ನೂತನ ಅಡ್ವೊಕೇಟ್ ಜನರಲ್ ಮಧುಸೂದನ್ ನಾಯಕ್:
ಬೆಂಗಳೂರು: ಕರ್ನಾಟಕ ಸರಕಾರದ ಅಡ್ವೊಕೇಟ್ ಜನರಲ್ ಆಗಿ ಹಿರಿಯ ನ್ಯಾಯವಾದಿ ಮಧುಸೂದನ್ ನಾಯಕ್ ಅವರನ್ನು ನೇಮಿಸಲಾಗಿದೆ. ಅಡ್ವೊಕೇಟ್ ಜನರಲ್ ಆಗಿದ್ದ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮಕುಮಾರ್ ಅವರು ಅ.27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿದ್ದರು. ದಿಲ್ಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರಿಗೆ ವಾಪಸ್ ಆದ ಬಳಿಕ ಇನ್ನೊಮ್ಮೆ ಚರ್ಚಿಸಿ ರಾಜೀನಾಮೆ ಅಂಗೀಕರಿಸುವ ಬಗ್ಗೆ ತೀರ್ಮಾನಿಸುವೆ ಎಂದು ಹೇಳಿದ್ದರು. ರವಿವರ್ಮಕುಮಾರ್ ರಾಜೀನಾಮೆ ಅಂಗೀಕರಿಸಿದ್ದ ಸಿದ್ದರಾಮಯ್ಯ, ನ.13ರಂದು ನೂತನ ಎ.ಜಿ.ಯಾಗಿ ಮಧುಸೂದನ್ ನಾಯಕ್ ಅವರನ್ನು ನೇಮಿಸಿ ಆದೇಶ ಹೊರಡಿಸುವಂತೆ ಕಾನೂನು ಇಲಾಖೆಗೆ ಸೂಚಿಸಿದ್ದರು. ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಪ್ರೊ. ರವಿವರ್ಮಕುಮಾರ್ ಅವರನ್ನು ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಿದ್ದರು. ಅಹಿಂದ, ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ ದ ರವಿವರ್ಮಕುಮಾರ್, ಸರಕಾರದ ಪ್ರಗತಿಪರ ನಡೆಗೆ ಬೆನ್ನುಲುಬಾಗಿ ನಿಲ್ಲಲಿದ್ದಾರೆ ಎಂಬ ನಂಬಿಕೆಯೂ ಸರಕಾರಕ್ಕೆ ಇತ್ತು. ಭಾಷಾ ಮಾಧ್ಯಮದ ವಿಷಯದಲ್ಲಿ ಅವರು ಸಮರ್ಥವಾಗಿ ವಾದ ಮಂಡಿಸಲಿಲ್ಲ ಎಂದು ಪ್ರತಿಪಕ್ಷ ನಾಯಕರು ಅನೇಕ ಬಾರಿ ಟೀಕಿಸಿದ್ದುಂಟು. ಸಿದ್ದರಾಮಯ್ಯ ಸಂಪುಟದ ಅನೇಕ ಸಚಿವರಿಗೆ ಅವರ ಧೋರಣೆ ಕುರಿತು ಆಕ್ಷೇಪವೂ ಇತ