Posts

ಜೊಕೊವಿಕ್ ನೊವಾಕ್ಗೆ ಆರನೇ ಆಸ್ಟ್ರೇಲಿಯಾ ಕಿರೀಟ:-

Image
ನೊವಾಕ್ಗೆ ಆರನೇ ಆಸ್ಟ್ರೇಲಿಯಾ ಕಿರೀಟ ಏಜೆನ್ಸೀಸ್ | Feb 1, 2016, 04.30 AM IST 3101-2-2-NOVAK A A A -ರಾಯ್ ಎಮರ್ಸನ್ ದಾಖಲೆ ಸರಿಗಟ್ಟಿದ ಜೊಕೊವಿಕ್ ಐದನೇ ಬಾರಿ ಫೈನಲ್ನಲ್ಲಿ ಮುಗ್ಗರಿಸಿದ ಬ್ರಿಟನ್ನ ಆಂಡಿ ಮರ್ರೆ- ಮೆಲ್ಬೋರ್ನ್: ಅಕ್ಷರಶಃ ಅಬ್ಬರದ ಆಟವಾಡಿದ ವಿಶ್ವದ ನಂ.1 ಆಟಗಾರ ಸರ್ಬಿಯಾದ ನೊವಾಕ್ ಜೊಕೊವಿಕ್, ಇಲ್ಲಿ ಮುಕ್ತಾಯಗೊಂಡ ಆಸ್ಟ್ರೇಲಿಯಾ ಓಪನ್ ಗ್ರ್ಯಾನ್ ಸ್ಲ್ಯಾಮ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಬ್ರಿಟನ್ನ ಆ್ಯಂಡಿ ಮರ್ರೆ ಅವರನ್ನು ಬಗ್ಗು ಬಡಿದು ಚಾಂಪಿಯನ್ ಪಟ್ಟ ಅಲಂಕರಿಸಿದರು. ಇಲ್ಲಿನ ರಾಡ್ ಲೆವರ್ ಅರೆನಾದಲ್ಲಿ ಭಾನುವಾರ ನಡೆದ ಹೊನಲು ಬೆಳಕಿನ ಫೈನಲ್ ಪಂದ್ಯದಲ್ಲಿ ಮಿಂಚಿದ ಹಾಲಿ ಚಾಂಪಿಯನ್ ನೊವಾಕ್, 6-1, 7-5, 7-6(7/3)ರ ನೇರ ಸೆಟ್ಗಳಿಂದ ಐದನೇ ಬಾರಿ ಆಸ್ಟ್ರೇಲಿಯಾ ಓಪನ್ ಫೈನಲ್ ಪಂದ್ಯವನ್ನಾಡುತ್ತಿದ್ದ ಆ್ಯಂಡಿ ಮರ್ರೆಗೆ ಸೋಲುಣಿಸಿದರು. ಎರಡು ಗಂಟೆ 53 ನಿಮಿಷಗಳ ಕಾಲ ನಡೆದ ಫೈನಲ್ ಕದನದಲ್ಲಿ ಸಿಕ್ಕಂತಹ ಅಮೋಘ ಗೆಲುವಿನೊಂದಿಗೆ ವೃತ್ತಿ ಬದುಕಿನ ಆರನೇ ಆಸ್ಟ್ರೇಲಿಯಾ ಓಪನ್ ಗ್ರ್ಯಾನ್ ಸ್ಲ್ಯಾಮ್ ಗೆದ್ದ ನೊವಾಕ್ ಜೊಕೊವಿಕ್, ಅತಿ ಹೆಚ್ಚು ಬಾರಿ ಆಸೀಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯ್ ಎಮರ್ಸನ್ (6 ಪ್ರಶಸ್ತಿ) ಅವರ ದಾಖಲೆಯನ್ನು ಸರಿಗಟ್ಟಿದರು. 11ನೇ ಗ್ರ್ಯಾನ್ ಸ್ಲ್ಯಾಮ್ ಗೆಲುವು ಬ್ರಿಟನ್ನ ತಾರೆ ಆ್ಯಂಡಿ ಮರ್ರೆ

ಅಕ್ಕಿ ರಫ್ತು: ಭಾರತ ನಂ.1

Image
ಅಕ್ಕಿ ರಫ್ತು: ಭಾರತ ನಂ.1 1 Feb, 2016 ಬ್ಯಾಂಕಾಕ್ (ಐಎಎನ್ಎಸ್): ಕಳೆದ ವರ್ಷ ಅತಿ ಹೆಚ್ಚು ಅಕ್ಕಿ ರಫ್ತು ಮಾಡಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನದಲ್ಲಿದೆ. 2015ರಲ್ಲಿ ಭಾರತವು ಜಾಗತಿಕ ಮಾರುಕಟ್ಟೆಗೆ 1.2 ಕೋಟಿ ಟನ್ ಅಕ್ಕಿ ರಫ್ತು ಮಾಡಿದ್ದು, ಇಲ್ಲಿಯವರೆಗೆ ಮೊದಲ ಸ್ಥಾನದಲ್ಲಿದ್ದ ಥಾಯ್ಲೆಂಡ್ ಎರಡನೇ ಸ್ಥಾನಕ್ಕೆ ಕುಸಿದಿದೆ. 2014ರಲ್ಲಿ 1.09 ಕೋಟಿ ಟನ್ ಅಕ್ಕಿ ರಫ್ತು ಮಾಡಿದ್ದ ಥಾಯ್ಲೆಂಡ್ನ ಸಾಮರ್ಥ್ಯ 2015ರಲ್ಲಿ 98 ಲಕ್ಷ ಟನ್ಗೆ ಕುಸಿದಿದೆ ಎಂದು ಥಾಯ್ ಅಕ್ಕಿ ರಫ್ತು ಸಂಘದ ಮುಖ್ಯಸ್ಥ ಚಾರೋನ್ ಲೌಥಮ್ಥಾಟ್ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ 25 ಸಾವಿರ ಹುದ್ದೆ ಖಾಲಿ:*

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಒಟ್ಟು 25 ಸಾವಿರದ 749 ಪೊಲೀಸ್ ಹುದ್ದೆಗಳು ಖಾಲಿಯಿವೆ ಎಂದು ಹೈಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಅಂಕಿಅಂಶ ಕುರಿತು ಮಾಹಿತಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನೀಡಿದ್ದ ಹಿನ್ನೆಲೆಯಲ್ಲಿ ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ನೇಮಕಾತಿ ಮತ್ತು ತರಬೇತಿ ವಿಭಾಗ) ರಾಘವೇಂದ್ರ ಔರಾದ್ಕರ್ ಹೈಕೋರ್ಟ್ ಶುಕ್ರವಾರ ಪ್ರಮಾಣ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಎಯಿಂದ ಡಿ ವೃಂದದವರೆಗೆ ಒಟ್ಟು 99 ಸಾವಿರದ 189 ಪೊಲೀಸ್ ಕಾರ್ಯ ನಿರ್ವಾಹಕ ಹುದ್ದೆಗಳು ಭರ್ತಿಯಾಗಿದ್ದು, 25 ಸಾವಿರದ 749 ಹುದ್ದೆಗಳು ಖಾಲಿಯಿವೆ. ಇದರಲ್ಲಿ 10 ಸಾವಿರಕ್ಕೂ ಹೆಚ್ಚು ಪೊಲೀಸ್ ಪೇದೆಗಳ ಹುದ್ದೆಗಳು ಖಾಲಿಯಿವೆ ಎಂದು ಮಾಹಿತಿ ನೀಡಿದ್ದಾರೆ. ಸಚಿವಾಲಯ ಸೇರಿದಂತೆ ತಾಂತ್ರಿಕ ವಿಭಾಗದಲ್ಲಿ 1, 03, 457 ಹುದ್ದೆಗಳು ಮಂಜೂರಾಗಿದ್ದು, 74 ಸಾವಿರದ 389 ಭರ್ತಿಯಾಗಿವೆ. 27 ಸಾವಿರದ 068 ಹುದ್ದೆಗಳು ಖಾಲಿಯಿವೆ. ಒಟ್ಟಾರೆ ಎಯಿಂದ ಡಿ ವೃಂದದವರೆಗೆ ಶೇಕಡಾ 25ರಷ್ಟು ಕಾರ್ಯನಿರ್ವಾಹಕ ಹುದ್ದೆಗಳು ಪೊಲೀಸ್ ಇಲಾಖೆಯಲ್ಲಿ ಭರ್ತಿಯಾಗದೆ ಖಾಲಿ ಉಳಿದಿರುವುದಾಗಿ ತಿಳಿಸಲಾಗಿದೆ.

ಸಾನಿಯಾಮಿರ್ಜಾ- ಮಾರ್ಟೀನಾ ಜೋಡಿಗೆ ಆಸ್ಟ್ರೇಲಿಯನ್ ಡಬಲ್ಸ್ ಪ್ರಶಸ್ತಿ:-

ಮೆಲ್ಬೋರ್ನ್, ಜ.29- ಇಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಡಬಲ್ಸ್ ಪ್ರಶಸ್ತಿಯನ್ನು ಭಾರತದ ಸಾನಿಯಾ ಮಿರ್ಜಾ ಮತ್ತು ಸ್ವಿಡ್ಜರ್ಲ್ಯಾಂಡ್ನ ಮಾರ್ಟೀನಾ ಹಿಂಗೀಸ್ ಜೋಡಿ ಮುಡಿಗೇರಿಸಿಕೊಂಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಚೆಕ್ ರಿಪಬ್ಲಿಕ್ನ ಆಂಡ್ರಿಯಾ ಮತ್ತು ಲ್ಯೂಸಿ ಜೋಡಿಯನ್ನು 7-6, 6-3 ಸೆಟ್ಗಳಿಂದ ಮಣಿಸಿ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದಿದೆ. ಆರಂಭದಲ್ಲಿ ಮುನ್ನಡೆ ಸಾಧಿಸಿದ್ದ ಸಾನಿಯಾ-ಹಿಂಗೀಸ್ ಜೋಡಿಯನ್ನು ಪ್ರಬಲವಾಗಿ ಎದುರೇಟು ನೀಡುವಲ್ಲಿ ಚೆಕ್ನ ಜೋಡಿ ಯಶಸ್ವಿಯಾಗಿತ್ತು. ಆದರೆ, ಟೈಬ್ರೇಕರ್ನಲ್ಲಿ ಚುರುಕಾದ ಆಟದಿಂದ ಪ್ರಥಮ ಸೆಟ್ಅನ್ನು ಕೈ ವಶಪಡಿಸಿಕೊಂಡಿತು. ಆದರೆ, ಎರಡನೆ ಸೆಟ್ನಲ್ಲಿ ಪ್ರಾಬಲ್ಯ ಮೆರೆದು ಸುಲಭವಾಗಿಯೇ ಪಂದ್ಯವನ್ನು ತನ್ನತ್ತ ತೆಗೆದುಕೊಂಡು ಪ್ರಶಸ್ತಿ ಕೂಡ ತನ್ನದಾಗಿಸಿಕೊಂಡರು. ಸತತ ಮೂರು ಗ್ರ್ಯಾಂಡ್ಸ್ಲ್ಯಾಮ್ಗಳನ್ನು ಗೆದ್ದ ಕೀರ್ತಿ (ವಿಂಬಲ್ಡನ್, ಯು.ಎಸ್.ಓಪನ್ ಈಗ ಆಸ್ಟ್ರೇಲಿಯನ್ ಓಪನ್) ಮಹಿಳಾ ಡಬಲ್ಸ್ ಪ್ರಶಸ್ತಿ ಸಾನಿಯಾ- ಮಾರ್ಟಿನಾ ಹಿಂಗೀಸ್ಗೆ ಸಲ್ಲುತ್ತದೆ. ಸತತ ಗೆಲುವಿನ ನಾಗಾಲೋಟದಲ್ಲಿರುವ ಈ ಜೋಡಿ ಈಗ ಹೊಸ ದಾಖಲೆಗೂ ಪಾತ್ರವಾಗಿದೆ..

ಮಾಹಿತಿ ಹಕ್ಕು ಕಾಯ್ದೆಯಡಿ ವಿದ್ಯಾರ್ಥಿಯ ವಿವರ ಬಹಿರಂಗಕ್ಕೆ ಅವಕಾಶವಿಲ್ಲ... ಎಂದು ಕೇಂದ್ರ ಮಾಹಿತಿ ಆಯೋಗವು ಶಾಲೆಗಳಿಗೆ ಮತ್ತು ಶಿಕ್ಷಣ ಇಲಾಖೆಗೆ ಆದೇಶಿಸಿದೆ

Image
Scanned by CamScanner

ರೇಖಾಗೆ ಯಶ್ ಛೋಪ್ರಾ ಪ್ರಶಸ್ತಿ

Image

IIFA ಉತ್ಸವದಲ್ಲಿ ಆರು ಪ್ರಶಸ್ತಿ ಬಾಚಿದ್ದ 'ರಂಗಿತರಂಗ'

Image

ಇನ್ಮುಂದೆ ಪೂರ್ಣ ನಾಡಗೀತೆ

Image

೬೭ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಸಿಯಲ್ಲಿ ಉದಯಿಸಿದ ಭಾರತ GHPS BANAHATTI TOTA, Dt : BAGALKOT

Image

ಪದ್ಮ ಪ್ರಶಸ್ತಿ ಕರ್ನಾಟಕದವರು:

ಪದ್ಮ ಪ್ರಶಸ್ತಿ ಕರ್ನಾಟಕದವರು 26 Jan, 2016       ಶ್ರೀ ಶ್ರೀ ರವಿಶಂಕರ ಗುರೂಜಿ (ಅಧ್ಯಾತ್ಮ) ತಮಿಳುನಾಡು ಮೂಲದ ಶ್ರೀ ಶ್ರೀ ರವಿಶಂಕರ ಗುರೂಜಿ ಬೆಂಗಳೂರಿನಲ್ಲಿ 1981ರಲ್ಲಿ ಆರ್ಟ್‌ ಆಫ್‌ ಲಿವಿಂಗ್‌ ಪ್ರತಿಷ್ಠಾನವನ್ನು ಸ್ಥಾಪಿಸಿದರು. ಈ ಪ್ರತಿಷ್ಠಾನದ ಮೂಲಕ ಜಗತ್ತಿನಾದ್ಯಂತ ಯೋಗ ಹಾಗೂ ಅಧ್ಯಾತ್ಮಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಅವರು ನಡೆಸುತ್ತಿದ್ದಾರೆ. ಒತ್ತಡಮುಕ್ತ, ಹಿಂಸೆಮುಕ್ತ ಸಮಾಜ ನಿರ್ಮಾಣದ ಕನಸು ಹೊಂದಿರುವ ಅವರು, ಶಾಂತಿ ಸ್ಥಾಪನೆಗಾಗಿಯೂ ಶ್ರಮಿಸುತ್ತಿದ್ದಾರೆ. ದೇಶ–ವಿದೇಶಗಳ ಅಪಾರ ಸಂಖ್ಯೆಯ ಅನುಯಾಯಿಗಳನ್ನು ಗುರೂಜಿ ಹೊಂದಿದ್ದಾರೆ. 155 ದೇಶಗಳಲ್ಲಿ ಆರ್ಟ್‌ ಆಫ್‌ ಲಿವಿಂಗ್‌ ಕಾರ್ಯಕ್ರಮ ನಡೆಸಿದ್ದಾರೆ. ಮಾನವೀಯ ಮೌಲ್ಯಗಳನ್ನು ಪ್ರಚುರಪಡಿಸಲು ಅಂತರರಾಷ್ಟ್ರೀಯ ದತ್ತಿ ಸಂಸ್ಥೆಯೊಂದನ್ನೂ ಸ್ಥಾಪಿಸಿದ್ದಾರೆ. ಇದರ ಕೇಂದ್ರ ಸ್ಥಾನ ಜಿನಿವಾದಲ್ಲಿದೆ. ವಾಸುದೇವ ಕಳಕುಂಟೆ ಅತ್ರೆ (ವಿಜ್ಞಾನ ಮತ್ತು ತಂತ್ರಜ್ಞಾನ) ದೇಶದ ಪ್ರಖ್ಯಾತ ವಿಜ್ಞಾನಿಯಾಗಿರುವ ಅತ್ರೆಯವರು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮಾಜಿ ಅಧ್ಯಕ್ಷರು. ಅವರು ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರರಾಗಿಯೂ ಕಾರ್ಯ ನಿರ್ವಹಿಸಿದ್ದರು. 1939ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಅವರು ಯುವಿಸಿಇಯಲ್ಲಿ ಬಿ.ಇ (ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌) ಪದವಿ ಪಡೆದರು. ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ (ಐಐಎಸ್‌ಸಿ) ಸ್ನಾತಕೋ

ಸೈನಾಗೆ ಪದ್ಮಶ್ರೀ ಪ್ರಶಸ್ತಿ:-

Image
ನವದೆಹಲಿ, ಜ. ೨೫- ಗಣರಾಜ್ಯೋತ್ಸವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪ್ರಕಟಿಸುವ ಪದ್ಮಶ್ರೀ ಪ್ರಶಸ್ತಿಗೆ ಕ್ರೀಡಾಪಟು ಸೈನಾ ನೆಹ್ವಾಲ್, ಚಲನಚಿತ್ರ ನಟ ಅನುಪಮ್ ಖೇರ್ ಸೇರಿದಂತೆ ಹಲವಾರು ಮಂದಿಗೆ ಪ್ರಶಸ್ತಿ ನೀಡಲಾಗಿದೆ. ಹಿರಿಯ ಪತ್ರಕರ್ತ ವಿನೋದ್ ರಾಯ್‌ಗೆ ಪದ್ಮ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಚಿತ್ರನಟ ಮನೋಜ್ ಕುಮಾರ್, ಹಿನ್ನಲೆ ಗಾಯಕ ಉದಿತ್ ನಾರಾಯಣ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸಿಂಧು ಮುಡಿಗೆ ಮಲೇಷ್ಯಾ ಬ್ಯಾಡ್ಮಿಂಟನ್ ಗರಿ:*

Image
ಪೆನಾಂಗ್/ಮಲೇಷ್ಯಾ (ಪಿಟಿಐ): 2013ರಲ್ಲಿ ಮಲೇಷ್ಯಾ ಮಾಸ್ಟರ್ಸ್ ಗ್ರ್ಯಾಂಡ್ ಪ್ರೀ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿ ಜಯಿಸಿದ್ದ ಭಾರತದ ಪಿ.ವಿ ಸಿಂಧು ಈಗ ಮತ್ತೊಮ್ಮೆ ಪ್ರಶಸ್ತಿ ಎತ್ತಿ ಹಿಡಿದಿದ್ದಾರೆ. ಈ ಮೂಲಕ 2016ರ ಋತುವನ್ನು ಭರ್ಜರಿಯಾಗಿಯೇ ಆರಂಭಿದ್ದಾರೆ. ಭಾನುವಾರ ಇಲ್ಲಿ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಮೂರನೇ ಶ್ರೇಯಾಂಕಿತ ಆಟಗಾರ್ತಿ ಸಿಂಧು 21– 15, 21–9ರ ನೇರ ಗೇಮ್ಗಳಿಂದ ಸ್ಕಾಟ್ಲೆಂಡ್ನ ಕ್ರಿಸ್ಟಿ ಗಿಲ್ಮೌರ್ ಅವರನ್ನು ಮಣಿಸಿದರು. ಇದು ಸಿಂಧು ಅವರ ವೃತ್ತಿ ಜೀವನದ ಐದನೇ ಹಾಗೂ ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಎರಡನೇ ಪ್ರಶಸ್ತಿಯಾಗಿದೆ.

👉👉Counselling Time table of Belagavi Dist Teachers Recruitment: ಆಯ್ಕೆಯಾದ ಪ್ರಾಥಮಿಕ ಶಾ.ಶಿಕ್ಷಕರ ಕೌನ್ಸಿಲಿಂಗ ವೇಳಾಪಟ್ಟಿ (ಬೆಳಗಾವಿ ಜಿಲ್ಲೆ)

Image

ವಿಮಾನ ದುರಂತದಲ್ಲೇ ನೇತಾಜಿ ಸಾವು :-

Image
ನವದೆಹಲಿ (ಪಿಟಿಐ): ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಕಣ್ಮರೆಗೆ ಸಂಬಂಧಪಟ್ಟ 100 ರಹಸ್ಯ ದಾಖಲೆಗಳ ಡಿಜಿಟಿಲ್ ರೂಪವನ್ನು ಕೇಂದ್ರ ಸರ್ಕಾರ ಶನಿವಾರ ಬಿಡುಗಡೆ ಮಾಡಿದೆ. 1945ರ ಅಗಸ್ಟ್ 18ರಂದು ನಡೆದ ವಿಮಾನ ಅಪಘಾತದಲ್ಲಿ ನೇತಾಜಿ ಮೃತಪಟ್ಟಿದ್ದಾರೆ ಎಂದು 1995ರಲ್ಲಿ ಕೇಂದ್ರ ಸಚಿವ ಸಂಪುಟದ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವುದು ಇದರಲ್ಲಿ ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ ಈ ಕಡತಗಳನ್ನು ದೆಹಲಿಯ ರಾಷ್ಟ್ರೀಯ ಪತ್ರಾಗಾರದಲ್ಲಿ ಇನ್ನು ಸಾರ್ವಜನಿಕರೂ ನೋಡಬಹುದಾಗಿದೆ. 1995ರ ಫೆ.6ರಂದು ಗೃಹ ಕಾರ್ಯದರ್ಶಿ ಕೆ. ಪದ್ಮನಾಭಯ್ಯ ಅವರು ಸಹಿ ಮಾಡಿದ ಸಂಪುಟದ ಟಿಪ್ಪಣಿಯಲ್ಲಿ, 'ವಿಮಾನ ಅಪಘಾತದಲ್ಲಿ ಸುಭಾಷ್ ಚಂದ್ರ ಬೋಸ್ ಮೃತಪಟ್ಟಿರುವುದರಲ್ಲಿ ಯಾವುದೇ ಅನುಮಾನವಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಈ ಅಭಿಪ್ರಾಯವನ್ನು ಒಪ್ಪಿಕೊಂಡಿದೆ' ಎಂದು ಉಲ್ಲೇಖಿಸಲಾಗಿದೆ. ಜಪಾನ್ನಿಂದ ಭಾರತಕ್ಕೆ ನೇತಾಜಿ ಅವರ ಅಸ್ಥಿಯನ್ನು ತರುವ ಬಗ್ಗೆ ಕೇಂದ್ರದ ನಿಲುವು ತಿಳಿಸಲು ಈ ಟಿಪ್ಪಣಿ ತಯಾರಿಸಲಾಗಿತ್ತು. 1991ರಲ್ಲಿ ಅಧಿಕಾರದಲ್ಲಿದ್ದ ಚಂದ್ರಶೇಖರ್ ಅವರ ಸರ್ಕಾರ ಸಹ ವಿಮಾನ ಅಪಘಾತದಲ್ಲೇ ನೇತಾಜಿ ಮೃತಪಟ್ಟಿದ್ದಾರೆ ಎಂದು ಅಭಿಪ್ರಾಯಪಟ್ಟಿತ್ತು ಎನ್ನುವುದು ಕಡತಗಳ ಮೂಲಕ ಬಹಿರಂಗಗೊಂಡಿದೆ. ಬೋಸ್ ಅವರ ಸಾವಿನ ಕುರಿತು ತನಿಖೆ ನಡೆಸಲು ಮತ್ತೊಂದು ತನಿಖಾ ಆಯೋಗ ರಚಿಸ
Image
👉👉Counselling Time table of Bagalkot dist teachers recruitment :-

ಆಯ್ಕೆಯಾದ ಅರ್ಹ ಶಿಕ್ಷಕ ಅಭ್ಯರ್ಥಿಗಳಿಗೆ ಜ. 25, 27, 28ರಂದು ಕೌನ್ಸೆಲಿಂಗ್ @DDPI OFFICE : ನೀಡಬೇಕಾದ ದಾಖಲೆಗಳು ೧)ಅಭ್ಯರ್ಥಿಗಳ ವಿರುದ್ಧ ಕಾಯಂ ವಾಸ ಸ್ಥಳದ ವ್ಯಾಪ್ತಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಪ್ರಮಾಣ ಪತ್ರ ೨)5 ಭಾವಚಿತ್ರ, ೩)ಎಲ್ಲ ಮೂಲ ದಾಖಲೆಗಳು ಹಾಗೂ ೪)ಮೂಲ ದಾಖಲೆಗಳ ಒಂದು ಸೆಟ್ ಜೆರಾಕ್ಸ್ ಪ್ರತಿ

Image
9,511 ಶಾಲಾ ಶಿಕ್ಷಕರ ಆಯ್ಕೆ: ಅಂತಿಮ ಪಟ್ಟಿ ಪ್ರಕಟ ವಿಕ ಸುದ್ದಿಲೋಕ | Jan 23, 2016, 04.00 Am -ಅರ್ಹ ಅಭ್ಯರ್ಥಿಗಳಿಗೆ ಜ. 25, 27, 28ರಂದು ಕೌನ್ಸೆಲಿಂಗ್- ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಸರಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಆಯ್ಕೆಗೆ ಅರ್ಹತೆ ಪಡೆದಿರುವ 9,511 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಶುಕ್ರವಾರ ಅಂತರ್ಜಾಲದಲ್ಲಿ ಪ್ರಕಟಿಸಿದೆ. 1ರಿಂದ 5ನೇ ತರಗತಿವರೆಗಿನ ಕಿರಿಯ ಪ್ರಾಥಮಿಕ ಶಾಲೆಯ 2,511 ಹಾಗೂ 6ರಿಂದ 8ನೇ ತರಗತಿವರೆಗಿನ ಹಿರಿಯ ಪ್ರಾಥಮಿಕ ಶಾಲೆಗಳ 7,000 ಹುದ್ದೆಗಳೂ ಸೇರಿದಂತೆ ಒಟ್ಟು 9,511 ಹುದ್ದೆಗಳ ಆಯ್ಕೆಗೆ ಈ ನೇಮಕ ನಡೆಯಲಿದೆ. ಅರ್ಹರಿಗೆ ಡಿಡಿಪಿಐಗಳ ಕಚೇರಿಯಲ್ಲಿ ಜ. 25, 27 ಮತ್ತು 28ರಂದು ಕೌನ್ಸೆಲಿಂಗ್ ನಡೆಯಲಿದೆ. ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಪಟ್ಟಿಯನ್ನು ಜಿಲ್ಲಾವಾರು ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ದೂರವಾಣಿ ಮೂಲಕ ತಾತ್ಕಾಲಿಕ ಕೌನ್ಸೆಲಿಂಗ್ನ ದಿನಾಂಕ ಹಾಗೂ ಸ್ಥಳ ತಿಳಿಸುವಂತೆ ಆಯಾ ಡಿಡಿಪಿಐಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಕೌನ್ಸೆಲಿಂಗ್, ರೋಸ್ಟರ್/ ಮೆರಿಟ್ ಆಧರಿತ ಪಟ್ಟಿ ಹಾಗೂ ಖಾಲಿ ಹುದ್ದೆಗಳ ವಿವರವನ್ನು ಆಯಾ ಜಿಲ್ಲೆಯ ಉಪನಿರ್ದೇಶಕರ(ಆಡಳಿತ) ಕಚೇರಿಯ ನಾಮಫಲಕದಲ್ಲಿ 25ರಂದು ಬೆಳಗ್ಗೆ 8 ಗಂಟೆಯೊಳಗೆ ಪ್ರಕಟಿಸಲು ನಿರ್ದೇಶನ ನೀಡಲಾಗಿದೆ ಎಂದು ಆ

ಅಂತಿಮ ಪಟ್ಟಿಯಲ್ಲಿ ಆಯ್ಕೆಯಾದ ಶಿಕ್ಷಕರ ಕೌನ್ಸಲಿಂಗ ದಿನಾಂಕ.25 ಜನೇವರಿ ಯಿಂದ 28 ವರೆಗೆ.( May be ಎಲ್ಲ ಜಿಲ್ಲೆಗಳಲ್ಲಿ)

Image

FINAL SELECTION LIST OF ASSISTANT TEACHERS IN GOVERNMENT PRIMARY AND HIGHER PRIMARY SCHOOLS AT DISTRICT LEVEL – 2014-15 NOW AVAILABLE ON WEB

Click below to get District wise selection list with cutoff percentage http://myapp.pstr15.caconline.in/FinalSelectionList.aspx Click below to know your selection status:* http://myapp.pstr15.caconline.in/FinalKeyAnswers.aspx

9500 ಶಿಕ್ಷಕರ ನೇಮಕ ನಾಳೆ ಪ್ರಕಟ:-ಸಂಜೆವಾಣಿ

Image
ಬೆಂಗಳೂರು, ಜ. ೨೨- ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 9,511 ಮಂದಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ನಾಳೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆರತ್ನಾಕರ ಅವರು ಇಂದಿಲ್ಲಿ ತಿಳಿಸಿದರು. ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ತಾಕೀತು ಶಿಕ್ಷಣ ಹಕ್ಕು ಕಾಯ್ದೆ ಅನ್ವಯ ಪೂರ್ವ ಪ್ರಾಥಮಿಕ ತರಗತಿಗಳಾದ ಎಲ್ಕೆಜಿ ಮತ್ತು ಯುಕೆಜಿಯಿಂದಲೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ತಾಕೀತು ಮಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಯಾವ ತರಗತಿಯಿಂದ ಶಿಕ್ಷಣ ಸೌಲಭ್ಯ ಕಲ್ಪಿಸಲಾಗಿದೆಯೋ ಆ ರೀತಿ ಶಿಕ್ಷಣ ಕಾಯ್ದೆ ಅನ್ವಯ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬೇಕು ಎಂದು ಅವರು ಹೇಳಿದರು. 1 ರಿಂದ 12ನೇ ತರಗತಿವರೆಗೂ ಬರುವ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ಪಠ್ಯಕ್ರಮ ಜಾರಿಗೆ ಬರಲಿದೆ ಎಂದರು. ಶೂ ಭಾಗ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ನೀಡಲು ಆಯಾ ಶಾಲೆಗಳ ಅಭಿವೃದ್ಧಿ ಸಮಿತಿಗಳು (ಬೆಟರ್ಮೆಂಟ್ ಕಮಿಟಿ) ಈಗಾಗಲೇ ಹಣ ಕಳುಹಿಸಿರುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇದುವರೆಗೂ ರಾಜ್ಯದಲ್ಲಿನ ಶೇ. 50 ರಷ್ಟು ಶಾಲಾ ಅಭಿವೃದ್ಧಿ

ಕೊಹ್ಲಿ ಮತ್ತೊಂದು ದಾಖಲೆ.. ವೇಗವಾಗಿ 25 ಶತಕ ಸಿಡಿಸಿದ ಡೆಲ್ಲಿ ಡ್ಯಾಶರ್:*

Image
: ಕ್ಯಾನ್ಬೆರಾ: ಆಸ್ಟ್ರೇಲಿಯಾ ವಿರುದ್ಧದ ಮೂರನೇಯ ಏಕದಿನ ಪಂದ್ಯದ ವೇಳೆ ವೇಗವಾಗಿ 7 ಸಾವಿರ ಪೂರೈಸಿದ ದಾಖಲೆ ನಿರ್ಮಿಸಿದ್ದ ಬೆನ್ನಲ್ಲೇ ಟೀಂ ಇಂಡಿಯಾ ಉಪನಾಯಕ ವಿರಾಟ್ ಕೊಹ್ಲಿ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದು, ಅತಿ ವೇಗವಾಗಿ 25 ಶತಕ ಸಿಡಿಸಿದ ಪ್ರಥಮ ಆಟಗಾರ ಎನಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 170 ಏಕದಿನ ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 162ನೇ ಇನ್ನಿಂಗ್ಸ್ನಲ್ಲಿ 25 ಶತಕ ಸಿಡಿಸಿ ಕ್ರಿಕೆಟ್ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ವಿರಾಟ್ ಕೊಹ್ಲಿಯಿಂದ ಏಕದಿನ ಕ್ರಿಕೆಟ್ನಲ್ಲಿ ಮತ್ತೊಂದು ದಾಖಲೆ ನಂತರದ ಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 234 ಇನ್ನಿಂಗ್ಸ್ನಲ್ಲಿ 25 ಶತಕ ಸಿಡಿಸಿದ್ರೆ, ಆಸ್ಟ್ರೇಲಿಯಾದ ಪಾಂಟಿಂಗ್ 279 ಇನ್ನಿಂಗ್ಸ್, ಜಯಸೂರ್ಯ 373 ಇನ್ನಿಂಗ್ಸ್ ಹಾಗೂ ಕುಮಾರ್ ಸಂಗಕ್ಕಾರ್ 379 ಇನ್ನಿಂಗ್ಸ್ನಲ್ಲಿ 25 ಶತಕ ದಾಖಲಿಸಿದ್ದರು. ಆದರೆ ವಿರಾಟ್ ಕೊಹ್ಲಿ ಹೊರತುಪಡಿಸಿ ಉಳಿದವರೆಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.