Posts

ಜನಪ್ರಿಯ ಸಾಹಿತಿ ನಿಸಾರ್ ಅಹಮದ್ ಗೆ 'ರಾಷ್ಟ್ರಕವಿ' ಪಟ್ಟ. ನೀಡಲು ಸರ್ಕಾರದ ಚಿಂತನೆ

ಜನಪ್ರಿಯ ಸಾಹಿತಿ ನಿಸಾರ್ ಅಹಮದ್ ಗೆ 'ರಾಷ್ಟ್ರಕವಿ' ಪಟ್ಟ ಬೆಂಗಳೂರು, ಮೇ 31- ಹೆಸರಾಂತ ಸಾಹಿತಿ ಹಾಗೂ ಜನಪ್ರಿಯ ಕವಿ ನಿಸಾರ್ ಅಹಮದ್ ಅವರಿಗೆ ರಾಷ್ಟ್ರಕವಿ ಪಟ್ಟ ಕಟ್ಟಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಗಿರುವ ವಿವೇಚನೆಯ ಅಧಿಕಾರ ಬಳಸಿ ಶೀಘ್ರದಲ್ಲಿಯೇ ರಾಷ್ಟ್ರಕವಿ ಸ್ಥಾನಕ್ಕೆ ನಿಸಾರ್ ಅಹಮದ್ ಅವರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ರಾಷ್ಟ್ರಕವಿ ಪಟ್ಟವನ್ನು ಅಲಂಕರಿಸಿದವರಲ್ಲಿ ಎಂ.ಗೋವಿಂದ ಪೈ ಮೊದಲಿಗರು. ಆನಂತರ ಕವಿ ಡಾ.ಕೆ.ವಿ.ಪುಟ್ಟಪ್ಪ (ಕುವೆಂಪು) ರಾಷ್ಟ್ರಕವಿ ಪ್ರಶಸ್ತಿಗೆ ಭಾಜನರಾಗಿದ್ದರು. ಮೂರನೆಯವರಾಗಿ ಕವಿ ಡಾ.ಜಿ.ಎಸ್.ಶಿವರುದ್ರಪ್ಪ ಅವರು ರಾಷ್ಟ್ರಕವಿಯಾಗಿದ್ದರು. ಜಿ.ಎಸ್.ಶಿವರುದ್ರಪ್ಪ ಅವರು ಇತ್ತೀಚೆಗೆ ನಿಧನರಾಗಿರುವುದರಿಂದ ರಾಷ್ಟ್ರಕವಿ ಸ್ಥಾನ ತೆರವಾಗಿದೆ. ತೆರವಾಗಿರುವ ಸ್ಥಾನಕ್ಕೆ ಸಾಹಿತಿ ಹೆಸರನ್ನು ಶಿಫಾರಸು ಮಾಡಲು ಸರ್ಕಾರ ಹಿರಿಯ ಸಾಹಿತಿ ಕೋ.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಿತ್ತು. ಆದರೆ, ಈ ಸಮಿತಿ ರಾಷ್ಟ್ರಕವಿ ಪಟ್ಟಕ್ಕೆ ಸಾಹಿತಿಗಳ ಹೆಸರನ್ನು ಶಿಫಾರಸು ಮಾಡುವ ಬದಲು ರಾಷ್ಟ್ರಕವಿ ಪ್ರಶಸ್ತಿ ನೀಡುವುದು ಸರಿಯಲ್ಲ. ಇದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬ ವರದಿಯನ್ನು ನೀಡಿದೆ. ಪ್ರಶಸ್ತಿಗೆ ಯಾರ ಹೆ

ತಿಂಗಳ ತಿರುಳು : ಜೂನ್ ೨೦೧೫

Image

World No Tobacco Day (WNTD) is observed around the world every year on May 31

'ಆಹಾರವಿಲ್ಲದೇ ಬದುಕಲು ಸಾಧ್ಯವಿಲ್ಲ ಆದರೆ ತಂಬಾಕು ಇಲ್ಲದೇ ಬದುಕಬಹುದು' ಆಹಾರ ಬೆಳೆವ ರೈತ ಇನ್ನು ಜೋಪಡಿಯಲ್ಲೇ ಇದ್ದಾನೆ. ಸಿಗರೇಟ್ ತಯಾರಿಕಾ ಕಂಪನಿ ಮಾಲಿಕ ಬಹುಮಹಡಿ ಕಟ್ಟಡದಲ್ಲಿದ್ದಾನೆ'. ಇದು ವಾಸ್ತವದ ಸತ್ಯ. ತಂಬಾಕು ಕ್ಯಾನ್ಸರ್ ಕಾರಕ, ಇಂದೇ ತಂಬಾಕು ತ್ಯಜಿಸಿ, ನಾನು ಮುಖೇಶ್ ಗುಟ್ಕಾ ತಿನ್ನುತ್ತಿದೆ... ಶ್ವಾಸಕೋಶದಲ್ಲಿ ಇಷ್ಟೊಂದು ಟಾರ್, ಈ ಬಗೆಯ ಜಾಗೃತಿ ಜಾಹೀರಾತುಗಳನ್ನು ಎಲ್ಲಿಯಾದರೂ ನೋಡಿಯೇ ಇರುತ್ತೀರಿ. ಮೇ 31 ವಿಶ್ವ ತಂಬಾಕು ದಿನ. ಪ್ರತಿವರ್ಷ ಅದೆಷ್ಟೋ ಜೀವಗಳನ್ನು ಬಲಿ ತೆಗೆದುಕೊಳ್ಳುವ ತಂಬಾಕಿಗೆ ಕರುಣೆ ಎಂಬುದೇ ಇಲ್ಲ. ತಂಬಾಕು ನಿಷೇಧ ದಿನ ಮತ್ತೆ ಬಂದಿದೆ. ಈ ಬಾರಿಯಾದರೂ ವ್ಯಸನಿಗಳು ಧೂಮಪಾನ, ಗುಟ್ಕಾ, ಚೈನಿ, ತಂಬಾಕು ಜಗಿಯುವುದಕ್ಕೆ ಫುಲ್ ಸ್ಟಾಪ್ ಹಾಕಬೇಕಿದೆ. ವಿಶ್ವ ತಂಬಾಕು ರಹಿತ ದಿನದ ಹಿನ್ನೆಲೆಯಲ್ಲಿ ಕೆಲ ಸಂಗತಿಗಳನ್ನು ಅವಲೋಕಿಸಬೇಕಾಗುತ್ತದೆ. ಇದನ್ನು ಓದುದ ಮೇಲೆ ನೀವು ತಂಬಾಕು ಬಿಡಲು ಮನಸ್ಸು ಮಾಡಿದರೂ ಮಾಡಬಹುದು. ತಂಬಾಕಿಗೆ ಬಲಿಯಾಗುವವರ ಸಂಖ್ಯೆ ಎಷ್ಟು? ವಿಶ್ವ ಆರೋಗ್ಯ ಸಂಸ್ಥೆ ವರದಿ ಹೇಳುವಂತೆ ತಂಬಾಕಿನ ಚಟಕ್ಕೆ ಪ್ರತಿವರ್ಷ 6 ಮಿಲಿಯನ್ ಜನ ಬಲಿಯಾಗುತ್ತಿದ್ದಾರೆ. ಇದರಲ್ಲಿನ ಧೂಮಪಾನಿಗಳ ಪಾಲೇ(ಶೇ. 90) ಬಹಳ ದೊಡ್ಡದು. ತಂಬಾಕು ಸೇವನೆ ಅಥವಾ ಧೂಮಪಾನ ಕಡಿಮೆಯಾಗಿದೆಯೇ? ಹೌದು .. ಇದೊಂದು ಸಕಾರಾತ್ಮಕ ಬೆಳವಣಿಗೆ. ಜಗತ್ತಿನ 125 ದೇಶಗಳಲ್ಲಿ ಸಿಗರೇಟ್ ಕೊಳ

ಅಮೆರಿಕದ ಪ್ರತಿಷ್ಠಿತ ಸ್ಪೆಲ್ಲಿಂಗ್ ಬೀ ಸ್ಪರ್ಧೆ ಮೈಸೂರು ಮೂಲದ ವನ್ಯಾ ವಿಜೇತೆ

: ವಾಷಿಂಗ್ಟನ್ನಲ್ಲಿ ಶುಕ್ರವಾರ ನಡೆದ ಪ್ರತಿಷ್ಠಿತ 'ಸ್ಪೆಲ್ಲಿಂಗ್ ಬೀ' ಅಂತಿಮ ಸ್ಪರ್ಧೆಯಲ್ಲಿ ವನ್ಯಾ ಶಿವಶಂಕರ್ ಹಾಗೂ ಗೋಕುಲ್ ವೆಂಕಟಾಚಲಂ ಅವರು 2015ರ ಸ್ಕ್ರಿಪ್ಪ್ಸ್ ರಾಷ್ಟ್ರೀಯ ಸ್ಪೆಲ್ಲಿಂಗ್ ಬೀ ಟ್ರೋಫಿ ಪಡೆದುಕೊಂಡರು ಎಎಫ್ಪಿ ಚಿತ್ರ ವಾಷಿಂಗ್ಟನ್ (ಪಿಟಿಐ): ವಾಷಿಂಗ್ಟನ್ನಲ್ಲಿ ನಡೆದ ವಿಶ್ವದ ಪ್ರತಿಷ್ಠಿತ 'ಸ್ಪೆಲ್ಲಿಂಗ್ ಬೀ' ಅಂತಿಮ ಸ್ಪರ್ಧೆಯಲ್ಲಿ ಮೈಸೂರು ಮೂಲದ ವಿದ್ಯಾರ್ಥಿನಿ ಸೇರಿದಂತೆ ಭಾರತ ಮೂಲದ ಇಬ್ಬರು ಅಮೆರಿಕ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಅಂತಿಮ ಸುತ್ತಿನಲ್ಲಿ ಸಮಾನ ಅಂಕ ಗಳಿಸಿದ 13 ವರ್ಷದ ವನ್ಯಾ ಶಿವಶಂಕರ್, ಹಾಗೂ 14 ವರ್ಷದ ಗೋಕುಲ್ ವೆಂಕಟಾಚಲಂ ಅವರನ್ನು ಸ್ಕ್ರಿಪ್ಪ್ಸ್ ರಾಷ್ಟ್ರೀಯ ಸ್ಪೆಲ್ಲಿಂಗ್ ಬೀ ಸ್ಪರ್ಧೆಯ ಜಯಶಾಲಿಗಳೆಂದು ಘೋಷಿಸಲಾಯಿತು.ಚಿನ್ನದ ಟ್ರೋಫಿಯ ಜತೆ ಇಬ್ಬರಿಗೂ ತಲಾ 37 ಸಾವಿರ ಡಾಲರ್ (₨ 23.34 ಲಕ್ಷ) ನಗದು ಬಹುಮಾನ, ಪದಕ ನೀಡಿ ಸನ್ಮಾನಿಸಲಾಯಿತು. ಒಕ್ಲಾಮಾದಲ್ಲಿ ನೆಲೆಸಿರುವ ಭಾರತ ಮೂಲದ ಕೊಲ್ ಶಫೆರ್ ರೇ ಮೂರನೇ ಸ್ಥಾನ ಪಡೆದಿದ್ದಾರೆ. ಒಟ್ಟು 18 ಸ್ಪೆಲ್ಲಿಂಗ್ ಬೀ ಸ್ಪರ್ಧೆಗಳ ಪೈಕಿ 14ರಲ್ಲಿ ಭಾರತ ಮೂಲದ ವಿದ್ಯಾರ್ಥಿಗಳು ಮೇಲುಗೈ ಸಾಧಿಸುವ ಮೂಲಕ ತಮ್ಮ ಪಾರಮ್ಯ ಮರೆದಿದ್ದಾರೆ.ವನ್ಯಾ ಶಿವಶಂಕರ್ ಮೂಲತಃ ಮೈಸೂರಿನವರಾಗಿದ್ದು, ಅವರ ಅಕ್ಕ ಕಾವ್ಯಾ ಅವರು 2009ರಲ್ಲಿ ನಡೆದ ಸ್ಪೆಲ್ಲ

ಪಾವಗಡಕ್ಕೆ ಬಂತು ಏಷ್ಯಾದ ದೊಡ್ಡ ಸೋಲಾರ್ ಪಾರ್ಕ್

Posted by: Gururaj | Sat, May 30, 2015, 15:45 [IST] ತುಮಕೂರು, ಮೇ 30 : ಏಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ತುಮಕೂರು ಜಿಲ್ಲೆ ಪಾವಗಡದಲ್ಲಿ ನಿರ್ಮಾಣ ವಾಗಲಿದೆ. ಸುಮಾರು 10 ಸಾವಿರ ಎಕರೆ ಜಾಗದಲ್ಲಿ ಈ ಪಾರ್ಕ್ ತಲೆ ಎತ್ತಲಿದ್ದು, 2 ಸಾವಿರ ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದೆ. ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ನೆರವಿನೊಂದಿಗೆ ದೇಶದಾದ್ಯಂತ 25 ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ. ಈ ಯೋಜನೆಗಾಗಿ ಕರ್ನಾಟಕದಲ್ಲಿ ಅತಿಹೆಚ್ಚು ಉಷ್ಣಾಂಶವಿರುವ ಪಾವಗಡ ತಾಲೂಕನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಸೋಲಾರ್ ಪಾರ್ಕ್ ನಿರ್ಮಾಣಕ್ಕಾಗಿ ಈಗಾಗಲೇ 10 ಸಾವಿರ ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಒಟ್ಟು 2 ಸಾವಿರ ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ. ಏಷ್ಯಾದಲ್ಲೇ ಇದು ದೊಡ್ಡ ಸೌರ ವಿದ್ಯುತ್ ಪಾರ್ಕ್ ಆಗಲಿದೆ ಎಂದು ರವಿ ಕುಮಾರ್ ವಿವರಣೆ ನೀಡದರು. ಮಧ್ಯಪ್ರದೇಶದಲ್ಲಿ 750 ಮೆ.ವ್ಯಾ, ಆಂಧ್ರಪ್ರದೇಶದಲ್ಲಿ 1 ಸಾವಿರ ಮೆ.ವ್ಯಾ. ಸೋಲಾರ್ ಪಾರ್ಕ್ಗಳಿವೆ. ಇವುಗಳನ್ನು ಹೊರತುಪಡಿಸಿದರೆ ಪಾವಗಡದ 2 ಸಾವಿರ ಮೆ.ವ್ಯಾ. ಸಾಮರ್ಥ್ಯದ ಪಾರ್ಕ್ ಏಷ್ಯಾಕ್ಕೇ ಪ್ರಥಮವಾಗಲಿದೆ ಎಂದು ತಿಳಿಸಿದರು. ಸೌರ ವಿದ

ನೈಜೀರಿಯಾ ಅಧ್ಯಕ್ಷರಾಗಿ ಬುಹಾರ

ಅಬುಜಾ (ಎಎಪ್ಪಿ): ಸೇನಾ ಗೌರವದೊಂದಿಗೆ ನೈಜೀರಿಯಾದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಬುಹಾರಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷೀಯ ಚುನಾವಣೆಯಲ್ಲಿ ಮೊದಲ ಬಾರಿಗೆ ಆಡಳಿತ ಪಕ್ಷದ ಅಭ್ಯರ್ಥಿ ಸೋಲು ಅನುಭವಿಸಿದ್ದು, ವಿರೋಧ ಪಕ್ಷದ ಅಭ್ಯರ್ಥಿ ಬುಹರಿ ಜಯಗಳಿಸುವ ಮೂಲಕ ಅಧ್ಯಕ್ಷರಾಗಿದ್ದಾರೆ. 72 ವರ್ಷದ ಬುಹಾರಿ ಅವರಿಗೆ ನೈಜಿರಿಯಾ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪ್ರಮಾಣ ವಚನ ಬೋಧಿಸಿದರು. ಆರ್ಥಿಕ ಸಂಕಷ್ಟ ಮತ್ತು ಬೊಕೊ ಹರಮ್ ಉಗ್ರಗಾಮಿಗಳ ಉಪಟಳದಿಂದ ದೇಶ ತತ್ತರಿಸಿದ್ದು, ನೂತನ ಅಧ್ಯಕ್ಷರಿಗೆ ಈ ಎರಡೂ ಸಮಸ್ಯೆಗಳು ಸವಾಲಾಗಿವೆ.

ರಾಷ್ಟ್ರೀಯ ಸ್ಪೆಲ್ಲಿಂಗ್ ಬೀ ಸ್ಫರ್ಧೆ ಟೈ ನಲ್ಲಿ ಅಂತ್ಯ (ಯು ಎಸ್ ಎ)

Posted by: Madhusoodhan Hegde | Fri, May 29, 2015, 15:49 [IST] ವಾಷಿಂಗ್ ಟನ್, ಮೇ 29: ರಾಷ್ಟ್ರೀಯ ಸ್ಪೆಲ್ಲಿಂಗ್ ಬೀ ಸ್ಫರ್ಧೆ ಟೈ ನಲ್ಲಿ ಅಂತ್ಯವಾಗಿದೆ. ಇಂಡೋ-ಅಮೇರಿಕನ್ ವನ್ಯಾ ಶಿವಶಂಕರ್ ಮತ್ತು ಗೋಕುಲ್ ವೆಂಕಟಾಚಲಂ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಸುಮಾರು 54 ವರ್ಷದ ನಂತರ ಕಳೆದ ವರ್ಷ(2014) ರಲ್ಲಿ ಸ್ಪೆಲ್ಲಿಂಗ್ ಬೀ ಟೈ ನಲ್ಲಿ ಅಂತ್ಯವಾಗಿತ್ತು. ಈ ಸಾರಿಯೂ ಇಬ್ಬರು ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. ಸಹೋದರಿಯರ ಸಾಧನೆ ಈ ಬಾರಿ ಪ್ರಶಸ್ತಿ ಪಡೆದುಕೊಂಡ ವನ್ಯಾ ಶಿವಶಂಕರ್(13) ಅಕ್ಕ ಕಾವ್ಯಾ 2009ರಲ್ಲಿ ಸ್ಪೆಲ್ಲಿಂಗ್ ಬೀ ವಿಜೇತರಾಗಿದ್ದರು. ಕಾನ್ ಸಾಸ್ ನಿವಾಸಿಯಾಗಿರುವ ವನ್ಯಾ ಅಕ್ಕನ ಸಾಧನೆಯನ್ನು ಸರಿಗಟ್ಟಿದ್ದಾಳೆ. 14 ವರ್ಷದ ವೆಂಕಾಟಾಚಲಂ ಸಾಧನೆ ಅಮೆರಿಕದ ಚೆಸ್ಟರ್ ಫೀಲ್ಡ್ ನಿವಾಸಿ ಗೋಕುಲ್ ವೆಂಕಟಾಚಲಂ ಅವರಿಗೂ ಇದು ಕೊನೆಯ ಅವಕಾಶವಾಗಿತ್ತು. ಇಬ್ಬರು ಸ್ಫರ್ಧಾಳುಗಳು ಐದನೇ ಬಾರಿ ಸ್ಪೆಲ್ಲಿಂಗ್ ಬೀ ನಲ್ಲಿ ಭಾಗಿಯಾಗಿದ್ದರು. ವನ್ಯಾ ಶಿವಕುಮಾರ್ ತನ್ನ ಗೆಲುವನ್ನು ಆಕೆಯ ಅಜ್ಜಿಗೆ ಅರ್ಪಿಸಿದ್ದಾಳೆ. ಕಠಿಣ ಪರಿಶ್ರಮ ಈ ಸಾಧನೆಗೆ ಕಾರಣವಾಯಿತು ಎಂದು ವನ್ಯಾ ಹೇಳುತ್ತಾರೆ. ಕೊನೆಯ ಸುತ್ತು ಎಂದು ನಾನು ಮೊದಲು ಸ್ವಲ್ಪ ಆತ್ಮವಿಶ್ವಾಸ ಕಳೆದಯಕೊಂಡಿದ್ದೆ. ಆದರೆ ನಂತರ ತುರುಸಿನಿಂದ ಭಾಗವಹಿಸಿದೆ ಎಂದು ಗೋಕುಲ್ ಹೇಳಿದ್ದಾರೆ. ಅಂತಿಮ ಸುತ್ತ