Posts

SDC SELECTION List of 1:2 candidates eligible for document verification for the post of Second Division Assistant/Jr.Assistant (Residual Parent Cadre)

http://kpsc.kar.nic.in/ELGLIST%20SDA.HTM

ಬಡತನ ಮತ್ತು ಅಂಗವಿಕಲತೆ ನಡುವೆ ಶ್ರೀಮಂತ ಸಾಧನೆ(SSLC\PUC)

Image

ಕಣಜ » » ಕನ್ನಡ ಶಾಲಾ ಪಠ್ಯ ಪುಸ್ತಕಗಳು

* 1ರಿಂದ 10ನೇ ತರಗತಿ ವರೆಗಿನ ಪಠ್ಯ ಲಭ್ಯ * ಪಠ್ಯ ಪುಸ್ತಕ ವಿತರಣೆ ವಿಳಂಬ ಆದರೂ ಪಾಠಕ್ಕಿಲ್ಲ ತೊಂದರೆ * ವೆಬ್ಸೈಟ್ನಿಂದ ಪಠ್ಯ ಡೌನ್ಲೋಡ್ ಮಾಡಿಕೊಳ್ಳಬಹುದು * ಪ್ರೊಜೆಕ್ಟರ್ ಬಳಸಿ ಶಿಕ್ಷಕರು ಪಾಠ ಮಾಡಲು ಅವಕಾಶ ಬಿ.ಎಸ್.ಜಯಪ್ರಕಾಶ್ ನಾರಾಯಣ ಬೆಂಗಳೂರು ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಪುಸ್ತಕ ಬಂದಿಲ್ಲ ಎಂಬ ಗೊಣಗಾಟ ಇನ್ನು ಮಕ್ಕಳಿಗಿಲ್ಲ. ಯಾಕೆಂದರೆ ಶಾಲೆಗಳ ಅರಂಭದಿಂದಲೇ 1 ರಿಂದ 10 ನೇ ತರಗತಿವರೆಗಿನ ಪಠ್ಯ ಪುಸ್ತಕಗಳ 'ಕಣಜ' ಕಂಪ್ಯೂಟರ್ ಪರದೆ ಮೇಲೆಯೇ ಮೂಡಲಿದೆ. ಹೌದು!. ಟೆಂಡರ್, ಮುದ್ರಣ ವಿಳಂಬ ಮುಂತಾದ ಸಬೂಬುಗಳಿಂದ ಪ್ರತೀ ವರ್ಷ ವಿದ್ಯಾರ್ಥಿಗಳಿಗೆ ತೊಂದರೆ ತಪ್ಪಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಿದೆ. ಸರಕಾರ ಪೂರೈಸುವ ಪಠ್ಯ ಪುಸ್ತಕಗಳನ್ನು ಇಲಾಖೆ ನಡೆಸುತ್ತಿರುವ ಮಾಹಿತಿ ಕೋಶ 'ಕಣಜ'ದಲ್ಲಿ (ಘ್ಕಿಡಿಡಿಡಿ.ka್ಞa್ಜa.್ಚಟಞ) ಸೇರಿಸಲಿದೆ. ಕಳೆದ ಕೆಲವು ದಿನಗಳಿಂದ ಪ್ರಾಯೋಗಿಕ ಹಂತದಲ್ಲಿದ್ದ ಈ ಯೋಜನೆ ಮೇ 26ರಿಂದ (ಗುರುವಾರ) ವಿಧ್ಯುಕ್ತವಾಗಿ 'ಕಣಜ'ವನ್ನು ಸೇರಲಿದ್ದು, ಶಾಲೆ ಪುನಾರಂಭವಾಗುತ್ತಿದ್ದಂತೆ, ಸರಕಾರಿ ಶಾಲೆ ಶಿಕ್ಷಕರು ಕುಂಟು ನೆಪ ಹೇಳದೆ ಕಣಜದಿಂದ ಪಠ್ಯ ಡೌನ್ ಲೋಡ್ ಮಾಡಿಕೊಂಡು ಪಾಠ ಆರಂಭಿಸಬಹುದು.ಸರಕಾರವು ಬಹಳ ಹಿಂದಿನಿಂದಲೂ ತನ್ನ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾ...

ಬಾಳೆ ಹಣ್ಣು ಮಾರುವಾತನ ಮಗಳು ಅನಿತಾ ಬಸಪ್ಪ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್

Image
Navigat  Suvarna News: ಕಡುಬಡತನದಲ್ಲಿ ಹುಟ್ಟಿ ಬೆಳೆದ ಅನಿತಾ ಬಸಪ್ಪ ಕಲಾ ವಿಭಾಗದಲ್ಲಿ 585 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಟ್ಯೂಷನ್'ಗೆ ಹೋಗಿ ಅತಿ ಹೆಚ್ಚು ಅಂಕ ಪಡೆಯುವುದು ದೊಡ್ಡ ಸಾಧನೆಯೇನಲ್ಲ. ಆದರೆ ತನ್ನ ಸ್ವಂತ ಪರಿಶ್ರಮದಿಂದಲೇ ಓದಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ ಅನಿತಾ ಬಸಪ್ಪ ಸಾಧನೆ ಎಂಥವರಲ್ಲೂ ಸ್ಪೂರ್ತಿ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ. ಪ್ರತಿದಿನ ಬೆಳಗ್ಗೆ ಐದು ಗಂಟೆಗೆ ಎದ್ದು ತನ್ನ ತಾಯಿಯ ದಿನನಿತ್ಯದ ಕೆಲಸಗಳಿಗೆ ನೆರವಾಗುತ್ತಿದ್ದ ಅನಿತಾ ಇಂದು ಎಲ್ಲರು ಹುಬ್ಬೇರಿಸುವಂತಹ ಸಾಧನೆ ಮಾಡಿದ್ದಾಳೆ. ಈ ಕುರಿತಂತೆ ಸುವರ್ಣ ನ್ಯೂಸ್-ಕನ್ನಡ ಪ್ರಭದೊಂದಿಗೆ ತನ್ನ ಸಂತೊಷವನ್ನು ಹಂಚಿಕೊಂಡಿದ್ದಾಳೆ. ನಾನು   ಇಡೀ   ರಾಜ್ಯಕ್ಕೆ   ಕಲಾ   ವಿಭಾಗದಲ್ಲಿ   ಟಾಪರ್ ಆಗಿರುವ   ವಿಷಯ   ತಿಳಿದು   ಖುಷಿ   ಆಗ್ತಾ   ಇದೆ .  ಹೆಚ್ಚು ಅಂಕ   ಬರುತ್ತೆ   ಎಂದು   ಅಂದುಕೊಂಡಿದ್ದೆ   ಆದರೆ ರಾಜ್ಯಕ್ಕೆ   ಮೊದಲು   ಬರುತ್ತೇನೆಂದು   ನಿರೀಕ್ಷಿಸಿರಲಿಲ್ಲ . ನನ್ನ   ಅಣ್ಣ   ನನಗೆ   ತುಂಬಾ   ಓದೋಕೆ   ತುಂಬಾ   ಹೆಲ್ಪ್ ಮಾಡ್ತಾ   ಇದ್ದ .  ಕೆಎಎಸ್   ಪರೀಕ್ಷೆ   ಪಾಸ್   ಮಾಡಿ ತಹಶೀಲ್ದಾರ್   ಆಗಬೇಕೆಂದಿದ್ದೇನೆ   ಎಂದು   ಅನಿತಾ ಬಸಪ್ಪ   ತನ್ನ   ಮುಂದಿನ   ಗುರಿಯನ್ನು   ನಮ್ಮೊಂದಿಗೆ ಹಂಚಿಕೊಂಡಿದ್ದಾಳೆ . ದಿನನಿತ್ಯ   ಗುರುಗಳು   ಮಾಡಿದ   ಪಾಠವನ್ನು ಮನೆಯಲ...

ಪಿಯು ಫಲಿತಾಂಶ ಪ್ರಕಟ; ಬಾಳೆಹಣ್ಣು ವ್ಯಾಪಾರಿ ಮಗಳು ರಾಜ್ಯಕ್ಕೆ ಟಾಪರ್

Image
ಉದಯವಾಣಿ, May 25, 2016, 10:40 AM IST ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ, ಕೊಡಗು ತೃತೀಯ ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 91 ಕಾಲೇಜುಗಳು ಶೂನ್ಯ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 11 ಗಂಟೆ ವೇಳೆಗೆ ಸರ್ಕಾರದ ಎರಡು ವೆಬ್ಸೈಟ್ಗಳಲ್ಲಿ ಫಲಿತಾಂಶ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಗುರುವಾರ ಆಯಾ ಪಿಯು ಕಾಲೇಜುಗಳಲ್ಲಿ ಫಲಿತಾಂಶ ದೊರೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ.90.48ರಷ್ಟು ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆಯಲ್ಲಿ ಶೇ.90.35ರಷ್ಟು ವಿದ್ಯಾರ್ಥಿಗಳು ಪಾಸ್. ಕೊಡಗು ಜಿಲ್ಲೆಯಲ್ಲಿ ಶೇ.79.35ರಷ್ಟು ವಿದ್ಯಾರ್ಥಿಗಳು ಪಾಸ್. ಯಾದಗಿರಿ ಜಿಲ್ಲೆಯಲ್ಲಿ ಶೇ.44.16ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.60.54ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದರು. ಪ್ರಸಕ್ತ ವರ್ಷ 57.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶಕ್ಕೆ ಈ ವೆಬ್ ಸೈಟ್ ನೋಡಿ: ಸರ್ಕಾರದ www.karresults.nic.in ಮತ್ತು www.puc.kar.nic.in ವೆಬ್ಸೈಟ್ಗಳಲ್ಲಿ ಫಲಿತಾಂಶ ಬಾಳೆಹಣ್ಣ...

ಪಿಯುಸಿ ಫಲಿತಾಂಶ ೨೦೧೬ ಮೇ 25ಕ್ಕೆ ಜಾಲತಾಣಗಳಲ್ಲಿ, ಮೇ 26ಕ್ಕೆ ಕಾಲೇಜುಗಳಲ್ಲಿ

ಬೆಂಗಳೂರು: ಕಳೆದ ಮಾರ್ಚ್ ತಿಂಗಳಲ್ಲಿ ನಡೆಸಲಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇದೇ ಬುಧವಾರ ಪ್ರಕಟಗೊಳ್ಳಲಿದೆ. ಆಯಾ ಪದವಿ ಪೂರ್ವ ಕಾಲೇಜುಗಳಲ್ಲಿ ಮೇ 26ರಂದು ಫಲಿತಾಂಶ ಲಭ್ಯವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ದಿನಾಂಕವನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿದ ಇಲಾಖೆ ನಿರ್ದೇಶಕ ಡಾ.ರಾಮೇಗೌಡ, ಮೇ 25ರಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 12 ಗಂಟೆ ನಂತರ ಜಾಲತಾಣಗಳಲ್ಲಿ ಸಿಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು www.karresults.nic.in ಮತ್ತು www.puc.kar.nic.in ನಲ್ಲಿ ನೋಡಬಹುದು. ಈ ವರ್ಷ ಮೊದಲ ಬಾರಿಗೆ, ಇಲಾಖೆ ಉತ್ತರ ಪತ್ರಿಕೆಗಳನ್ನು ಅಂಚೆ ಮೂಲಕ ಕಳುಹಿಸುವ ಬದಲು ಆನ್ ಲೈನ್ ನಲ್ಲಿ ಜೆರಾಕ್ಸ್ ಪ್ರತಿಯನ್ನು ಪ್ರಕಟಿಸಲಿದೆ. ಇದೇ ಸಂದರ್ಭದಲ್ಲಿ ಖಾಸಗಿ ವೆಬ್ ಸೈಟ್ ಗಳು ಫಲಿತಾಂಶ ಪ್ರಕಟಿಸುವುದನ್ನು ಕೂಡ ಇಲಾಖೆ ನಿಷೇಧಿಸಿದೆ.

ಸ್ನೂಕರ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಪಂಕಜ್

Image
ಮುಂಬೈ, ಮೇ ೨೩- ಭಾರತದ ಖ್ಯಾತ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಪಟು ಪಂಕಜ್ ಆಡ್ವಾಣಿ ಅಬುಧಾಬಿಯಲ್ಲಿ ನಡೆದ ಏಷ್ಯನ್ 6- ರೆಡ್ ಸ್ನೂಕರ್ ಪ್ರಶಸ್ತಿಯನ್ನು ಗೆದ್ದುಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಷ್ಠಿತ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಒಂದೇ ಋತುವಿನಲ್ಲಿ ವಿಶ್ವ ಮತ್ತು ಏಷ್ಯಾ ಖಂಡ ಪ್ರಶಸ್ತಿಗೆ ಭಾಜನರಾದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಕಳೆದ ರಾತ್ರಿ ನಡೆದ ಕಾದಾಟದಲ್ಲಿ ಅಗ್ರ ಸೀಡ್ ಆಟಗಾರ ಮಲೇಷ್ಯಾದ ಕೀನ್ ಹಾಹ್ಹ್ ಅವರನ್ನು 7-5 ಅಂತರದಲ್ಲಿ ಮಣಿಸಿ ಈ ಸಾಧನೆ ಮಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಂಕಜ್ ಆಡ್ವಾಣಿ, 'ಇದು ನನ್ನ ಮೊದಲ ಏಷ್ಯನ್ ಸ್ನೂಕರ್ ಚಾಂಪಿಯನ್ ಶಿಪ್. ಹೀಗಾಗಿ ಸಹಜವಾಗಿಯೇ ಖುಷಿ ಕೊಟ್ಟಿದೆ. ಕಳೆದ ತಿಂಗಳಲ್ಲಿ 15-ರೆಡ್ ಏಷ್ಯನ್ ಸ್ನೂಕರ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಒಂದೇ ವರ್ಷದಲ್ಲಿ 6-ರೆಡ್ ವಿಶ್ವ ಮತ್ತು ಏಷ್ಯನ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರುವುದು ಸಂತಸ ತಂದಿದೆ ಎಂದಿದ್ದಾರೆ. ಪಂಕಜ್ ಆಡ್ವಾಣಿ ಟೀಮ್ ಈವೆಂಟ್ನಲ್ಲಿ ಆದಿತ್ಯಾ ಮೆಹ್ತಾ, ಮನನ್ ಚಂದ್ರ ಮತ್ತು ಕಮಲ್ ಚಾವ್ಲ ಜತೆಗೂಡಿ ಆಡಲಿದ್ದಾರೆ.

ಹೆಂಡ ಇಳಿಸುವವನ ಮಗ ಈಗ ಕೇರಳ ಸಿಎಂ

Image
ಉದಯವಾಣಿ, May 21, 2016, 3:30 AM IST ತಿರುವನಂತಪುರ: ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಪಿಣರಾಯಿ ವಿಜಯನ್ ಹೆಂಡ ಇಳಿಸುವ ವೃತ್ತಿಯಲ್ಲಿ ತೊಡಗಿದ್ದ ಬಡ ಕುಟುಂಬಕ್ಕೆ ಸೇರಿದವರು. ಕರ್ನಾಟಕಕ್ಕೆ ಸಮೀಪದ ಕಣ್ಣೂರು ಜಿಲ್ಲೆಯವರು. ಪ್ರಭಾವಿಯಾಗಿರುವ ಈಳವ ಸಮುದಾಯದವರು. ಅತ್ಯುತ್ತಮ ಸಂಘಟಕ ಎಂಬ ಕೀರ್ತಿಯನ್ನು ಕೇರಳದಲ್ಲಿ ಗಳಿಸಿದ್ದಾರೆ. ಸದ್ಯ ಸಿಪಿಎಂ ಪಾಲಿಟ್ಬ್ಯೂರೋ ಸದಸ್ಯರಾಗಿರುವ ಪಿಣರಾಯಿ, 16 ವರ್ಷ ಸಿಪಿಎಂ ಕೇರಳ ಘಟಕದ ಕಾರ್ಯದರ್ಶಿಯಾಗಿದ್ದರು. ಹೆಚ್ಚು ಮಾತನಾಡುವುದಿಲ್ಲ. ಪಿಣರಾಯಿ ನಗುವುದೂ ಇಲ್ಲ ಎಂದು ಅವರ ವಿರೋಧಿಗಳು ಗೇಲಿ ಮಾಡುತ್ತಾರೆ. 1996-98ರವರೆಗೆ ಇಂಧನ ಸಚಿವರಾಗಿ ಹಲವು ಸುಧಾರಣೆಗಳನ್ನು ಜಾರಿಗೆ ತಂದಿದ್ದರೂ, ಕೆನಡಾ ಕಂಪನಿ ಎಸ್ಎನ್ಸಿ- ಲಾವಲಿನ್ಗೆ ಜಲವಿದ್ಯುತ್ ಘಟಕಗಳ ಆಧುನೀಕರಣ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ನಡೆಸಿದ ಆರೋಪ ಅವರನ್ನು ಕಾಡುತ್ತಿದೆ. ಅಚ್ಚುತಾನಂದನ್ ಗರಡಿಯಲ್ಲೇ ಪಳಗಿದ್ದರೂ, ಅವರ ಬದ್ಧ ವೈರಿಯಾಗಿ ಪರಿವರ್ತನೆಗೊಂಡಿದ್ದಾರೆ. ಸಾರ್ವಜನಿಕ ನಿಂದನೆ ಹಿನ್ನೆಲೆಯಲ್ಲಿ 2007ರಲ್ಲಿ ಪಿಣರಾಯಿ ಹಾಗೂ ಅಚ್ಚುತಾನಂದನ್ ಅವರನ್ನು ಪಾಲಿಟ್ ಬ್ಯೂರೋದಿಂದಲೇ ಅಮಾನತುಗೊಳಿಸಲಾಗಿತ್ತು. ಬಳಿಕ ಮರು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. 1970ರಲ್ಲಿ 26ನೇ ವಯಸ್ಸಿಗೇ ಶಾಸಕರಾಗಿ ಆಯ್ಕೆಯಾಗಿದ್ದ ಪಿಣರಾಯಿ 1977, 1991, 1996ರಲ್ಲೂ ಗೆ...

೧೦ನೇ ತರಗತಿ ಯಲ್ಲಿ ೯೦% ಅಂಕ ಪಡೆದ ವಿದ್ಯಾರ್ಥಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Image

- ಮೇ 25ರಂದು ಪಿಯುಸಿ ಫಲಿತಾಂಶ.

Image
Public TV - ಮೇ 25ರಂದು ಪಿಯುಸಿ ಫಲಿತಾಂಶ. - ಈ ಬಾರಿ ಉತ್ತರ ಪತ್ರಿಕೆ ಸ್ಕ್ಯಾನ್ ಕಾಪಿ ಕೊಡುವ ಉದ್ದೇಶವಿದೆ - ತಂತ್ರಜ್ಞಾನದ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ - ಇದು ಅಂತಿಮವಾದ ತಕ್ಷಣ ಫಲಿತಾಂಶ ಪ್ರಕಟಿಸುತ್ತೇವೆ - 25ರಂದು ಫಲಿತಾಂಶ ಪ್ರಕಟಿಸಲು ಇಲಾಖೆ ಸಜ್ಜಾಗಿದೆ - ಭದ್ರಾವತಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿಕೆ http://www.karresults.nic.in