February 27, 2017 ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಬೆಂಗಳೂರು, ಫೆ.27 – ಕನ್ನಡದ ಮೊಟ್ಟ ಮೊದಲ ಮಾತನಾಡುವ ಸತಿ ಸುಲೋಚನ ಚಿತ್ರ ನೆನಪಿನಲ್ಲಿ ನಡೆಯಲಿರುವ ಕನ್ನಡ ವಾಕ್ಚಿತ್ರ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ 15 ಸಾಧಕರಿಗೆ ಪ್ರಶಸ್ತಿ ನೀಡಿ ಸತ್ಕರಿಸ ಲಾಗುವುದು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿಯು 50 ಸಾವಿರ ನಗದು, ಸ್ಮರಣಿಕೆ, ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಕಳೆದ ಬಾರಿ 10 ಮಂದಿಯನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿತ್ತು. ಈ ಬಾರಿ 15 ಮಂದಿಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು. ಕರ್ನಾಟಕ ಚಲನಚಿತ್ರ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ನಗರದ ಪುಟ್ಟಣಚೆಟ್ಟಿ ಪುರಭವನದಲ್ಲಿ ಮಾ.3ರಂದು ಸಂಜೆ 6 ಗಂಟೆಗೆ ನಡೆಯಲಿರುವ ಪ್ರಶಸ್ತಿ ವಿತರಣಾ ಸಮಾರಂಭವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಉಮಾಶ್ರೀ ಅವರು ಉದ್ಘಾಟಿಸಲಿದ್ದು, ವಸತಿ ಸಚಿವ ಎಂ.ಕೃಷ್ಣಪ್ಪ, ಮಾಜಿ ಸಚಿವ, ನಟ ಅಂಬರೀಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯೆ ಡಾ.ಜಯಮಾಲಾ, ಹಿರಿಯ ಕಲಾವಿದೆ ಡಾ.ಭಾರತಿ ವಿಷ್ಣುವರ್ಧನ್, ನಟ ವಿ.ರವಿಚಂದ್ರನ್, ವಾರ್ತಾ ಮತ್ತು ಸಾರ್ವಜ...