ಯುಗಾದಿ:
ಯುಗಾದಿ ಹಬ್ಬವನ್ನು ಆಚರಿಸುವುದರ ಮಹತ್ವ ಮತ್ತು ಕಾರಣಗಳು ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ 'ಚೈತ್ರ ಶುಕ್ಲ ಪ್ರತಿಪದೆ. 'ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧ ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ. ನೈಸಗಿಕ ಕಾರಣಗಳು: ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ - ಸಂಪಾತದ ಮೇಲೆ ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ) ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತ ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ 'ಕುಸುಮಾಕರಿ ವಸಂತ ಋತುವು ನನ್ನ ವಿಭೂತಿಯಾಗಿದೆ' ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (೧೦:೩೫) ಹೇಳಿದ್ದಾನೆ. ಈ ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ ವಾತಾವರಣವಿರುತ್ತದೆ. ಶಿಶಿರ ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪ್ರತಿಪದೆಯ ಸಮಯದಲ್ಲಿ ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲ