Posts

Showing posts from July, 2018

Article about Dr. F G HALAKATTI.

Image

ವಚನ ಪಿತಾಮಹ ಫ.ಗು ಹಳಕಟ್ಟಿ ಅವರ ೧೩೯ನೇ ಜಯಂತಿ(೦೨/೦೭/೨೦೧೮)

Image
ಫ. ಗು. ಹಳಕಟ್ಟಿ ಒಮ್ಮೆ ಕನ್ನಡದ ಕಣ್ವ ಆಚಾರ್ಯ ಬಿ.ಎಂ.ಶ್ರೀಕಂಠಯ್ಯನವರು ಬಿಜಾಪುರಕ್ಕೆ ಬಂದಿಳಿದಾಗ  ಒಬ್ಬರು ಕೇಳಿದರಂತೆ – "ಇತಿಹಾಸ ಪ್ರಸಿದ್ಧವಾದ ಗೋಳಗುಮ್ಮಟವನ್ನು ನೋಡುವಿರಾ?"  ಅದಕ್ಕೆ ನಕ್ಕು  ಬಿ.ಎಂ.ಶ್ರೀ ಅವರು ಉತ್ತರಿಸಿದರಂತೆ "ಮೊದಲು ನಾನು  ವಚನಗುಮ್ಮಟವನ್ನು ನೋಡಬೇಕಾಗಿದೆ"ಎಂದು.  ಆ ವಚನ ಗುಮ್ಮಟವೇ ವಚನ ಪಿತಾಮಹರೆಂದು ಖ್ಯಾತನಾಮರಾದ ರಾವಬಹದ್ಧೂರ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಅವರು.  ಫ.ಗು.ಹಳಕಟ್ಟಿ ಅವರು  ಹುಟ್ಟಿದ್ದು 1880ರ ಜುಲೈ 2 ರಂದು ಧಾರವಾಡದಲ್ಲಿ. ತಂದೆ ಗುರುಬಸಪ್ಪ ಹಳಕಟ್ಟಿ ತಾಯಿ ದಾನಾದೇವಿ.  ಹಳಕಟ್ಟಿ ಎಂಬುದು ಇವರ ಮನೆತನದ ಹೆಸರು. ತಂದೆ ಗುರುಬಸಪ್ಪ ವೃತ್ತಿಯಲ್ಲಿ ಶಿಕ್ಷಕರಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಗಳಾಗಿದ್ದರು. ಇಂಗ್ಲೆಂಡಿನ ಇತಿಹಾಸ, ಏಕನಾಥ ಸಾಧುಗಳ ಚರಿತೆ, ಫ್ರಾನ್ಸ್ ದೇಶದ ರಾಜ್ಯಕ್ರಾಂತಿ, ಸಿಕಂದರ ಬಾದಶಹನ ಚರಿತ್ರೆ ಮುಂತಾದ ಕೃತಿಗಳನ್ನು ರಚಿಸಿ ಆ ಕಾಲಕ್ಕೆ ಸಾಹಿತಿಗಳಾಗಿ ಸಾಕಷ್ಟು ಹೆಸರುಗಳಿಸಿದ್ದರು. ಜೊತೆಗೆ ಆಗಿನ ಪ್ರಮುಖ ಪತ್ರಿಕೆಯಾದ "ವಾಗ್ಭೂಷಣ"ದಲ್ಲಿ ಹಲವಾರು ಲೇಖನಗಳನ್ನು ಬರೆದು ನಾಡಿನ ಗಮನ ಸೆಳೆದಿದ್ದರು. ಹೀಗಾಗಿ ಹಳಕಟ್ಟಿಯವರಿಗೆ ಸಾಹಿತ್ಯವೆಂಬುದು ರಕ್ತಗತವಾಗಿ ಒಲಿದು ಬಂದಿತ್ತು. ಹಳಕಟ್ಟಿಯವರು ತಮ್ಮ ಹುಟ್ಟೂರು ಧಾರವಾಡದಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪ್ರಾರಂಭಿಸಿ 1896ರಲ್ಲಿ ಮೆಟ್ರಿಕ್ ಮುಗಿಸಿದರು. ನಂತರ ಮುಂದ

2018ರ ಕರ್ನಾಟಕ ಮಹಿಳಾ ಸಾಧಕರು ಪ್ರಶಸ್ತಿ (KWAA) ಪ್ರದಾನ

Image
---------- Forwarded message --------- From: SOMASHEKHAR BELLUBBI < bellubbi.shekhar@gmail.com > Date: 14:54, Sun, Jul 1, 2018 Subject: 2018ರ ಕರ್ನಾಟಕ ಮಹಿಳಾ ಸಾಧಕರು ಪ್ರಶಸ್ತಿ (KWAA) ಪ್ರದಾನ To: < go@blogger.com >  July 1, 2018 ಬೆಂಗಳೂರು,ಜೂ.01: ಮಹಿಳೆಯರ ಆರೋಗ್ಯಕ್ಕಾಗಿ ಅನನ್ಯ ಸೇವೆ ನೀಡುತ್ತಿರುವ ಆಸ್ಪತ್ರೆ ಫೋರ್ಟಿಸ್ ಲಾ ಫೆಮ್ಮೆ, ರಾಜ್ಯದ ಮಹಿಳೆಯರ ಸಾಧನೆ ಗುರುತಿಸಿ ಗೌರವಿಸಲು ತನ್ನ ಮೊದಲನೆ ಆವೃತಿಯ ಕರ್ನಾಟಕ ಮಹಿಳಾ ಸಾಧಕ ಪ್ರಶಸ್ತಿ 2018 ಸಮಾರಂಭ ಹಮ್ಮಿಕೊಂಡಿತ್ತು. ಸ್ಫೂರ್ತಿವಿಶ್ವಾಸ್ ಮತ್ತು ತಂಡದ ಒಂದು ದಿಟ್ಟ ಹೆಜ್ಜೆಯಾದ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಿನ್ನೆ ವಿವಂತಾ ಬೈ ತಾಜ್ ಯಶವಂತಪುರದಲ್ಲಿ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸುಮಾರು 33 ಜನ ಮಹಿಳೆಯರನ್ನು ಈ ಸಂದರ್ಭದಲ್ಲಿ ಪ್ರಶಸ್ತಿಯೊಂದಿಗೆ ಗೌರವಿಸಲಾಯಿತು. ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಮುಖ್ಯ ಅತಿಥಿಯಾಗಿ, ಶ್ರೀಮತಿ ಚೆನ್ನಮ್ಮದೇವೆಗೌಡ ವಿಶೇಷ ಅತಿಥಿಯಾಗಿ ಭಾಗವಹಿಸಿ ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದರು. ಐಪಿಎಸ್ ಡಿಜಿ ಮತ್ತು ಐಜಿಪಿ ಓಂಪ್ರಕಾಶ್ ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅಭ್ಯಾಗತರಾಗಿ ಭಾಗವಹಿಸಿದ್ದರು. ಕೇವಲ ಸಾಧಕರನ್ನು ಗೌರವಿಸುವುದಕ್ಕೆ ಮಾತ್ರ ಈ ಸಮಾರಂಭ ಸೀಮಿತವಾಗಿರಲಿಲ್ಲ. ಯಾರಿಗೂ ಗೊತ್ತಿಲ್ಲದ ಅನೇಕ ಸಾಧಕರನ್ನು