Posts

ಬ್ರಿಟನ್​ಗೆ ಸ್ವಾತಂತ್ರ್ಯ

ಬ್ರಿಟನ್ ನಿರ್ಗಮನ ಒಕ್ಕೂಟ ಕಂಗಾಲು ಮಾರುಕಟ್ಟೆ ತಲ್ಲಣ ದೇಶದ ಆರ್ಥಿಕತೆಗೆ ಹೊರೆಯಾಗಿ ಬಿಳಿಯಾನೆ ಎಂಬ ಅಪವಾದ ಹೊತ್ತಿದ್ದ ಐರೋಪ್ಯ ಒಕ್ಕೂಟ(ಇಯು) ದಿಂದ ಕೊನೆಗೂ ಬ್ರಿಟನ್ ಹೊರಬರಲಿದೆ. ಚಾರಿತ್ರಿಕ ರೆಫರೆಂಡಮ್ೆ ಆದೇಶಿಸಿದ್ದ ಬ್ರಿಟನ್ ಸರ್ಕಾರ ಜನಾದೇಶಕ್ಕೆ ತಲೆಬಾಗಿದೆ. ಒಕ್ಕೂಟದಿಂದ ಬ್ರಿಟನ್ ಹೊರಹೋಗುವ ಪರವಾಗಿ (ಬ್ರೆಕ್ಸಿಟ್) ಶೇ.51.9 ಹಾಗೂ ವಿರುದ್ಧವಾಗಿ (ಬ್ರೆಮೇನ್) ಶೇ.48.1 ಜನರು ಮತ ಚಲಾಯಿಸಿದ್ದಾರೆ. ಆ ಮೂಲಕ 43 ವರ್ಷಗಳ ನಂತರ ಬ್ರಿಟನ್ ಅಧಿಕೃತವಾಗಿ ಒಕ್ಕೂಟದಿಂದ ಹೊರಹೋಗಲಿರುವ ಪ್ರಥಮ ದೇಶವಾಗಲಿದೆ. ಒಟ್ಟಾರೆ ಈ ಬೆಳವಣಿಗೆಯ ಸಾಧಕ-ಬಾಧಕ, ಒಕ್ಕೂಟದ ಮುಂದಿರುವ ಸವಾಲುಗಳ ವಿವರ ಇಲ್ಲಿದೆ. ಬ್ರಿಟನ್ ಹೊರಹೋಗಿದ್ದೆ ೕಕೆ ಬ್ರಿಟನ್ ಸಿರಿವಂತ ದೇಶವಾಗಿದ್ದರೂ ಐರೋಪ್ಯ ಒಕ್ಕೂಟವನ್ನು ಮುನ್ನಡೆಸುವ ಹೊಣೆಗಾರಿಕೆ ಅದರ ಆರ್ಥಿಕತೆಗೂ ಭಾರವಾಗಿತ್ತು. ಜತೆಗೆ ಒಕ್ಕೂಟದ ನೀತಿಯಿಂದಾಗಿ ಸದಸ್ಯ ರಾಷ್ಟ್ರಗಳ ನಡುವೆ ವಲಸೆಗೆ ನಿರ್ಬಂಧವಿಲ್ಲದ ಪರಿಣಾಮ ವಲಸೆ ಹೆಚ್ಚಾಗಿ ಸ್ಥಳೀಯರು ನಿರುದ್ಯೋಗ ಸಮಸ್ಯೆ ಎದುರಿಸುವಂತಾಗಿತ್ತು. ಇದೀಗ ಒಕ್ಕೂಟದಿಂದ ಹೊರಬಂದಿರುವ ಕಾರಣ ಬ್ರಿಟನ್ ಆರ್ಥಿಕ ಹೊರೆ ತಗ್ಗಲಿದೆ. ಜತೆಗೆ ವಲಸೆ ಹಾಗೂ ನಿರುದ್ಯೋಗ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ದಿಂದ ಪ್ರೌಢ ಶಾಲೆ ಶಿಕ್ಷಕರ ವೃಂದಕ್ಕೆ ಬಡ್ತಿ ನೀಡುವ ಸಂಬಂದ

Image

CLICK HERE TO ENTER THE DEPT. PREFERENCES FOR THE POST OF SECOND DIVISION ASSISTANT/JR.ASSISTANT

http://www.kpscapps1.com/fda_sda_2015/

LIST OF CANDIDATES ELIGIBLE FOR DOCUMENT VERIFICATION FOR THE POST OF JR.ASSISTANT(FOOD AND CIVIL SUPPLIES)

http://kpsc.kar.nic.in/ELGLIST%20OF%20JR%20ASST.htm

Non Teaching Transfer Guidelines for the year 2016-17.

http://schooleducation.kar.nic.in/pdffiles/NTTransferGuidelines060616.PDF

ಸರ್ಕಾರಿ ಶಾಲೆ: 'ವಿದ್ಯಾಂಜಲಿ'ಗೆ 16 ರಂದು ಚಾಲನೆ

ನವದೆಹಲಿ: ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮುಂದಾಗಿರುವ ಕೇಂದ್ರ ಸರ್ಕಾರ, ಶೀಘ್ರ 'ವಿದ್ಯಾಂಜಲಿ' ಎಂಬ ಹೊಸ ಕಾರ್ಯಕ್ರಮ ಆರಂಭಿಸಲಿದೆ. ಸರ್ಕಾರಿ ಶಾಲೆಗಳಲ್ಲಿನ ಬೋಧನಾ ವ್ಯವಸ್ಥೆ ಸುಧಾರಣೆಗೆ ಮತ್ತು ಶಿಕ್ಷಕರ ಕೊರತೆ ನೀಗಿಸುವಲ್ಲಿ 'ವಿದ್ಯಾಂಜಲಿ' ನೆರವಾಗಲಿದೆ. ಇದಕ್ಕಾಗಿ ನಾಗರಿಕ ಸೇವೆ ಸಲ್ಲಿಸಿ ನಿವೃತ್ತರಾದವರು ಸೇರಿದಂತೆ ಬೋಧನೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾಭಿಮಾನಿಗಳನ್ನು ಬಳಸಿಕೊಳ್ಳಲಾಗುತ್ತದೆ. ವಿದ್ಯಾಂಜಲಿ ಕಾರ್ಯಕ್ರಮಕ್ಕೆ ಜೂನ್ 16 ರಂದು ಚಾಲನೆ ನೀಡಲಾಗುತ್ತದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಾಲೆಗಳಲ್ಲಿ ಬೋಧನೆ ಮಾಡಲು ಮುಂದಾಗುವ 'ಸ್ವಯಂಸೇವಕ'ರಿಗೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ವೇದಿಕೆ ರೂಪಿಸಿದೆ. 'ವಿದ್ಯಾಂಜಲಿ' ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ದೇಶದ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಇದರಿಂದ ವಿದ್ಯಾರ್ಥಿಗಳು ಗುಣಮಟ್ಟದ ಬೋಧನೆಯಿಂದ ವಂಚಿತರಾಗುತ್ತಿದ್ದಾರೆ. ಈ ಕೊರತೆ ನೀಗಿಸಲು 'ಸ್ವಯಂಪ್ರೇರಿತರ' ಗುಂಪು ರಚನೆಯಾಗಲಿದೆ. ಇವರು ತಮ್ಮ ಅಮೂಲ್ಯ ಸಮಯವನ್ನು ವಿದ್ಯಾರ್ಥಿಗಳಿಗಾಗಿ ವಿನಿಯೋಗಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ತಿಂಗಳ ಬಾನುಲಿ ಭಾಷಣ 'ಮನದ ಮಾತು'ವಿನಲ್ಲಿ ವಿದ್ಯಾಂಜಲಿ

ವಿಶ್ವ ಪರಿಸರ ದಿನದ ಹುಟ್ಟು*... 05 Jun 2016

* ನಮ್ಮ ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಹಾಗೂ ಆ ಬಗ್ಗೆ ವಿಶ್ವಾದ್ಯಂತ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವಸಂಸ್ಥೆ 1974ರ ಜೂನ್ 5ರಂದು 'ವಿಶ್ವ ಪರಿಸರ ದಿನ'ವನ್ನು ಆರಂಭಿಸಿತು. ಅಲ್ಲಿಂದ ಮುಂದೆ ವಿಶ್ವದ 100ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಪ್ರತಿವರ್ಷವೂ ಈ ದಿನವನ್ನು ಆಚರಿಸಲಾಗುತ್ತಿದೆ. ಪರಿಸರದ ಕುರಿತು ಜನಜಾಗೃತಿ ಮೂಡಿಸಲು ಈ ದಿನವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಪ್ರತಿ ವರ್ಷ ಈ ದಿನವನ್ನು ಒಂದು ಧ್ಯೇಯದೊಂದಿಗೆ ಆಚರಿಸಲಾಗುತ್ತದೆ. *ಈ ವಷ೯ದ ಧ್ಯೇಯ ವಾಕ್ಯ "ವನ್ಯ ಜೀವಿಗಳ ಕಾನೂನುಬಾಹಿರ ಮ‌ಾರಾಟದ ವಿರುಧ್ದ ಹೋರಾಟ*" ಈ ಧ್ಯೇಯವು ಪರಿಸರಕ್ಕೆ ಸಂಬಂಧಿಸಿ ಕಾಳಜಿ ವಹಿಸಬೇಕಾದ ಯಾವುದೋ ಒಂದು ವಿಚಾರವನ್ನು ಒಳಗೊಂಡಿರುತ್ತದೆ. ಈ ಧ್ಯೇಯಕ್ಕೆ ಅನುಗುಣವಾಗಿ ಆ ವರ್ಷದ ಪರಿಸರ ದಿನದ ಲಾಂಛನವನ್ನೂ ರೂಪಿಸಲಾಗುತ್ತದೆ. ಪ್ರತಿವರ್ಷವೂ ಬೇರೆ ಬೇರೆ ರಾಷ್ಟ್ರಗಳಲ್ಲಿ ಈ ದಿನದ ಅಧಿಕೃತ ಆಚರಣೆ ನಡೆಯುತ್ತದೆ. ಆ ವರ್ಷದ ಧ್ಯೇಯಕ್ಕೆ ಅನುಗುಣವಾಗಿ ಹೆಚ್ಚಿನ ಪರಿಸರ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಷ್ಟ್ರವನ್ನು ಆರಿಸಿಕೊಂಡು ಅಲ್ಲಿನ ತೊಂದರೆ ಪರಿಹರಿಸಲು ಪ್ರಯತ್ನಿಸಲಾಗುತ್ತದೆ. ಈ ವರ್ಷ ಅಂಗೋಲಾದಲ್ಲಿ ವಿಶ್ವ ಪರಿಸರ ದಿನ ಆಯೋಜನೆಗೊಂಡಿದೆ.

ಬಾಕ್ಸಿಂಗ್ ದಂತಕಥೆ ಮೊಹಮ್ಮದ್ ಅಲಿ ನಿಧನ

Image
ಫೂನಿಕ್ಸ್, ಶನಿವಾರ, 4 ಜೂನ್ 2016 (11:47 IST) ಬಹಳ ದಿನಗಳಿಂದ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಬಾಕ್ಸಿಂಗ್ ದಂತಕಥೆ ಮೊಹಮ್ಮದ್ ಅಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಹಲವು ದಿನಗಳಿಂದ ಅಮೆರಿಕಾದ ಫೂನಿಕ್ಸ್ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲಿ ಕುಟುಂಬದ ವಕ್ತಾರರು ಕೂಡ ಅವರ ನಿಧನ ವಾರ್ತೆಯನ್ನು ದೃಢಪಡಿಸಿದ್ದಾರೆ. 32 ವರ್ಷಗಳ ದೀರ್ಘ ಕಾಲದಿಂದ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಸಾವನ್ನಪ್ಪಿದ್ದಾರೆ ಎಂದು ವಕ್ತಾರ ಬೊಂಬ್ ಗುನ್ನೆಲ್ ಪ್ರಕಟಣೆ ಹೊರಹಾಕಿದ್ದಾರೆ. ಹೆವಿವೇಟ್ ಬಾಕ್ಸಿಂಗ್ನಲ್ಲಿ ಮೂರು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಅವರು ತಾವಾಡಿದ್ದ 61 ಪಂದ್ಯಗಳಲ್ಲಿ 56 ರಲ್ಲಿ ಜಯ ಪಡೆದು ಬಾಕ್ಸಿಂಗ್ ದಂತಕಥೆ ಎನಿಸಿಕೊಂಡಿದ್ದಾರೆ. ಟ್ರೆವರ್ ಬೆರ್ಬಿಕ್ ಎಂಬುವರ ವಿರುದ್ದ 1981 ರಲ್ಲಿ ಸೋಲುಂಡ ಬಳಿಕ ಬಾಕ್ಸಿಂಗ್​ಗೆ ವಿದಾಯ ಹೇಳಿದ್ದ ಅವರು ಮೂರು ವರ್ಷದ ಬಳಿಕ ಪಾರ್ಕಿನ್ಸನ್ ಕಾಯಿಲೆಗೆ ತುತ್ತಾಗಿದ್ದರು. ನ್ಯೂಯಾರ್ಕ್ನಲ್ಲಿ (1971ರ ಮಾರ್ಚ್) ಜೋ ಫ್ರೇಜರ್ ಮತ್ತು ಅಲಿ ನಡುವೆ ನಡೆದ ಕದನ 'ಫೈಟ್ ಆಫ್ ದಿ ಸೆಂಚುರಿ' ಎಂದೇ ಪ್ರಸಿದ್ಧಿ ಪಡೆದಿದೆ.

"ಖಾಸಗಿ ಶಾಲೆಗಳು ನೀಡುವ 'ವರ್ಗಾವಣೆ ಪ್ರಮಾಣಪತ್ರ' ಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೇಲು ಸಹಿ ಅಗತ್ಯವಿಲ್ಲ"

Image

SDC SELECTION List of 1:2 candidates eligible for document verification for the post of Second Division Assistant/Jr.Assistant (Residual Parent Cadre)

http://kpsc.kar.nic.in/ELGLIST%20SDA.HTM

ಬಡತನ ಮತ್ತು ಅಂಗವಿಕಲತೆ ನಡುವೆ ಶ್ರೀಮಂತ ಸಾಧನೆ(SSLC\PUC)

Image

ಕಣಜ » » ಕನ್ನಡ ಶಾಲಾ ಪಠ್ಯ ಪುಸ್ತಕಗಳು

* 1ರಿಂದ 10ನೇ ತರಗತಿ ವರೆಗಿನ ಪಠ್ಯ ಲಭ್ಯ * ಪಠ್ಯ ಪುಸ್ತಕ ವಿತರಣೆ ವಿಳಂಬ ಆದರೂ ಪಾಠಕ್ಕಿಲ್ಲ ತೊಂದರೆ * ವೆಬ್ಸೈಟ್ನಿಂದ ಪಠ್ಯ ಡೌನ್ಲೋಡ್ ಮಾಡಿಕೊಳ್ಳಬಹುದು * ಪ್ರೊಜೆಕ್ಟರ್ ಬಳಸಿ ಶಿಕ್ಷಕರು ಪಾಠ ಮಾಡಲು ಅವಕಾಶ ಬಿ.ಎಸ್.ಜಯಪ್ರಕಾಶ್ ನಾರಾಯಣ ಬೆಂಗಳೂರು ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಪುಸ್ತಕ ಬಂದಿಲ್ಲ ಎಂಬ ಗೊಣಗಾಟ ಇನ್ನು ಮಕ್ಕಳಿಗಿಲ್ಲ. ಯಾಕೆಂದರೆ ಶಾಲೆಗಳ ಅರಂಭದಿಂದಲೇ 1 ರಿಂದ 10 ನೇ ತರಗತಿವರೆಗಿನ ಪಠ್ಯ ಪುಸ್ತಕಗಳ 'ಕಣಜ' ಕಂಪ್ಯೂಟರ್ ಪರದೆ ಮೇಲೆಯೇ ಮೂಡಲಿದೆ. ಹೌದು!. ಟೆಂಡರ್, ಮುದ್ರಣ ವಿಳಂಬ ಮುಂತಾದ ಸಬೂಬುಗಳಿಂದ ಪ್ರತೀ ವರ್ಷ ವಿದ್ಯಾರ್ಥಿಗಳಿಗೆ ತೊಂದರೆ ತಪ್ಪಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಂದಾಗಿದೆ. ಸರಕಾರ ಪೂರೈಸುವ ಪಠ್ಯ ಪುಸ್ತಕಗಳನ್ನು ಇಲಾಖೆ ನಡೆಸುತ್ತಿರುವ ಮಾಹಿತಿ ಕೋಶ 'ಕಣಜ'ದಲ್ಲಿ (ಘ್ಕಿಡಿಡಿಡಿ.ka್ಞa್ಜa.್ಚಟಞ) ಸೇರಿಸಲಿದೆ. ಕಳೆದ ಕೆಲವು ದಿನಗಳಿಂದ ಪ್ರಾಯೋಗಿಕ ಹಂತದಲ್ಲಿದ್ದ ಈ ಯೋಜನೆ ಮೇ 26ರಿಂದ (ಗುರುವಾರ) ವಿಧ್ಯುಕ್ತವಾಗಿ 'ಕಣಜ'ವನ್ನು ಸೇರಲಿದ್ದು, ಶಾಲೆ ಪುನಾರಂಭವಾಗುತ್ತಿದ್ದಂತೆ, ಸರಕಾರಿ ಶಾಲೆ ಶಿಕ್ಷಕರು ಕುಂಟು ನೆಪ ಹೇಳದೆ ಕಣಜದಿಂದ ಪಠ್ಯ ಡೌನ್ ಲೋಡ್ ಮಾಡಿಕೊಂಡು ಪಾಠ ಆರಂಭಿಸಬಹುದು.ಸರಕಾರವು ಬಹಳ ಹಿಂದಿನಿಂದಲೂ ತನ್ನ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾ

ಬಾಳೆ ಹಣ್ಣು ಮಾರುವಾತನ ಮಗಳು ಅನಿತಾ ಬಸಪ್ಪ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್

Image
Navigat  Suvarna News: ಕಡುಬಡತನದಲ್ಲಿ ಹುಟ್ಟಿ ಬೆಳೆದ ಅನಿತಾ ಬಸಪ್ಪ ಕಲಾ ವಿಭಾಗದಲ್ಲಿ 585 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಟ್ಯೂಷನ್'ಗೆ ಹೋಗಿ ಅತಿ ಹೆಚ್ಚು ಅಂಕ ಪಡೆಯುವುದು ದೊಡ್ಡ ಸಾಧನೆಯೇನಲ್ಲ. ಆದರೆ ತನ್ನ ಸ್ವಂತ ಪರಿಶ್ರಮದಿಂದಲೇ ಓದಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ ಅನಿತಾ ಬಸಪ್ಪ ಸಾಧನೆ ಎಂಥವರಲ್ಲೂ ಸ್ಪೂರ್ತಿ ಮೂಡಿಸುವುದರಲ್ಲಿ ಅನುಮಾನವೇ ಇಲ್ಲ. ಪ್ರತಿದಿನ ಬೆಳಗ್ಗೆ ಐದು ಗಂಟೆಗೆ ಎದ್ದು ತನ್ನ ತಾಯಿಯ ದಿನನಿತ್ಯದ ಕೆಲಸಗಳಿಗೆ ನೆರವಾಗುತ್ತಿದ್ದ ಅನಿತಾ ಇಂದು ಎಲ್ಲರು ಹುಬ್ಬೇರಿಸುವಂತಹ ಸಾಧನೆ ಮಾಡಿದ್ದಾಳೆ. ಈ ಕುರಿತಂತೆ ಸುವರ್ಣ ನ್ಯೂಸ್-ಕನ್ನಡ ಪ್ರಭದೊಂದಿಗೆ ತನ್ನ ಸಂತೊಷವನ್ನು ಹಂಚಿಕೊಂಡಿದ್ದಾಳೆ. ನಾನು   ಇಡೀ   ರಾಜ್ಯಕ್ಕೆ   ಕಲಾ   ವಿಭಾಗದಲ್ಲಿ   ಟಾಪರ್ ಆಗಿರುವ   ವಿಷಯ   ತಿಳಿದು   ಖುಷಿ   ಆಗ್ತಾ   ಇದೆ .  ಹೆಚ್ಚು ಅಂಕ   ಬರುತ್ತೆ   ಎಂದು   ಅಂದುಕೊಂಡಿದ್ದೆ   ಆದರೆ ರಾಜ್ಯಕ್ಕೆ   ಮೊದಲು   ಬರುತ್ತೇನೆಂದು   ನಿರೀಕ್ಷಿಸಿರಲಿಲ್ಲ . ನನ್ನ   ಅಣ್ಣ   ನನಗೆ   ತುಂಬಾ   ಓದೋಕೆ   ತುಂಬಾ   ಹೆಲ್ಪ್ ಮಾಡ್ತಾ   ಇದ್ದ .  ಕೆಎಎಸ್   ಪರೀಕ್ಷೆ   ಪಾಸ್   ಮಾಡಿ ತಹಶೀಲ್ದಾರ್   ಆಗಬೇಕೆಂದಿದ್ದೇನೆ   ಎಂದು   ಅನಿತಾ ಬಸಪ್ಪ   ತನ್ನ   ಮುಂದಿನ   ಗುರಿಯನ್ನು   ನಮ್ಮೊಂದಿಗೆ ಹಂಚಿಕೊಂಡಿದ್ದಾಳೆ . ದಿನನಿತ್ಯ   ಗುರುಗಳು   ಮಾಡಿದ   ಪಾಠವನ್ನು ಮನೆಯಲ

ಪಿಯು ಫಲಿತಾಂಶ ಪ್ರಕಟ; ಬಾಳೆಹಣ್ಣು ವ್ಯಾಪಾರಿ ಮಗಳು ರಾಜ್ಯಕ್ಕೆ ಟಾಪರ್

Image
ಉದಯವಾಣಿ, May 25, 2016, 10:40 AM IST ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ, ಕೊಡಗು ತೃತೀಯ ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 91 ಕಾಲೇಜುಗಳು ಶೂನ್ಯ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 11 ಗಂಟೆ ವೇಳೆಗೆ ಸರ್ಕಾರದ ಎರಡು ವೆಬ್ಸೈಟ್ಗಳಲ್ಲಿ ಫಲಿತಾಂಶ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಗುರುವಾರ ಆಯಾ ಪಿಯು ಕಾಲೇಜುಗಳಲ್ಲಿ ಫಲಿತಾಂಶ ದೊರೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆ ಶೇ.90.48ರಷ್ಟು ವಿದ್ಯಾರ್ಥಿಗಳು ತೇರ್ಗಡೆ, ಉಡುಪಿ ಜಿಲ್ಲೆಯಲ್ಲಿ ಶೇ.90.35ರಷ್ಟು ವಿದ್ಯಾರ್ಥಿಗಳು ಪಾಸ್. ಕೊಡಗು ಜಿಲ್ಲೆಯಲ್ಲಿ ಶೇ.79.35ರಷ್ಟು ವಿದ್ಯಾರ್ಥಿಗಳು ಪಾಸ್. ಯಾದಗಿರಿ ಜಿಲ್ಲೆಯಲ್ಲಿ ಶೇ.44.16ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.60.54ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದರು. ಪ್ರಸಕ್ತ ವರ್ಷ 57.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶಕ್ಕೆ ಈ ವೆಬ್ ಸೈಟ್ ನೋಡಿ: ಸರ್ಕಾರದ www.karresults.nic.in ಮತ್ತು www.puc.kar.nic.in ವೆಬ್ಸೈಟ್ಗಳಲ್ಲಿ ಫಲಿತಾಂಶ ಬಾಳೆಹಣ್ಣ

ಪಿಯುಸಿ ಫಲಿತಾಂಶ ೨೦೧೬ ಮೇ 25ಕ್ಕೆ ಜಾಲತಾಣಗಳಲ್ಲಿ, ಮೇ 26ಕ್ಕೆ ಕಾಲೇಜುಗಳಲ್ಲಿ

ಬೆಂಗಳೂರು: ಕಳೆದ ಮಾರ್ಚ್ ತಿಂಗಳಲ್ಲಿ ನಡೆಸಲಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇದೇ ಬುಧವಾರ ಪ್ರಕಟಗೊಳ್ಳಲಿದೆ. ಆಯಾ ಪದವಿ ಪೂರ್ವ ಕಾಲೇಜುಗಳಲ್ಲಿ ಮೇ 26ರಂದು ಫಲಿತಾಂಶ ಲಭ್ಯವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶ ದಿನಾಂಕವನ್ನು ಇಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿದ ಇಲಾಖೆ ನಿರ್ದೇಶಕ ಡಾ.ರಾಮೇಗೌಡ, ಮೇ 25ರಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 12 ಗಂಟೆ ನಂತರ ಜಾಲತಾಣಗಳಲ್ಲಿ ಸಿಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು www.karresults.nic.in ಮತ್ತು www.puc.kar.nic.in ನಲ್ಲಿ ನೋಡಬಹುದು. ಈ ವರ್ಷ ಮೊದಲ ಬಾರಿಗೆ, ಇಲಾಖೆ ಉತ್ತರ ಪತ್ರಿಕೆಗಳನ್ನು ಅಂಚೆ ಮೂಲಕ ಕಳುಹಿಸುವ ಬದಲು ಆನ್ ಲೈನ್ ನಲ್ಲಿ ಜೆರಾಕ್ಸ್ ಪ್ರತಿಯನ್ನು ಪ್ರಕಟಿಸಲಿದೆ. ಇದೇ ಸಂದರ್ಭದಲ್ಲಿ ಖಾಸಗಿ ವೆಬ್ ಸೈಟ್ ಗಳು ಫಲಿತಾಂಶ ಪ್ರಕಟಿಸುವುದನ್ನು ಕೂಡ ಇಲಾಖೆ ನಿಷೇಧಿಸಿದೆ.

ಸ್ನೂಕರ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಪಂಕಜ್

Image
ಮುಂಬೈ, ಮೇ ೨೩- ಭಾರತದ ಖ್ಯಾತ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಪಟು ಪಂಕಜ್ ಆಡ್ವಾಣಿ ಅಬುಧಾಬಿಯಲ್ಲಿ ನಡೆದ ಏಷ್ಯನ್ 6- ರೆಡ್ ಸ್ನೂಕರ್ ಪ್ರಶಸ್ತಿಯನ್ನು ಗೆದ್ದುಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಷ್ಠಿತ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಒಂದೇ ಋತುವಿನಲ್ಲಿ ವಿಶ್ವ ಮತ್ತು ಏಷ್ಯಾ ಖಂಡ ಪ್ರಶಸ್ತಿಗೆ ಭಾಜನರಾದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಕಳೆದ ರಾತ್ರಿ ನಡೆದ ಕಾದಾಟದಲ್ಲಿ ಅಗ್ರ ಸೀಡ್ ಆಟಗಾರ ಮಲೇಷ್ಯಾದ ಕೀನ್ ಹಾಹ್ಹ್ ಅವರನ್ನು 7-5 ಅಂತರದಲ್ಲಿ ಮಣಿಸಿ ಈ ಸಾಧನೆ ಮಾಡಿದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಪಂಕಜ್ ಆಡ್ವಾಣಿ, 'ಇದು ನನ್ನ ಮೊದಲ ಏಷ್ಯನ್ ಸ್ನೂಕರ್ ಚಾಂಪಿಯನ್ ಶಿಪ್. ಹೀಗಾಗಿ ಸಹಜವಾಗಿಯೇ ಖುಷಿ ಕೊಟ್ಟಿದೆ. ಕಳೆದ ತಿಂಗಳಲ್ಲಿ 15-ರೆಡ್ ಏಷ್ಯನ್ ಸ್ನೂಕರ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಒಂದೇ ವರ್ಷದಲ್ಲಿ 6-ರೆಡ್ ವಿಶ್ವ ಮತ್ತು ಏಷ್ಯನ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರುವುದು ಸಂತಸ ತಂದಿದೆ ಎಂದಿದ್ದಾರೆ. ಪಂಕಜ್ ಆಡ್ವಾಣಿ ಟೀಮ್ ಈವೆಂಟ್ನಲ್ಲಿ ಆದಿತ್ಯಾ ಮೆಹ್ತಾ, ಮನನ್ ಚಂದ್ರ ಮತ್ತು ಕಮಲ್ ಚಾವ್ಲ ಜತೆಗೂಡಿ ಆಡಲಿದ್ದಾರೆ.

ಹೆಂಡ ಇಳಿಸುವವನ ಮಗ ಈಗ ಕೇರಳ ಸಿಎಂ

Image
ಉದಯವಾಣಿ, May 21, 2016, 3:30 AM IST ತಿರುವನಂತಪುರ: ಕೇರಳ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಪಿಣರಾಯಿ ವಿಜಯನ್ ಹೆಂಡ ಇಳಿಸುವ ವೃತ್ತಿಯಲ್ಲಿ ತೊಡಗಿದ್ದ ಬಡ ಕುಟುಂಬಕ್ಕೆ ಸೇರಿದವರು. ಕರ್ನಾಟಕಕ್ಕೆ ಸಮೀಪದ ಕಣ್ಣೂರು ಜಿಲ್ಲೆಯವರು. ಪ್ರಭಾವಿಯಾಗಿರುವ ಈಳವ ಸಮುದಾಯದವರು. ಅತ್ಯುತ್ತಮ ಸಂಘಟಕ ಎಂಬ ಕೀರ್ತಿಯನ್ನು ಕೇರಳದಲ್ಲಿ ಗಳಿಸಿದ್ದಾರೆ. ಸದ್ಯ ಸಿಪಿಎಂ ಪಾಲಿಟ್ಬ್ಯೂರೋ ಸದಸ್ಯರಾಗಿರುವ ಪಿಣರಾಯಿ, 16 ವರ್ಷ ಸಿಪಿಎಂ ಕೇರಳ ಘಟಕದ ಕಾರ್ಯದರ್ಶಿಯಾಗಿದ್ದರು. ಹೆಚ್ಚು ಮಾತನಾಡುವುದಿಲ್ಲ. ಪಿಣರಾಯಿ ನಗುವುದೂ ಇಲ್ಲ ಎಂದು ಅವರ ವಿರೋಧಿಗಳು ಗೇಲಿ ಮಾಡುತ್ತಾರೆ. 1996-98ರವರೆಗೆ ಇಂಧನ ಸಚಿವರಾಗಿ ಹಲವು ಸುಧಾರಣೆಗಳನ್ನು ಜಾರಿಗೆ ತಂದಿದ್ದರೂ, ಕೆನಡಾ ಕಂಪನಿ ಎಸ್ಎನ್ಸಿ- ಲಾವಲಿನ್ಗೆ ಜಲವಿದ್ಯುತ್ ಘಟಕಗಳ ಆಧುನೀಕರಣ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ನಡೆಸಿದ ಆರೋಪ ಅವರನ್ನು ಕಾಡುತ್ತಿದೆ. ಅಚ್ಚುತಾನಂದನ್ ಗರಡಿಯಲ್ಲೇ ಪಳಗಿದ್ದರೂ, ಅವರ ಬದ್ಧ ವೈರಿಯಾಗಿ ಪರಿವರ್ತನೆಗೊಂಡಿದ್ದಾರೆ. ಸಾರ್ವಜನಿಕ ನಿಂದನೆ ಹಿನ್ನೆಲೆಯಲ್ಲಿ 2007ರಲ್ಲಿ ಪಿಣರಾಯಿ ಹಾಗೂ ಅಚ್ಚುತಾನಂದನ್ ಅವರನ್ನು ಪಾಲಿಟ್ ಬ್ಯೂರೋದಿಂದಲೇ ಅಮಾನತುಗೊಳಿಸಲಾಗಿತ್ತು. ಬಳಿಕ ಮರು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. 1970ರಲ್ಲಿ 26ನೇ ವಯಸ್ಸಿಗೇ ಶಾಸಕರಾಗಿ ಆಯ್ಕೆಯಾಗಿದ್ದ ಪಿಣರಾಯಿ 1977, 1991, 1996ರಲ್ಲೂ ಗೆ

೧೦ನೇ ತರಗತಿ ಯಲ್ಲಿ ೯೦% ಅಂಕ ಪಡೆದ ವಿದ್ಯಾರ್ಥಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Image

- ಮೇ 25ರಂದು ಪಿಯುಸಿ ಫಲಿತಾಂಶ.

Image
Public TV - ಮೇ 25ರಂದು ಪಿಯುಸಿ ಫಲಿತಾಂಶ. - ಈ ಬಾರಿ ಉತ್ತರ ಪತ್ರಿಕೆ ಸ್ಕ್ಯಾನ್ ಕಾಪಿ ಕೊಡುವ ಉದ್ದೇಶವಿದೆ - ತಂತ್ರಜ್ಞಾನದ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ - ಇದು ಅಂತಿಮವಾದ ತಕ್ಷಣ ಫಲಿತಾಂಶ ಪ್ರಕಟಿಸುತ್ತೇವೆ - 25ರಂದು ಫಲಿತಾಂಶ ಪ್ರಕಟಿಸಲು ಇಲಾಖೆ ಸಜ್ಜಾಗಿದೆ - ಭದ್ರಾವತಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿಕೆ http://www.karresults.nic.in

KPSC_FDA_DOCUMENT_ VERIFICATION_date_announced . 25/05/2016 ರಿಂದ 04/06/2016 ರವರೆಗೆ ...

http://kpsc.kar.nic.in/document%20verification%20for%20fda.htm

ಕೊರಿಯಾದ ಹಾನ್ ಕಾಂಗ್ ಗ ೨೦೧೬ರೆ ‘ಬುಕರ್’ ಪ್ರಶಸ್ತಿ"

Image
18 May, 2016 ಲಂಡನ್ (ಪಿಟಿಐ): ದಕ್ಷಿಣ ಕೊರಿಯಾದ ಬರಹಗಾರ್ತಿ ಹಾನ್ ಕಾಂಗ್ (45) ಅವರು ಈ ಸಾಲಿನ ಪ್ರತಿಷ್ಠಿತ ಮ್ಯಾನ್ ಬುಕರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮಾನವನ ಕ್ರೌರ್ಯದೆಡೆಗಿನ ಮಹಿಳೆಯ ತಿರಸ್ಕಾರ ಮತ್ತು ಮಾಂಸಾಹಾರವನ್ನು ತ್ಯಜಿಸುವುದರ ಕುರಿತಾದ ಅವರ 'ದಿ ವೆಜಿಟೇರಿಯನ್' ಕೃತಿಗೆ ಈ ಗೌರವ ಲಭಿಸಿದೆ. ನೊಬೆಲ್ ಪುರಸ್ಕೃತ ಒರ್ಹಾನ್ ಪಾಮುಕ್ ಮತ್ತು ಅಂತರರಾಷ್ಟ್ರೀಯ ಖ್ಯಾತಿ ಗಳಿಸಿರುವ ಎಲೆನಾ ಫೆರಂಟೆ ಅವರನ್ನು ಹಿಂದಿಕ್ಕಿ ಕಾಂಗ್ ಈ ಪ್ರಶಸ್ತಿ ಪಡೆದಿದ್ದಾರೆ. ಸೋಮವಾರ ರಾತ್ರಿ ನಡೆದ ಸಮಾರಂಭದಲ್ಲಿ 50 ಸಾವಿರ ಪೌಂಡ್ (₹48.38 ಲಕ್ಷ) ಮೊತ್ತದ ಬಹುಮಾನದ ಹಣವನ್ನು ಅವರು ಅನುವಾದಕಿ ಡೆಬೊರಾ ಸ್ಮಿತ್ ಅವರೊಂದಿಗೆ ಹಂಚಿಕೊಂಡರು. ವಿಮರ್ಶಕ, ಸಂಪಾದಕ ಬಾಯ್ಡ್ ಟಾಂಕಿನ್ ಅವರು ಅಧ್ಯಕ್ಷರಾಗಿರುವ, ಐವರು ತೀರ್ಪುಗಾರರ ಸಮಿತಿಯು ಅಂತಿಮ ಸುತ್ತಿನಲ್ಲಿದ್ದ 155 ಕೃತಿಗಳ ಪೈಕಿ 'ದಿ ವೆಜಿಟೇರಿಯನ್' ಕೃತಿಯನ್ನು ಅವಿರೋಧವಾಗಿ ಆಯ್ಕೆ ಮಾಡಿತು. ಸೋಲ್ನ ಕಲಾ ಸಂಸ್ಥೆಯಲ್ಲಿ ಸೃಜನಶೀಲ ಬರವಣಿಗೆ ಪ್ರಕಾರವನ್ನು ಬೋಧಿಸುತ್ತಿರುವ ಕಾಂಗ್ ಅವರು, ದಕ್ಷಿಣ ಕೊರಿಯಾದ ಪ್ರತಿಷ್ಠಿತ ಯಿ ಸಾಂಗ್ ಸಾಹಿತ್ಯಿಕ ಪ್ರಶಸ್ತಿ, ಯಂಗ್ ಆರ್ಟಿಸ್ಟ್ ಪ್ರಶಸ್ತಿ ಮತ್ತು ಕೊರಿಯನ್ ಸಾಹಿತ್ಯ ಕಾದಂಬರಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಸಂಪ್ರದಾಯ ಧಿಕ್ಕರಿಸು

ಪೃಥ್ವಿ -2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಹೊಸದಿಲ್ಲಿ: ದೇಶಿಯವಾಗಿ ಅಭಿವೃದ್ಧಿಪಡಿಸಲಾದ ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಹಾಗೂ ನೆಲದಿಂದ-ನೆಲಕ್ಕೆ ಚಿಮ್ಮುವ ಕಡಿಮೆ ಅಂತರದ 'ಪೃಥ್ವಿ-2' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ಬುಧವಾರ ಒಡಿಶಾದ ಚಾಂಡಿಪುರದಲ್ಲಿ ನಡೆಯಿತು. 2003ರಲ್ಲೇ ಭಾರತದ ಸೇನೆ ಸೇರಿರುವ ಪೃಥ್ವಿ -2 ಅನ್ನು ಡಿಆರ್ಡಿಒ ಅಭಿವೃದ್ಧಿ ಪಡಿಸಿತ್ತು. 2 ಇಂಜಿನ್ಗಳನ್ನು ಹೊಂದಿರುವ 'ಪೃಥ್ವಿ-2' ಕ್ಷಿಪಣಿ 8.56 ಮೀಟರ್ ಉದ್ದ ಇದ್ದು, 1.1 ಮೀಟರ್ ಸುತ್ತಳತೆ ಹೊಂದಿದೆ. 4,600 ಕೆ.ಜಿ. ತೂಕವಿದ್ದು, 500 ರಿಂದ 1000 ಕೆ.ಜಿ. ಸ್ಫೋಟಕಗಳನ್ನು ಹೊತ್ತು 350 ಕಿ.ಮೀ. ದೂರದ ಗುರಿ ತಲುಪುವ ಸಾಮರ್ಥ್ಯ ಹೊಂದಿದೆ. ಜತೆಗೆ ವೈರಿ ಪಡೆಯ ಕ್ಷಿಪಣಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ. ಈ ಕ್ಷಿಪಣಿಯು ಗರಿಷ್ಠ 43.5 ಕಿ.ಮಿ. ಎತ್ತರದಲ್ಲಿ 483 ಸೆಕೆಂಡ್ಗಳ ವರೆಗೆ ಹಾರಾಟ ನಡೆಸಿ ಗುರಿ ತಲುಪುವ ಸಾಮರ್ಥ್ಯ ಹೊಂದಿದೆ. ಪೃಥ್ವಿ-2 ಕ್ಷಿಪಣಿ ಘನ ಮತ್ತು ದ್ರವ ಇಂಧನ ಗಳನ್ನು ಬಳಕೆ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತದೆ. ಈ ಕ್ಷಿಪಣಿಯು ಸ್ಫೋಟಕಗಳನ್ನು ಮತ್ತು ಅಣ್ವಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

ಬನಹಟ್ಟಿಯ ತರಕಾರಿ ಮಾರುವ ಹುಡುಗಿಗೆ ಶೇ . 96 . 64 ಅಂಕ

Image
ಬನಹಟ್ಟಿ : ಮನೆಯಲ್ಲಿ ಕಿತ್ತು ತಿನ್ನುವ ಬಡತನ . ತಂದೆ ನಿಧನರಾಗಿ 10 ವರ್ಷಗಳೇ ಕಳೆದಿವೆ . ತಾಯಿ ಸಂತೆಯಲ್ಲಿ ತರಕಾರಿ ಮಾರುತ್ತ ಅಷ್ಟೋ - ಇಷ್ಟೋ ಬಂದ ದುಡ್ಡಿನಲ್ಲಿ ತನ್ನ ಮಗಳ ವಿದ್ಯಾಭ್ಯಾಸದ ವೆಚ್ಚ ತೂಗಿಸುತ್ತಿದ್ದರೆ , ತಾಯಿಯೊಂದಿಗೆ ತರಕಾರಿ ಮಾರುತ್ತ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಳು . 604 ಅಂಕಗಳೊಂದಿಗೆ ಶೇ . 96 . 64 ಫಲಿತಾಂಶದೊಂದಿಗೆ ಉತ್ತಮ ಸಾಧನೆ ಮೆರೆದಳು ಇದು ಬನಹಟ್ಟಿಯ ಎಸ್ಆರ್ಎ ಪ್ರೌಢಶಾಲೆಯ ವಿದ್ಯಾರ್ಥಿನಿ ಸೌಮ್ಯ ಮುರಿಗೆಪ್ಪ ಸಗರಿಯ ಸಾಹಸಗಾಥೆ . ಬನಹಟ್ಟಿಯ ಎಸ್ಆರ್ಎ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಸೌಮ್ಯ , ಶಾಲೆಗೆ ಬರಬೇಕಾದರೆ ಮೊದಲು ತಾಯಿಯೊಂದಿಗೆ ತರಕಾರಿ ವ್ಯಾಪಾರ ಮಾಡಲೇಬೇಕು . ನಂತರ ಶಿಕ್ಷಣ. ಹೀಗಿದ್ದರೂ ಶಿಕ್ಷಣವನ್ನು ಶ್ರದ್ಧೆಯಿಂದ ಕಲಿತು ಯಾರಿಗೂ ಕಡಿಮೆಯಿಲ್ಲವೆಂಬಂತೆ ಮಹತ್ವದ ಸಾಧನೆ ಮಾಡಿ ಎಸ್ಆರ್ಎ ಪ್ರೌಢಶಾಲೆಗೆ ನಾಲ್ಕನೇ ಸ್ಥಾನ ಪಡೆದಿದ್ದಾಳೆ . ಕನ್ನಡದಲ್ಲಿ 124, ಗಣಿತ 98 , ಹಿಂದಿ 97 , ವಿಜ್ಞಾನ, ಸಾಮಾನ್ಯ ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯಗಳಲ್ಲಿ ತಲಾ 95 ಅಂಕ ಪಡೆದಿರುವ ಸೌಮ್ಯಾ, ಮುಂದೆ ವೈದ್ಯೆ ಆಗುವ ಕನಸು ಹೊಂದಿದ್ದಾಳೆ . ಮುಂದಿನ ಶಿಕ್ಷಣಕ್ಕೆ ಇವರ ಕುಟುಂಬಕ್ಕೆ ಬಡತನವೆಂಬುದು ಕಂಟಕವಾಗಿದೆ . ಆದರೂ ಇವಳ ತಾಯಿ ಸಾಧ್ಯವಾದಷ್ಟು ದುಡಿದು ಶಿಕ್ಷಣ ಒದಗಿಸುವುದಾಗಿ ಹುಮ್ಮಸ್ಸಿನಿಂದ ಹೇಳುತ್ತಾರೆ

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ ; ತಿಥಿ ಅತ್ಯುತ್ತಮ ಚಿತ್ರ

ಉದಯವಾಣಿ, May 17, 2016, 4:54 PM IST ಬೆಂಗಳೂರು : 2015 ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಮಂಗಳವಾರ ಪ್ರಕಟವಾಗಿದ್ದು , ಕನ್ನಡದ ತಿಥಿ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದೆ , ದ್ವಿತೀಯ ಅತ್ಯುತ್ತಮ ಚಿತ್ರ " ಮಾರಿಕೊಂಡವರು" . ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಮೈತ್ರಿ , ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ಕೃಷ್ಣಲೀಲಾಕ್ಕೆ ಲಭಿಸಿದೆ. ಮನೆ ಮೊದಲ ಪಾಠ ಶಾಲೆ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ . ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ವಾರ್ತಾ ಸಚಿವ ರೋಶನ್ ಬೇಗ್ ಪ್ರಶಸ್ತಿಯ ವಿವರ ಪ್ರಕಟಿಸಿದರು . ಅನುಪ್ ಭಂಡಾರಿ ಅವರ ರಂಗಿತರಂಗ ಚೊಚ್ಚಲ ನಿರ್ದೆಶನದ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ . ಅತ್ಯುತ್ತಮ ನಿರ್ದೇಶಕ ಅನೂಪ್ ಭಂಡಾರಿ ( ರಂಗಿತರಂಗ ) , ಅತ್ಯುತ್ತಮ ನಾಯಕ ನಟ ವಿಜಯ್ ರಾಘವೇಂದ್ರ ( ಶಿವಯೋಗಿ ಪುಟ್ಟಯ್ಯಜ್ಜ ), ಅತ್ಯುತ್ತಮ ನಟಿ ಮಾಲಾಶ್ರೀ ( ಗಂಗಾ ) , ಅತ್ಯುತ್ತಮ ಸಂಭಾಷಣೆ ಈರೇಗೌಡ (ತಿಥಿ ), ಅತ್ಯುತ್ತಮ ಪೋಷಕ ನಟ ರಮೇಶ್ , ಭಟ್ ( ಮನಮಂಥನ ). ಅತ್ಯುತ್ತಮ ಛಾಯಾಗ್ರಹಣ ಅನಂತ್ ಅರಸು( ಲಾಸ್ಟ್ ಬಸ್ ) , ಅತ್ಯುತ್ತಮ ಹಿನ್ನೆಲೆ ಗಾಯಕ ಸಂತೋಷ್ ವೆಂಕಿ , ಅತ್ಯುತ್ತಮ ಸಂಕಲನ ಸೃಜತ್ ನಾಯಕ್ , ಅತ್ಯುತ್ತಮ ಬಾಲನಟಿ ಮೇವಿಷ್, ಅತ್ಯುತ್ತಮ ಗೀ

ಎಸ್ ಎಸ್ ಎಲ್ ಸಿ ಫಲಿತಾಂಶ; ಬೆಂಗಳೂರು ಗ್ರಾಮಾಂತರ ಪ್ರಥಮ

ಬೆಂಗಳೂರು: ಬಹು ನಿರೀಕ್ಷಿತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಬೆಂಗಳೂರು ಗ್ರಾಮಾಂತರ ಮೊದಲ ಸ್ಥಾನದಲ್ಲಿದ್ದರೆ, ಉಡುಪಿ ಹಾಗೂ ಮಂಗಳೂರು ದ್ವಿತೀಯ ಮತ್ತು ತೃತೀಯ ಸ್ಥಾನದಲ್ಲಿದೆ. ರಾಜ್ಯದ 3,082 ಪರೀಕ್ಷಾ ಕೇಂದ್ರಗಳಲ್ಲಿ ಕಳೆದ ಮಾರ್ಚ್- ಏಪ್ರಿಲ್'ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ರಾಜ್ಯದ ಒಟ್ಟು 13,993 ಶಾಲೆಗಳಲ್ಲಿ 8,49,233 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 617235 ಪಾಸಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಪೂರ್ಣ ಪ್ರಜ್ಞಾ ಶಾಲೆಯ ರಂಜನ್ ಕುಮಾರ್ 625/625 ಅಂಕಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ, ಹೋಲಿ ಚೈಲ್ಡ್ ಸ್ಕೂಲ್ ವಿದ್ಯಾರ್ಥಿನಿ ಸುಪ್ರೀತಾ 624/625, ಹಾಗೂ ಮೈಸೂರಿನ ಮರಿಮಲ್ಲಪ್ಪ ಶಾಲೆಯ ಈಶು 624/625 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ಸ್ವಾತಿ ಎಂ ಬೆಂಗಳೂರು ಗ್ರಾಮಂತರ ರಾಜಾಜಿನಗರ ಶ್ರೀವಾಣಿ ಬಾಲಕೀಯರ ಪ್ರೌಡಶಾಲಾ ವಿದ್ಯಾರ್ಥಿನಿ 98.56% (616/625) ಪಡೆದಿದ್ದಾರೆ. ಈ ಬಾರಿ ಬೆಂಗಳೂರು ಗ್ರಾಮಾಂತರ 89.63 % ಫಲಿತಾಂಶ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡರೆ, ಉಡುಪಿ ಜಿಲ್ಲೆಗೆ 89.52% ಮಂಗಳೂರು 88.01% ಹಾಗೂ ಬಳ್ಳಾರಿ ಕೊನೇ ಸ್ಥಾನ 56.68% ಪಡೆದುಕೊಂಡಿದೆ. ರಾಜ್ಯದಲ್ಲಿ ಒಟ್ಟಾರೆ 79.16% ಫಲಿತಾಂಶ ಬಂದಿದ್ದು ಕಳೆದ ವರುಷಕ್ಕಿಂತ 2% ಕಡಿಮೆ ಬಂದಿದೆ. ಸರಕಾರಿ ಶಾಲೆಗಳ

ಬೆಂಗಳೂರು ನಗರ ರೈಲ್ವೆ ನಿಲ್ದಾಣ ಇನ್ನು ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ

ಬೆಂಗಳೂರು: ಬೆಂಗಳೂರು ನಗರ ರೈಲ್ವೆ ನಿಲ್ದಾಣಕ್ಕೆ ಅಧಿಕೃತವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಎಂದು ಮರುನಾಮ ಮಾಡಲಾಗಿದೆ. ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಇಂದು ಹೆಸರನ್ನು ಅಧಿಕೃತವಾಗಿ ಘೋಷಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವರಾದ ಅನಂತ್ ಕುಮಾರ್, ವೆಂಕಯ್ಯ ನಾಯ್ಡು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸಚಿವರು ಯಲಹಂಕ-ಪೆನುಕೊಂಡ, ಅರಸೀಕೆರೆ-ತುಮಕೂರು ಮತ್ತು ಹುಬ್ಬಳ್ಳಿ-ಚಿಕ್ಜಾಜೂರು ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಕಿರಾಣಿ ವ್ಯಾಪಾರಿ ಮಗ ಯುಪಿಎಸ್ಸಿ ಸಾಧಕ ಕಿಶೋರ್

Image
ಬಾಗಲಕೋಟೆ, ಮೇ 12: ಜಮಖಂಡಿ ತಾಲೂಕಿನ ಬನಹಟ್ಟಿ- ರಬಕವಿ ನಗರದ ಕಿರಾಣಿ ವ್ಯಾಪಾರಸ್ಥ ಬದ್ರಿನಾರಾಯಣ ಭಟ್ಟಡ ಹಾಗು ಉಮಾ ದಂಪತಿ ಮಗ ಕಿಶೋರ ಈಗ ಬಾಗಲಕೋಟೆ ಜಿಲ್ಲೆಯ ಹೆಮ್ಮೆಯ ಪುತ್ರನಾಗಿ ಹೆಸರು ಗಳಿಸಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ವು ಮಂಗಳವಾರ ಪ್ರಕಟಿಸಿದ ಫಲಿತಾಂಶದಲ್ಲಿ ರಾಷ್ಟ್ರಕ್ಕೆ 808ನೇ rank ಪಡೆಯುವದರ ಮೂಲಕ ಸಾಧನೆ ಮಾಡಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಜತೆ ಮಾತನಾಡಿದ ಕಿಶೋರ, ಕಳೆದ ವರ್ಷವು ಈ ಪರೀಕ್ಷೆಯನ್ನು ಎದುರಿಸಿದ್ದೆ, ಇದು ನನ್ನ ಎರಡನೇಯ ಪ್ರಯತ್ನ ಈ ಭಾರಿ 808 ನೇ ಸ್ಥಾನ ಪಡೆದುಕೊಂಡಿದ್ದೇನೆ. ಫಲಿತಾಂಶವನ್ನು ಕೇಳಿ ತುಂಬಾ ಸಂತೋಷವಾಗಿದೆ. ಇದು ನನಗೆ ತೃಪ್ತಿ ನೀಡಿದೆ ಮುಂದಿನ ಸಲ ಹೆಚ್ಚಿನ ಶ್ರೇಯಾಂಕ ಸ್ಥಾನ ಇನ್ನಷ್ಟು ಹೆಚ್ಚಿಸಿಕೊಳ್ಳಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಪ್ರತಿ ದಿನ 10 ಗಂಟೆಗಳ ಕಾಲ ಓದುತ್ತಿದ್ದೆ, ಭೂಗೋಳ ಶಾಸ್ತ್ರ ನನ್ನ ವಿಷಯವಾಗಿತ್ತು ಎಂದು ತಿಳಿಸಿದರು. ಕಿಶೋರ ಪ್ರತಿಭಾವಂತ: ಇವರು ಆರಂಭದಿಂದಲೂ ಪ್ರತಿಭಾವಂತ ವಿದ್ಯಾರ್ಥಿ, ಎಸ್‍ಎಸ್‍ಎಲ್ಸಿ ಪರೀಕ್ಷೆಯಲ್ಲಿ ಶೇ.95.2 ಅಂಕಗಳೊಂದಿಗೆ ರಾಮಪೂರದ ಪೂರ್ಣಪ್ರಜ್ಞ ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದರು. ಕಿಶೋರ ಭಟ್ಟಡ ಬನಹಟ್ಟಿಯ ಎಸ್‍ಆರ್‍ಎ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪ್ರವೇಶ ಪಡೆದು ದ್ವಿತೀಯ ಪರೀಕ್ಷೆಯಲ್ಲಿ ಶೇ.91.83 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದರು. ನಂತರ ಸಿಇಟಿ ಪರೀಕ್ಷೆಯಲ್ಲಿ

ಯುಪಿಎಸ್ಸಿ ಫಲಿತಾಂಶ : ಕರ್ನಾಟಕದ ಗೌಡಗೆ 105ನೇ ಸ್ಥಾನ!;-

ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್ಸಿ) ಪರೀಕ್ಷೆ 2015ಯ ಅಂತಿಮ ಫಲಿತಾಂಶ ಮಂಗಳವಾರ (ಮೇ 10) ಅಂದರೆ      ನಿನ್ನೆ ಸಂಜೆ ಪ್ರಕಟವಾಗಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾಗಲು ಬಯಸಿರುವ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಿದೆ. ಟೀನಾ ಡಬಿ(0256747) ಪ್ರಥಮ ಶ್ರೇಯಾಂಕ ಪಡೆದುಕೊಂಡಿದ್ದಾರೆ. ಅತಾರ್ ಉಲ್ ಶಫಿ ಖಾನ್(ರೋಲ್ ನಂಬರ್ 0058239), ಜಸ್ಮೀರ್ ಸಿಂಗ್ ಸಂಧು (0010512), ಆರ್ತಿಕಾ ಶುಕ್ಲಾ(0000123), ಶಶಾಂಕ್ ತ್ರಿಪಾಠಿ(0015876) ಮೊದಲ 5 ಸ್ಥಾನ ಗಳಿಸಿದ್ದಾರೆ. ಕರ್ನಾಟಕದ ಶ್ರೀನಿವಾಸ್ ಗೌಡ ಎ. ಆರ್ (0535527) ಅವರು 105ನೇ ಸ್ಥಾನ ಗಳಿಸಿದ್ದಾರೆ. ಐಎಎಸ್, ಐಪಿಎಸ್ ಹಾಗೂ ಐಎಫ್ಎಸ್ ಗಾಗಿ ನಡೆಯುವ ಈ ಪರೀಕ್ಷೆಗಳು ಪ್ರಿಮಿಲಿನರಿ, ಅಂತಿಮ ಹಾಗೂ ಸಂದರ್ಶನ ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಸುಮಾರು 15.008 ಅಭ್ಯರ್ಥಿಗಳು ಅಂತಿಮ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದರು. ಅಂತಿಮ ಪರೀಕ್ಷಾ ಫಲಿತಾಂಶ www.upsc.gov.in ನಲ್ಲಿ ಪಡೆದುಕೊಳ್ಳಬಹುದು. ಕರ್ನಾಟಕದ ಅಭ್ಯರ್ಥಿಗಳ ಫಲಿತಾಂಶ; * ಶ್ರೀನಿವಾಸಗೌಡ 105 * ನಿವ್ಯಾ ಶೆಟ್ಟಿ 274 * ಪವನ್ ಕುಮಾರ್ ಗಿರಿಯಪ್ಪ 420 * ಪ್ರಮೋದ್ ನಾಯಕ್ 779 * ಡಿಎಲ್ ನಾಗೇಶ್ 782 * ಆಕಾಶ್ ಎಸ್ 959 * ಭೈರಪ್ಪ 1035

Linking Procedure: Adhar No. to Ration Card via SMS

Image

101 ಸರ್ವಜ್ಞನ ವಚನಗಳು:-

🌺 ಅಂತಿಕ್ಕು ಇಂತಿಕ್ಕು ಎಂತಿಕ್ಕು ಎನಬೇಡ ಚಿಂತೆಯಲಿ ದೇಹ ಬಡವಕ್ಕು ಶಿವ ತೋರಿದಂತಿಹುದೇ ಲೇಸು ಸರ್ವಜ್ಞ. 🌺 ಆದಿ ದೈವವನು ತಾ ಭೇದಿಸಲಿಕರಿಯದಲೆ ಹಾದಿಯಾ ಕಲ್ಲಿಗೆಡೆ ಮಾಡಿ ನಮಿಸುವಾ ಮಾದಿಗರ ನೋಡು ಸರ್ವಜ್ಞ. 🌺 ತನ್ನಲಿಹ ಲಿಂಗವನು ಮನ್ನಿಸಲಿಕರಿಯದಲೆ ಬಿನ್ನಣದಿ ಕಟೆದ ಪ್ರತಿಮೆಗಳಿಗೆರಗುವಾ ಅನ್ಯಾಯ ನೋಡು ಸರ್ವಜ್ಞ. 🌺 ಉಣಬಂದ ಜಂಗಮಕೆ ಉಣಬಡಿಸಲೊಲ್ಲದಲೆ ಉಣದಿಪ್ಪ ಲಿಂಗಕುಣಬಡಿಸಿ ಕೈ ಮುಗಿವ ಬಣಗುಗಳ ನೋಡು ಸರ್ವಜ್ಞ. 🌺 ಕಲ್ಲು ಕಲ್ಲನೆ ಒಟ್ಟಿ ಕಲ್ಲಿನಲೆ ಮನೆಕಟ್ಟಿ ಕಲ್ಲ ಮೇಲ್ಕಲ್ಲ ಕೊಳುವ ಮಾನವರೆಲ್ಲ ಕಲ್ಲಿನಂತಿಹರು ಸರ್ವಜ್ಞ. 🌺 ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ. 🌺 ಲಿಂಗಕ್ಕೆ ಕಡೆ ಎಲ್ಲಿ ? ಲಿಂಗಿಲ್ಲದೆಡೆಯೆಲ್ಲಿ ? ಲಿಂಗದೊಳು ಜಗವು ಅಡಗಿಹುದು ಲಿಂಗವನು ಹಿಂಗಿದವರುಂಟೇ ? ಸರ್ವಜ್ಞ. 🌺 ಆಗಿಲ್ಲ ಹೋಗಿಲ್ಲ ಮೇಗಿಲ್ಲ ಕೆಳಗಿಲ್ಲ ತಾಗಿಲ್ಲ ತಪ್ಪು ತಡೆಯಿಲ್ಲ, ಲಿಂಗಕ್ಕೆ ದೇಗುಲವೇ ಇಲ್ಲ ಸರ್ವಜ್ಞ. 🌺 ಕಾಯ ಕಮಲವೇ ಸಜ್ಜೆ ಜೀವರತುನವೇ ಲಿಂಗ ಭಾವ ಪುಷ್ಪದಿಂ ಶಿವಪೂಜೆ ಮಾಡುವವನ ದೇವನೆಂದೆಂಬೆ ಸರ್ವಜ್ಞ. 🌺 ಓದು ವಾದಗಳೇಕೆ ? ಗಾದೆಯಾ ಮಾತೇಕೆ ? ವೇದ ಪುರಾಣ ತನಗೇಕೆ ? ಲಿಂಗದಾ ಹಾದಿಯರಿಯದವಗೆ ಸರ್ವಜ್ಞ. 🌺 ಊರಿಂಗೆ ದಾರಿಯನು ಆರು ತೋರಿದರೇನು ? ಸಾರಾಯದಾ

ಬರಗಾಲ ಪ್ರದೇಶದ ಬೇಸಿಗೆಯ ಮಧ್ಯಾಹ್ನದ ಬಿಸಿಊಟದ SMS ತಂತ್ರಾಶದ ಪ್ರಗತಿಯನ್ನು ತಾಂತ್ರಿಕ ದೃಷ್ಟಿಯಿಂದ ತೀವೃಗತಿಯಲ್ಲಿ ಪರಿಶೀಲಿಸುವ ಕುರಿತು.

Image

ಸಿಇಟಿ ಕೀ ಉತ್ತರ ಪ್ರಕಟ

ಸಿಇಟಿ ಕೀ ಉತ್ತರ ಪ್ರಕಟ 7 May, 2016     ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ತಾತ್ಕಾಲಿಕ ಸರಿ ಉತ್ತರಗಳನ್ನು (ಕೀ ಉತ್ತರ) ಪ್ರಕಟಿಸಿದೆ. ಮೇ 27ಕ್ಕೆ ಫಲಿತಾಂಶ ನೀಡುವ ಸಾಧ್ಯತೆ ಇದೆ. (PSGadyal teacher Vijaypur) ಭೌತವಿಜ್ಞಾನ, ಗಣಿತ, ಜೀವವಿಜ್ಞಾನ ಮತ್ತು ರಸಾಯನವಿಜ್ಞಾನ ವಿಷಯಗಳ ಕೀ ಉತ್ತರಗಳನ್ನು ವೆಬ್‌ಸೈಟ್‌: http://kea.kar.nic.in ನಲ್ಲಿ ನೋಡಬಹುದು. ಆಕ್ಷೇಪಣೆಗಳಿದ್ದಲ್ಲಿ ಮೇ 10ರ ಸಂಜೆ 5.30ರೊಳಗೆ ಇಮೇಲ್ ವಿಳಾಸಕ್ಕೆ: keauthority-kar@nic.in ಕಳುಹಿಸಬಹುದು. 2016ನೇ ಸಾಲಿಗೆ ಆನ್‌ಲೈನ್‌ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ತಿದ್ದುಪಡಿ ಮಾಡಬೇಕಿದ್ದಲ್ಲಿ ಮೇ 12ರವರೆಗೆ ಅವಕಾಶ ಕಲ್ಪಿಸಲಾಗಿದೆ. 'ಸಿಇಟಿ ಸಂಪೂರ್ಣ ವೇಳಾಪಟ್ಟಿ ಪ್ರಕಾರವೇ ನಡೆಯುತ್ತಿದೆ. ಮೇ 9ರ ಬದಲು ಶುಕ್ರವಾರವೇ ಕೀ ಉತ್ತರ ಪ್ರಕಟಿಸಲಾಗಿದೆ. ಮೇ 27ರಂದು ಫಲಿತಾಂಶ ಪ್ರಕಟಿಸಲಾಗುವುದು' ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಡಳಿತಾಧಿಕಾರಿ ಎಸ್‌.ಎನ್‌. ಗಂಗಾಧರಯ್ಯ ಹೇಳಿದರು

ನೀಟ್-1 ಬರೆದವರಿಗೆ ನೀಟ್-2ಗೆ ಪ್ರವೇಶವಿಲ್ಲ

ನೀಟ್-1 ಬರೆದವರಿಗೆ ನೀಟ್-2ಗೆ ಪ್ರವೇಶವಿಲ್ಲ ವಿಜಯವಾಣಿ ನ್ಯೂಸ್ · MAY 7, 2016 ನವದೆಹಲಿ: ಮೇ 1ರಂದು ನಡೆದ ನೀಟ್-1 ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಜುಲೈ 24ರಂದು ನಡೆಯಲಿರುವ ನೀಟ್-2ನಲ್ಲಿ ಪುನಃ ಪರೀಕ್ಷೆ ಬರೆಯುವಂತಿಲ್ಲ. ಆದರೆ ನೀಟ್-1ಗೆ ಹಾಜರಾಗದ ವಿದ್ಯಾರ್ಥಿಗಳು ನೀಟ್-2 ಪರೀಕ್ಷೆ ಬರೆಯಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ. (PSGadyal teacher Vijaypur) ಇದೇ ವೇಳೆ ದೇಶದ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ನೀಟ್ ಪ್ರವೇಶ ಪರೀಕ್ಷಾ ಪದ್ಧತಿಯಿಂದ ಈ ವರ್ಷ ವಿನಾಯಿತಿ ನೀಡಬೇಕೆ ಬೇಡವೇ ಎಂಬ ಕುರಿತ ತೀರ್ಪು ಸೋಮವಾರ ನಿರ್ಧಾರವಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರ ಈ ವಿಚಾರದ ಬಗ್ಗೆ ವಾರಾಂತ್ಯದಲ್ಲಿ ರಾಜ್ಯ ಸರ್ಕಾರಗಳ ಪ್ರತಿನಿಧಿಗಳೊಂದಿಗೆ ಉನ್ನತಮಟ್ಟದ ಸಭೆ ನಡೆಸಲಿದ್ದು, ಸೋಮವಾರ ತನ್ನ ಅಭಿಪ್ರಾಯವನ್ನು ಸುಪ್ರೀಂಕೋರ್ಟ್​ಗೆ ಸಲ್ಲಿಸಲಿದೆ. ಇದನ್ನು ಪರಿಶೀಲಿಸಿ ನಾವು ಅಂತಿಮ ಆದೇಶ ಪ್ರಕಟಿಸಲಿದ್ದೇವೆ ಎಂದು ನ್ಯಾ. ಅನಿಲ್ ದವೆ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ. ವಿಚಾರಣೆಯ ಒಂದು ಹಂತದಲ್ಲಿ ಸರ್ಕಾರಿ ಕಾಲೇಜುಗಳಿಗೆ ಈ ವರ್ಷ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡುವ ಬಗ್ಗೆ ಕೋರ್ಟ್ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿತ್ತಾದರೂ, ಯಾವುದೇ ಆದೇಶ ನೀಡಲು ಮುಂದಾಗಲಿಲ್ಲ. ರಾಜ್ಯ ಸರ್ಕಾರಗಳೊಂದಿಗೆ ಸಭೆ ನಡೆಸಲು ನಮಗೆ 2 ದಿನಗಳ ಕಾಲಾವಕಾಶ ಬೇಕು. ಅಲ್ಲಿಯವರೆಗೆ ನ್ಯಾಯಾಲಯ

LIST OF CANDIDATES CALLED FOR VERIFICATION (1:10) FOR GAZETTED PROBATIONERS EXAMINATION 2014

kpsc.kar.nic.in/ELG%20LIST%20FOR%20GP%202014%20DOCUMENT%20VERIFICATION%20.HTM

ವಿಕಲ ಚೇತನರಿಗೆ "ಟಾಕಿಂಗ್ ಲ್ಯಾಪ್ಟಾಪ್" ಒದಗಿಸುವ ಕುರಿತ ಸುತ್ತೋಲೆ

Image

SBI Announced PO Recruitment Notification for 2016. Total Vacancies: 2428 App Reg.Date: 04th May, 2016 to 24th May, 2016. Age Limit: 21-30 Years (as on 01.04.2016) Exam Date: 2nd, 3rd June 2016 & 9th, 10th June, 2016. For more Information visit SBI Website...

www.sbi.co.in/webfiles/uploads/files/PO_2016_ENGLISH_CRPD_PO_2016_17_02.pdf

Recruitment of Village Accountants in Davangere Dist:LIST OF CANDIDATES CALLED FOR VERIFICATION (1:10) 25/4/2016

davanagere.nic.in/DCOFFICE/VA-2015/Verification_List.PDF

LIST OF CANDIDATES ELIGIBLE FOR PERSONALITY TEST FOR GAZETTED PROBATIONERS EXAMINATION 2014

http://kpsc.kar.nic.in/ELGLIST%20OF%20GP2014.HTM

ಐಎಎಸ್ ಪರೀಕ್ಷೆ ಅಧಿಸೂಚನೆ ಪ್ರಕಟ ಆಗಸ್ಟ್ 7ಕ್ಕೆ ಪೂರ್ವಭಾವಿ ಪರೀಕ್ಷೆ.!!

ನವದೆಹಲಿ (ಏ.23): ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್'ಸಿ) 2016ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಗಳಿಗೆ (ಐಎಎಸ್, ಐಪಿಎಸ್, ಐಎಫ್ಎಸ್ ಇತ್ಯಾದಿ) ಅಧಿಸೂಚನೆ ಪ್ರಕಟಿಸಿದೆ. ಅಧಿಸೂಚನೆಯು ವೆಬ್'ಸೈಟ್ http://upsconline.nic.in ನಲ್ಲಿ ಲಭ್ಯವಿದ್ದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.20 ಹಾಗೂ ಪೂರ್ವಭಾವಿ ಪರೀಕ್ಷೆ ಆಗಸ್ಟ್ 7 ರಂದು ನಡೆಯಲಿದೆ. ಪರೀಕ್ಷೆಯನ್ನು ಪೂರ್ವಭಾವಿ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದೊಂದಿಗೆ ಮೂರು ಪ್ರಕಾರಗಳಲ್ಲಿ ನಡೆಸಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 32 ವರ್ಷ ವಯೋಮಿತಿಯೊಂದಿಗೆ 6 ಬಾರಿ, ಹಿಂದುಳಿದ ವರ್ಗದವರಿಗೆ 35 ವಯೋಮಿತಿ 9 ಬಾರಿ ಹಾಗೂ ಎಸ್'ಸಿ, ಎಸ್'ಟಿ ಅಭ್ಯರ್ಥಿಗಳು 37 ವಯೋಮಿತಿಯಿದ್ದು ಎಷ್ಟು ಬಾರಿ ಬೇಕಾದರೂ ಪರೀಕ್ಷೆ ತೆಗೆದುಕೊಳ್ಳಬಹುದು. *ಶೈಕ್ಷಣಿಕ ಅರ್ಹತೆ: ಐಎಎಸ್ ಪರೀಕ್ಷೆ ತೆಗೆದುಕೊಳ್ಳಲು ಯುಜಿಸಿ'ಯಲ್ಲಿ ಅಂಗೀಕೃತಗೊಂಡ ಯಾವುದೇ ವಿಶ್ವವಿದ್ಯಾಲಯದಲ್ಲಿ ಕನಿಷ್ಠ ಪದವಿ ಪಡೆದುಕೊಂಡಿರಬೇಕು. ಪದವಿಯ ಅಂತಿಮ ವರ್ಷದ ಪರೀಕ್ಷೆ ಬರೆದವರು ಸಹ ಪರೀಕ್ಷೆ ತೆಗೆದುಕೊಳ್ಳಬಹುದು ಆದರೆ ಮುಖ್ಯ ಪರೀಕ್ಷೆ ವೇಳೆಗೆ ಫಲಿತಾಂಶ ಪ್ರಕಟಗೊಂಡಿರಬೇಕು. ಐಎಫ್ಎಸ್ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ  ಪಶುಪಾಲನಾ ಮತ್ತು ಪಶುವೈದ್ಯ ವಿಜ್ಞಾನ, ಸಸ್ಯಶಾಸ್ತ್ರ, ರಸಾಯನಶಾಸ್ತ್ರ, ಭ

ಸರ್ಕಾರಿ ಆದೇಶ ಸಂಖ್ಯೆ:ಆಇ 12 ಎಸ್ ಆರ್ ಪಿ 2016 -ದಿ:13-04-2016- ತುಟ್ಟಿಭತ್ಯೆಯ ದರಗಳ ಪರಿಷ್ಕರಣೆ - 32.5% to 36%

ಸರ್ಕಾರಿ ಆದೇಶ ಸಂಖ್ಯೆ:ಆಇ 12 ಎಸ್ ಆರ್ ಪಿ 2016 Government Order No. FD 12 SRP 2016 -dated 13-04-2016- ತುಟ್ಟಿಭತ್ಯಯ ದರಗಳ ಪರಿಷ್ಕರಣೆ  -  32.5% to 36%-Grant of Dearness Allowance 32.5% to 36%-Reg http://finance.kar.nic.in/gos/fd12srp2016.PDF

2006 ಕ್ಕಿಂತ ಮೊದಲೇ ನಿವೃತ್ತರಾದ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ಧಿ

Image
 Suvarnanews:    3 hours ago ನವದೆಹಲಿ(ಏ.13):  ಕೇಂದ್ರ ಸರಕಾರದ ಪಿಂಚಣಿದಾರರಿಗೊಂದು ಸಿಹಿ ಸುದ್ಧಿ! 2006 ಕ್ಕಿಂತ ಪೂರ್ವ ನಿವೃತ್ತಿ ವೇತನದಾರರಿಗೆ ಈಗ ಪಿಂಚಣಿ ಹೆಚ್ಚಳ ಮಾಡುವ ನಿರ್ಧಾರವನ್ನು  ಕೇಂದ್ರ ಸರಕಾರ ತೆಗೆದುಕೊಂಡಿದೆ. ಜೊತೆಗೆ  33 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿ ನಿವೃತ್ತರಾದವರು ಈ ಪ್ರಯೋಜನ ಪಡೆಯಬಹುದು ಎಂದು ಹೇಳಿದೆ.   ಪಿಂಚಣಿ ಮತ್ತು ನಿವೃತ್ತಿ ವೇತನದಾರರ ಕಲ್ಯಾಣ ಇಲಾಖೆ 33 ವರ್ಷಕ್ಕಿಂತ ಕಡಿಮೆ ವರ್ಷ ಕಾರ್ಯ ನಿರ್ವಹಿಸಿ ನಿವೃತ್ತರಾದವರಿಗೆ ಶೇ.50 ಕ್ಕಿಂತ ಕಡಿಮೆ  ವೇತನ ನೀಡಬಾರದು ಎಂದು ಪಿಂಚಣಿ ಹೆಚ್ಚಳ ಮಾಡಲು ನಿರ್ಧರಿಸಿದೆ. ನಿಯಮಗಳ  ಪ್ರಕಾರ ಕೇಂದ್ರ ಸರಕಾರಿ ನೌಕರರು ಕನಿಷ್ಠ ಹತ್ತು ವರ್ಷಗಳ ಸೇವೆ ಪೂರ್ಣಗೊಂಡ ಮೇಲೆ ನಿವೃತ್ತಿ ಪಿಂಚಣಿ ಪಡೆಯುವ ಅರ್ಹತೆ ಪಡೆಯುತ್ತಾರೆ. 2006 ಜನವರಿ 1 ರ ನಂತರ ಪಿಂಚಣಿಯನ್ನು ಕಳೆದ ಹತ್ತು ತಿಂಗಳಲ್ಲಿ ಪಡೆದ ಸರಾಸರಿ ವೇತನ ಅಥವಾ ಮೂಲ ವೇತನವನ್ನು ಆಧರಿಸಿ ಕಂಡು ಹಿಡಿಯಲಾಗುತ್ತದೆ. 2006 ಕ್ಕಿಂತ ಪೂರ್ವದಲ್ಲಿ 33 ವರ್ಷಕ್ಕಿಂತ ಪೂರ್ಣಗೊಳ್ಳುವ ಮೊದಲೇ ಸೇವೆಯಿಂದ ನಿವೃತ್ತಿಯಾದವರಿಗೆ ಒಟ್ಟು ಸೇವಾ ಅವಧಿಯಲ್ಲಿ ಅರ್ಧದಷ್ಟು ವರ್ಷವನ್ನು ಕಳೆದು ಪಿಂಚಣಿ ನೀಡಲಾಗುತ್ತಿತ್ತು. ಈ ತಾರತಮ್ಯವನ್ನು ಪ್ರಶ್ನಿಸಿ ಕೇಂದ್ರ ಆಡಳಿತ ನ್ಯಾಯಮಂಡಳಿಗೆ ಸಾಕಷ್ಟು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಬಂದಿದ್ದವು. ಸುಪ್ರೀಂ ಕೋರ್ಟ್ ಸಹ ಈ ತಾರತಮ್ಯದ ಬಗ್ಗೆ ಆಕ್ಷೇಪ ವ್ಯಕ್ಯಪಡಿಸಿತ್ತ

ದೇವರ/ಜೇಡರ ದಾಸಿಮಯ್ಯ:-

ಜನನ ೧೧೬೫ ಸುರಪುರ ತಾಲ್ಲೋಕು ಮುದನೂರು ಅಂಕಿತನಾಮ ರಾಮನಾಥ ಸಂಗಾತಿ(ಗಳು) ದುಗ್ಗಳೆ ಈತನನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೇ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆ/ಸುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನನ್ನೇ ಮೊದಲ ವಚನಕಾರನೆಂದು ಗುರುತಿಸಲಾಗುತ್ತದೆ. ಸುರಪುರ ತಾಲೂಕಿನ ಮುದನೂರು ಗ್ರಾಮದವನಾದ ನೇಕಾರ ದಾಸಿಮಯ್ಯ ತನ್ನ ಸತಿ ದುಗ್ಗಲೆಯೊಂದಿಗೆ ಕಾಯಕವನ್ನೇ ಕೈಲಾಸವಾಗಿಸಿಕೊಡ ಸಾಧಕ. ರಾಮನಾಥ ಎಂಬ ಅಂಕಿತದಲ್ಲಿ ಬರೆಯಲಾದ ಈತನ ಸುಮಾರು ೧೫೦ ವಚನಗಳು ದೊರೆತಿವೆಯೆನ್ನಲಾಗಿದೆ. ಮೊಲೆ ಮೂಡಿ ಬಂದರೆ ಹೆಣ್ಣೆಂಬರು, ಗಡ್ಡ ಮೀಸೆ ಬಂದರೆ ಗಂಡೆಂಬರು, ನಡುವೆ ಸುಳಿಯುವಾತ್ಮನು ಹೆಣ್ಣೂ ಅಲ್ಲ, ಗಂಡೂ ಅಲ್ಲ ರಾಮನಾಥ ಒಡಲುಗೊಂಡವ ಹಸಿವ:ಒಡಲುಗೊಂಡವ ಹುಸಿವ ಒಡಲುಗೊಂಡವನೆಂದು ನೀನೊಮ್ಮೆ ಜರಿದು ನುಡಿಯದಿರು ನೀನೆನ್ನಂತೊಮ್ಮೆ ಒಡಲುಗೊಂಡು ನೋಡಾ ರಾಮನಾಥ ಎಂದು ಸಾರುವಲ್ಲಿ ತೋರಿದ ಜನಪರ ಕಾಳಜಿ ಇಂದಿಗೂ ಆನ್ವಯಿಕ. ಶಿವ ಜಗತ್ತನ್ನೇ ವ್ಯ

"ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ (NET) ಏಪ್ರಿಲ್ 12 ರಿಂದ ಅರ್ಜಿ ಆಹ್ವಾನ"::-

ಪ್ರತಿ ವರ್ಷ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಅಖಿಲ ಭಾರತ ಮಟ್ಟದ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ನೆಟ್‌) ವರ್ಷಕ್ಕೆ ಎರಡು ಬಾರಿ ನಡೆಸಿಕೊಂಡು ಬರುತ್ತಿದೆ. ದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗಳಿಗೆ ಹಾಗೂ ಜೂನಿಯರ್‌ ರಿಸರ್ಚ್ ಫೆಲೋಶಿಪ್‌ ನೇಮಕಾತಿಗಾಗಿ ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ಮಾದರಿಯಲ್ಲಿಯೇ ಈ ಪರೀಕ್ಷೆ ನಡೆಯಲಿದ್ದು, ಯುಜಿಸಿ ಪರವಾಗಿ ಸಿಬಿಎಸ್‌ಇ ಈ ಪರೀಕ್ಷೆಯನ್ನು ನಡೆಸಲಿದೆ. 2016ರ ಜುಲೈ 10ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. * ಹುದ್ದೆಗಳ ವಿವರ: ಆಸಕ್ತ ಅಭ್ಯರ್ಥಿಗಳು ಅಸಿಸ್ಟೆಂಟ್‌ ಪ್ರೊಫೆಸರ್‌ ಮತ್ತು ಜೂನಿಯರ್‌ ರಿಸರ್ಚ್ ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಬಹುದು. ಫೆಲೋಶಿಪ್‌ಗೆ ಆಯ್ಕೆಯಾದವರು ಉನ್ನತ ವ್ಯಾಸಂಗವನ್ನು ಆಯ್ಕೆ ಮಾಡಿಕೊಳ್ಳಬಹುದು ಅಥವಾ ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಯನ್ನೂ ಆಯ್ಕೆ ಮಾಡಿಕೊಳ್ಳಬಹುದು. ಐಐಟಿಗಳು ಮತ್ತು ಇತರೆ ರಾಷ್ಟ್ರೀಯ ಸಂಸ್ಥೆಗಳು ಫೆಲೋಶಿಪ್‌ ನೀಡಲಿದ್ದು, ಇದನ್ನು ಪಡೆಯಲು ಎರಡು ವರ್ಷಗಳ ಕಾಲಾವಕಾಶವಿರುತ್ತದೆ. ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗಾಗಿ ಮಾತ್ರ ನೆಟ್‌ ಪರೀಕ್ಷೆ ಬರೆದವರಿಗೆ ಫೆಲೋಶಿಪ್‌ ನೀಡಲಾಗುವುದಿಲ್ಲ. ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಯಾವುದಕ್ಕೆ ಅರ್ಜಿ ಸಲ್ಲಿಸ

ಯುಗಾದಿ:

ಯುಗಾದಿ ಹಬ್ಬವನ್ನು ಆಚರಿಸುವುದರ ಮಹತ್ವ ಮತ್ತು ಕಾರಣಗಳು ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ 'ಚೈತ್ರ ಶುಕ್ಲ ಪ್ರತಿಪದೆ. 'ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧ ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ. ನೈಸಗಿಕ ಕಾರಣಗಳು: ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ - ಸಂಪಾತದ ಮೇಲೆ ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ) ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತ ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ 'ಕುಸುಮಾಕರಿ ವಸಂತ ಋತುವು ನನ್ನ ವಿಭೂತಿಯಾಗಿದೆ' ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (೧೦:೩೫) ಹೇಳಿದ್ದಾನೆ. ಈ ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ ವಾತಾವರಣವಿರುತ್ತದೆ. ಶಿಶಿರ ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪ್ರತಿಪದೆಯ ಸಮಯದಲ್ಲಿ ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲ

ಗೂಗಲ್ ಸರ್ಚ್ನಲ್ಲಿ ಪ್ರಾಣಿಗಳ ದನಿಯನ್ನೂ ಕೇಳಬಹುದು!:-

ನವದೆಹಲಿ: ಗೂಗಲ್ ಸರ್ಚ್ನಲ್ಲಿ ಪ್ರಾಣಿಗಳ ಚಿತ್ರಗಳನ್ನು ಹುಡುಕಿದರೆ ಕ್ಷಣ ಮಾತ್ರಕ್ಕೆ ಅದರ ಬಗ್ಗೆ ಮಾಹಿತಿ ಸಿಗುತ್ತದೆ. ಆದರೆ ಇದೀಗ ಪ್ರಾಣಿಗಳ ದನಿಯನ್ನೂ ಕೇಳುವಂಥಾ ಸೌಲಭ್ಯವನ್ನು ಗೂಗಲ್ ಒದಗಿಸಿದೆ. ಪ್ರಾಣಿಗಳ ದನಿ ಹೇಗಿರುತ್ತದೆ ಎಂಬುದನ್ನು ಮಕ್ಕಳಿಗೆ ಹೇಳಿಕೊಡುವುದಕ್ಕಾಗಿ ಗೂಗಲ್ ಈ ಸೌಲಭ್ಯವನ್ನು ಒದಗಿಸಿದೆ. ಉದಾಹರಣೆಗೆ ಬಳಕೆದಾರರು ಗೂಗಲ್ ನಲ್ಲಿ ಈ ಪ್ರಾಣಿಯ ದನಿ ಯಾವುದು ಎಂಬ ಪ್ರಶ್ನೆ ಕೇಳಿದರೆ, ಸರ್ಚ್ ಇಂಜಿನ್ ಆ ಪ್ರಾಣಿಯ ಇಲ್ಯುಸ್ಟ್ರೇಷನ್, ಪ್ರಾಣಿಯ ಹೆಸರು ಜತೆ ಆ ಪ್ರಾಣಿಯ ದನಿಯ ಸ್ಯಾಂಪಲ್ ನ್ನೂ ತೋರಿಸುತ್ತದೆ. ವರದಿಗಳ ಪ್ರಕಾರ ಈಗಾಗಲೇ ಗೂಗಲ್ ಸರ್ಚ್ ಇಂಜಿನ್ನಲ್ಲಿ ಜೀಬ್ರಾ, ಕೋತಿ, ಬೆಕ್ಕು, ಸಿಂಹ, ಹಂದಿ, ಆನೆ, ಕುದುರೆ ಮೊದಲಾದ 19 ಪ್ರಾಣಿಗಳ ದನಿ ಲಭ್ಯವಾಗುತ್ತಿದೆ.

ಕಣಿವೆ ರಾಜ್ಯದ ಮೊದಲ ಮಹಿಳಾ ಸಿ .ಎಂ . ಮುಫ್ತಿ:-

ಜಮ್ಮು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು . ರಾಜ್ಯಪಾಲ ಎನ್ . ಎನ್ . ವೋಹ್ರಾ ಅವರು ಪ್ರಮಾಣ ವಚನ ಬೋಧಿಸಿದರು. ಮುಫ್ತಿ ಅವರು ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದಾರೆ . ಇದೇ ವೇಳೆ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರೂ ಪ್ರಮಾಣ ವಚನ ಸ್ವೀಕರಿಸಿದರು . ಕೇಂದ್ರ ಸಚಿವ ಎಂ . ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಮುಖಂಡರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು

ಗುಜರಾತ್ನಲ್ಲಿ ದೇಶದ ಮೊದಲ ಸಾವಯವ ಕೃಷಿ ವಿವಿ.:

ವಡೋದರಾ: ಕೃಷಿಕರನ್ನು ಅಸಂಪ್ರದಾಯಿಕ ಕೃಷಿಯೆಡೆಗೆ ತೆರಳುವಂತೆ ಪ್ರೋತ್ಸಾಹಿಸಲು ಹಾಗೂ ರೈತರ ಸಮಸ್ಯೆ ನಿವಾರಣೆಗೆ ದೇಶದಲ್ಲಿಯೇ ಮೊದಲು ಎನ್ನಬಹುದಾದ ಸಾವಯವ ಕೃಷಿ ವಿಶ್ವವಿದ್ಯಾಲಯ ಗುಜರಾತಿನಲ್ಲಿ ಸ್ಥಾಪನೆಯಾಗುತ್ತಿದೆ. ಇಲ್ಲಿನ ಹೊರವಲಯದಲ್ಲಿ ಹಮ್ಮಿಕೊಂಡಿದ್ದ ರೈತ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಆನಂದಿ ಬೇನ್ ಪಟೇಲ್, 'ರಾಸಾಯನಿಕಯುಕ್ತ ಗೊಬ್ಬರ, ಕ್ರಿಮಿನಾಶಕ ಬಳಸಿ ಕೃಷಿ ಮಾಡುತ್ತಿರುವ ಅನ್ನದಾತರು ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿದ್ದಾರೆ. ಇದನ್ನು ತಡೆಯಲು ಸಾವಯವ ಕೃಷಿ ವಿವಿ ಸ್ಥಾಪಿಸಲಾಗುವುದು,' ಎಂದು ಹೇಳಿದ್ದಾರೆ. ಸಾವಯವ ಕೃಷಿ ವಿವಿ ಸ್ಥಾಪನೆಗಾಗಿ 2016-17ನೇ ಸಾಲಿನ ಬಜೆಟ್ನಲ್ಲಿ 10 ಕೋಟಿ ರೂ. ಅನುದಾನ ನೀಡಲಾಗಿದ್ದು, ವಿವಿ ಸ್ಥಾಪನೆಗೆ ಇನ್ನು ಜಾಗ ಗುರುತು ಮಾಡಿಲ್ಲ ಎಂದು ಗುಜರಾತ್ ಕೃಷಿ ಸಚಿವ ಬಾಬುಭಾಯಿ ಬೋಖಿರಾ ತಿಳಿಸಿದ್ದಾರೆ. ರಾಜ್ಯದ ರಾಜಧಾನಿ ಗಾಂಧಿನಗರದಲ್ಲಿ ಕಾಮಧೇನು ಕೃಷಿ ವಿವಿ ಹತ್ತಿರವೇ ಈ ವಿವಿಗೂ ಸ್ಥಳ ಗುರುತಿಸಬಹುದು ಎನ್ನಲಾಗುತ್ತಿದೆ.

555 ಅರಣ್ಯ ರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Image

ಇ– ಮೇಲ್ ಸೃಷ್ಟಿಕರ್ತ ರೇ ಟಾಮ್ಲಿನ್ಸನ್ ಇನ್ನಿಲ್

Image
ವಾಷಿಂಗ್ಟನ್ ( ಎಎಫ್ಪಿ) : ಇ – ಮೇಲ್ ಆಧುನಿಕ ಸೃಷ್ಟಿಕರ್ತ ಎಂಬ ಕೀರ್ತಿಗೆ ಪಾತ್ರರಾಗಿದ್ದ ರೇ ಟಾಮ್ಲಿನ್ಸನ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು . ಯೂಸರ್ನೆಟ್ ಜತೆಗೆ @ ಸಂಕೇತವನ್ನು ಬಳಸಿದ ಮೊದಲಿಗ ಎಂಬ ಕೀರ್ತಿ ಕೂಡ ರೇ ಅವರದ್ದು. ಟಾಮ್ಲಿನ್ಸನ್ ಅವರು ಇ – ಮೇಲ್ಗೂ ಮೊದಲು 1971 ರಲ್ಲಿ ಸೀಮಿತ ನೆಟ್ವರ್ಕ್ ಅಡಿಯಲ್ಲಿ ಬೇರೆ – ಬೇರೆ ಯಂತ್ರಗಳ ಮೂಲಕ ಎಲೆಕ್ಟ್ರಾನಿಕ್ ಸಂದೇಶ ಕಳುಹಿಸುವ ವ್ಯವಸ್ಥೆಯನ್ನು ಕಂಡು ಹಿಡಿದಿದ್ದರು . ಅದಕ್ಕೂ ಮೊದಲು ಒಂದೇ ಗಣಕಯಂತ್ರ ಬಳಸಿ ಸಂದೇಶ ಕಳುಹಿಸುವ ಸೌಲಭ್ಯ ಮಾತ್ರವೇ ಜಾರಿಯಲ್ಲಿತ್ತು . ' ನೆಟ್ವರ್ಕ್ ಕಂಪ್ಯೂಟರ್ಗಳ ಕಾಲದ ಆರಂಭಿಕ ದಿನಗಳಲ್ಲಿ ಮೇಲ್ ಪರಿಚಯಿಸಿದ ರೇ ಅವರು ತಂತ್ರಜ್ಞಾನದ ನಿಜವಾದ ಆದಿಶೋಧಕ. ಅವರ ಕೊಡುಗೆ ವಿಶ್ವದ ಸಂವಹನವನ್ನು ಬದಲಿಸಿದೆ ' ಎಂದು ರೇಥೆಯಾನ್ ಕಂಪೆನಿ ಪ್ರಕಟಣೆಯಲ್ಲಿ ತಿಳಿಸಿದೆ . ಟಾಮ್ಲಿನ್ಸನ್ ಅವರು ಶನಿವಾರ ವಿಧಿವಶರಾಗಿದ್ದಾರೆ ಎಂದು ರೇಥೆಯಾನ್ ಕಂಪೆನಿ ವಕ್ತಾರ ತಿಳಿಸಿದ್ದಾರೆ . ಆದರೆ, ಅವರ ಸಾವಿಗೆ ಕಾರಣ ಮಾತ್ರ ಇನ್ನಷ್ಟೇ ತಿಳಿಯಬೇಕಿದೆ . ರೇ ಅವರ ನಿಧನಕ್ಕೆ ಆನ್ಲೈನ್ ಜಗತ್ತು ಕಂಬನಿ ಮಿಡಿದಿದೆ . ' ಇಮೇಲ್ ಸಂಶೋಧನೆ ಮಾಡಿದ್ದಕ್ಕಾಗಿ ಹಾಗೂ @ ಸಂಕೇತವನ್ನು ಯೂಸರ್ನೇಮ್ ಬೆಸದಿದ್ದಕ್ಕೆ ಧನ್ಯವಾದಗಳು ರೇ ಟಾಮ್ಲಿನ್ಸನ್' ಎಂದು ಇಂ

India win two gold medals in World Table Tennis team championships:-

KUALA LUMPUR: Indian men's and women's team scripted history by clinching the gold medals at the World Table Tennis Team Championships with superb victories over Luxemburg and Brazil respectively on Saturday. . . Indian eves beat Luxemburg 3-1 in the event final of the Second Division, while their male counterparts overcame a stiff Brazil 3-2 here. . . India had sealed their entry in the Champions Division last night after reaching the finals.