳೂರು ರೈಲಿಗೆ ‘ಗೊಮ್ಮಟೇಶ್ವರ ಎಕ್ಸ್ ಪ್ರೆಸ್’ ಎಂದು ನಾಮಕರಣ

 March 26, 2017 Gommateshwara ExpressSuresh Prabhu

ಬೆಂಗಳೂರು, ಮಾ.26-ಮಂಗಳೂರು-ಬೆಂಗಳೂರು ರೈಲಿಗೆ ಗೊಮ್ಮಟೇಶ್ವರ ರೈಲು ಎಂದು ಹೆಸರಿಡಲಾಯಿತು. ಮಂಗಳೂರು-ಬೆಂಗಳೂರು ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಇಂದು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಪಾಲ್ಗೊಂಡು ಮಾತನಾಡಿ, 21 ವರ್ಷಗಳಿಂದ ಈ ರೈಲನ್ನು ಈ ಮಾರ್ಗವಾಗಿ ತರಲು ಪ್ರಯತ್ನಪಟ್ಟಿದ್ದೆ. ಈಗ ಯಶಸ್ವಿಯಾಗಿದೆ. ಈ ರೈಲಿಗೆ ಹೇಮಾವತಿ, ಹಾಸನಾಂಬೆ ಅಥವಾ ಗೊಮ್ಮಟೇಶ್ವರ ಎಂದು ನಾಮಕರಣ ಮಾಡಬೇಕೆಂದು ಮನವಿ ಮಾಡಿದರು.
freegksms.blogspot.in

ಈ ಕೂಡಲೇ ವೇದಿಕೆಯಲ್ಲಿದ್ದ ಕೇಂದ್ರ ರೈಲ್ವೆ ಸಚಿವರು ಗೊಮ್ಮಟೇಶ್ವರ ರೈಲು ಎಂದು ಹೆಸರಿಡಲು ಒಪ್ಪಿಗೆ ಸೂಚಿಸಿದರು.  ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಬೆಂಗಳೂರು-ಮಂಗಳೂರು ರೈಲಿಗೆ ಗೊಮ್ಮಟೇಶ್ವರ ರೈಲು ಎಂದು ಹೆಸರಿಡುವುದು ಸೂಕ್ತ. ಯಶವಂತಪುರ-ಹಾಸನ ರೈಲಿಗೆ ಹೇಮಾವತಿ ಹೆಸರಿಡಬೇಕೆಂಬ ಬೇಡಿಕೆ ಇದೆ. ಅದನ್ನು ನಂತರ ನಿರ್ಧರಿಸೋಣ ಎಂದು ಸ್ಪಷ್ಟನೆ ನೀಡಿದರು.

Comments

Popular posts from this blog

KARNATAK STATE SSLC RESULT 2024

IT CALULATION 2023-24(AY)

*ಪೊಲೀಸ್ ಸಬ್-ಇನ್ಸ್ಪೆಕ್ಟರ್( ನಿಸ್ತಂತು)(ಪುರುಷ & ಮಹಿಳಾ) ಹುದ್ದೆಗಳ ಕೀ ಉತ್ತರಗಳು ಪ್ರಕಟ*